×
Ad

ರಸ್ತೆ ಅಪಘಾತ: ಬೈಕ್‌ ಸವಾರ ಮೃತ್ಯು

Update: 2024-08-31 20:31 IST

ಭಟ್ಕಳ : ಲಾರಿಗೆ ಹಿಂಬಂದಿಯಿಂದ ಢಿಕ್ಕಿ ಹೊಡೆದ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮುರುಡೇಶ್ವರದ ಆರ್.ಎನ್.ಎಸ್. ಆಸ್ಪತ್ರೆ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.

ಮೃತ ಬೈಕ್ ಸವಾರನನ್ನು ಶಿರಾಲಿ ನಿವಾಸಿ ನಾರಾಯಣ ಸುಕ್ರಪ್ಪ (42) ಎಂದು ಗುರುತಿಸಲಾಗಿದೆ.

ಇವರು ಭಟ್ಕಳ ಕಡೆಯಿಂದ ಹೊನ್ನಾವರ ಕಡೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು ಅದೇ ದಾರಿಯಲ್ಲಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ನಾರಾಯಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News