×
Ad

ಶಿರಸಿ: ಬಸ್-ಕಾರು ನಡುವೆ ಭೀಕರ ಅಪಘಾತ; ಮಂಗಳೂರಿನ ನಾಲ್ವರು ಸಹಿತ 5 ಮಂದಿ ಮೃತ್ಯು

Update: 2023-12-08 23:04 IST

ಶಿರಸಿ, ಡಿ.8: ಬಸ್ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಐವರು ಮೃತಪಟ್ಟ ಘಟನೆ ಶಿರಸಿ ತಾಲೂಕಿನ ಕುಮಟಾ-ಶಿರಸಿ ಹೆದ್ದಾರಿಯ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಬಳಿ ಶುಕ್ರವಾರ ವರದಿಯಾಗಿದೆ.

ಅಪಘಾತದಿಂದ ಕಾರಿನಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಒಂದೇ ಕುಟುಂಬದ ನಾಲ್ವರು ಹಾಗೂ ಚೆನ್ನೈ ಮೂಲದ ಕಾರು ಚಾಲಕ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರು ತಾಲೂಕಿನ ಕಿನ್ನಿಕಂಬಳದ ರಾಮಕೃಷ್ಣರಾವ್ ಬಾಬುರಾವ್ (71), ವಿದ್ಯಾಲಕ್ಷ್ಮೀ (67) ಪುಷ್ಪಾ ಮೋಹನ ರಾವ್ (62), ಸುಹಾಸ ಗಣೇಶ್ ರಾವ್ (30) ಹಾಗೂ ಚೆನ್ನೈನ ಅರವಿಂದ (45) ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿರಸಿ ಕಡೆಯಿಂದ ಕುಮಟಾಕ್ಕೆ ಹೋಗುತ್ತಿದ್ದ ಬಸ್ ಹಾಗೂ ಕುಮಟಾ ಕಡೆಯಿಂದ ಶಿರಸಿ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಢಿಕ್ಕಿ ಸಂಭವಿಸಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಶಿರಸಿಯಲ್ಲಿ ಮದುವೆ ಸಮಾರಂಭಕ್ಕೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬಸ್‌ ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 


 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News