ವಿಜಯನಗರ| ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ಪ್ರಕರಣ ದಾಖಲು
Update: 2025-12-10 19:13 IST
ಸಾಂದರ್ಭಿಕ ಚಿತ್ರ
ವಿಜಯನಗರ: ಕಮಲಾಪುರದ ಹೆಚ್ಪಿಸಿ ಬಳಿ ಇರುವ ಪೋರ್ವೇ ಕಾಲುವೆ ನೀರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ವ್ಯಕ್ತಿಯು 40 ರಿಂದ 45ರ ಹರೆಯದವಾಗಿದ್ದು, 5.7 ಅಡಿ ಎತ್ತರವನ್ನು ಹೊಂದಿದ್ದಾರೆ. ದೃಢವಾದ ಮೈಕಟ್ಟು ಹೊಂದಿದ್ದು, ಎಡಗೈ ಮೇಲೆ ಶ್ರೀ ಮಂಜುನಾಥ ಎಂದು ಕನ್ನಡದಲ್ಲಿ ಹಚ್ಚೆ ಗುರುತು ಹಾಕಿಸಿಕೊಂಡಿದ್ದಾರೆ.
ಈ ಅನಾಮಧೇಯ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದಲ್ಲಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ಮೊಬೈಲ್ ಸಂಖ್ಯೆ 9480805700, ಜಿಲ್ಲಾ ಎಸ್.ಪಿ ಮೊಬೈಲ್ ಸಂಖ್ಯೆ 948805701, ಹೆಚ್ಚುವರಿ ಎಸ್.ಪಿ ಮೊಬೈಲ್ ಸಂಖ್ಯೆ 9480805702, ಡಿಎಸ್ಪಿ ಮೊಬೈಲ್ ಸಂಖ್ಯೆ 9480805720 ಸಂಪರ್ಕಿಸಬೇಕಾಗಿ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.