×
Ad

ವಿಜಯನಗರ | ಬಾಲಕ ನಾಪತ್ತೆ : ಪ್ರಕರಣ ದಾಖಲು

Update: 2025-04-29 22:36 IST

ವಿಜಯನಗರ(ಹೊಸಪೇಟೆ) : ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು 15 ವರ್ಷದ ವರುಣ್‌ ಕುಮಾರ್ (ಹೊನ್ನೂರ್) ಎಂಬ ಬಾಲಕ ನಾಪತ್ತೆಯಾಗಿರುವ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಕ್ತಿ ಚಹರೆ :

ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡುಮುಖ, 4.5 ಅಡಿ ಎತ್ತರ, ನೀಲಿ ಚುಕ್ಕಿ ಇರುವ ಅಂಗಿ ಕಂದು ಬಣ್ಣದ ಚಡ್ಡಿ ಧರಿಸಿರುತ್ತಾನೆ. ಕನ್ನಡ ಭಾಷೆ ಮಾತನಾಡುತ್ತಾನೆ. ಎ.27 ರಂದು ಮನೆಯಿಂದ ಕಾಣೆಯಾಗಿದ್ದಾರೆ.

ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಹೊಸಹಳ್ಳಿ ಪೊಲೀಸ್ ಠಾಣೆಗೆ ಅಥವಾ ಇಮೇಲ್ : hosahallivjn@gmail.com ಅಥವಾ ಮೊ.8073276896 ಗೆ ಮಾಹಿತಿ ನೀಡುವಂತೆ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News