×
Ad

ವಿಜಯನಗರ | ವ್ಯಕ್ತಿ ಕಾಣೆ : ಪ್ರಕರಣ ದಾಖಲು

Update: 2025-09-08 20:01 IST

ವಿಜಯನಗರ (ಹೊಸಪೇಟೆ) : ಹೊಸಪೇಟೆ ನಗರದ ಚಿತ್ತವಾಡ್ಗಿ ನಿವಾಸಿ 43 ವರ್ಷದ ಈರಣ್ಣ ಎಂಬ ವ್ಯಕ್ತಿಯು ಮನೆಯಿಂದ ಕೆಲಸಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವರು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದು, ಚಿತ್ತವಾಡ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾದ ವ್ಯಕ್ತಿಯ ಚಹರೆ : 5.7 ಅಡಿ ಎತ್ತರ, ದುಂಡು ಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ತಿಳಿ ನೀಲಿ ಬಣ್ಣದ ತುಂಬು ತೋಳಿನ ಅಂಗಿ, ಕಡು ನೀಲಿ ಬಣ್ಣದ ಪ್ಯಾಂಟ್ ನ್ನು ಧರಿಸಿರುತ್ತಾನೆ. ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ.

ಈ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಿಲ್ಲಿ ಚಿತ್ತವಾಡ್ಗಿ ಪೊಲೀಸ್ ಠಾಣೆ ಪಿಐ ಮೊ.9480805733, 9480805757 ದೂ. 08394228543, ಡಿಎಸ್ ಪಿ ದೂ.08394224204 ಎಸ್ ಪಿ ಮೊ. 9480805700 ಕರೆ ಮಾಡಿ ಮಾಹಿತಿ ನೀಡುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News