×
Ad

ವಿಜಯನಗರ | ಮಾನಸಿಕ ಅಸ್ವಸ್ಥೆಯನ್ನು ಬೆತ್ತಲೆಗೊಳಿಸಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ

Update: 2024-08-31 20:02 IST

ವಿಜಯನಗರ : ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಾನಸಿಕ‌ ಅಸ್ವಸ್ಥೆಯನ್ನು ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಬಳಿಯ ತಿಪ್ಪೇಹಳ್ಳಿಯಲ್ಲಿ ವರದಿಯಾಗಿದೆ.

ಹತ್ಯೆಯಾದ ಮಹಿಳೆಯನ್ನು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಅಬ್ಬೇನಹಳ್ಳಿಯ ನೇತ್ರಾ(30) ಎಂದು ಗುರುತಿಸಲಾಗಿದೆ. ಮಹಿಳೆಯನ್ನು ಬೆತ್ತಲೆಗೊಳಿಸಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ತಿಪ್ಪೇಹಳ್ಳಿ- ಅಬ್ಬೇನಹಳ್ಳಿ ಮಧ್ಯದ ನಿರ್ಜನ ಪ್ರದೇಶದಲ್ಲಿ ಹತ್ಯೆ ಮಾಡಲಾಗಿದ್ದು, ಸ್ಥಳಕ್ಕೆ ವಿಜಯನಗರ ಎಸ್​.ಪಿ ಶ್ರೀಹರಿಬಾಬು ಹಾಗೂ ಶ್ವಾನದಳ, ಬೆರಳಚ್ಚು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾನಾಹೊಸಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News