×
Ad

Vijayanagara | ಸಂಸ್ಕಾರಯುತ ಶಿಕ್ಷಣದಿಂದಲೇ ಉಜ್ವಲ ಭವಿಷ್ಯ: ಎಎಸ್‌ಐ ಕೊಟ್ಟೂರೇಶ್ವರ

Update: 2026-07-14 19:42 IST

ಕೊಟ್ಟೂರು (ವಿಜಯನಗರ) : ಆಧುನಿಕ ಯುಗದಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರವೂ ಅಷ್ಟೇ ಮುಖ್ಯವಾಗಿದ್ದು, ಸಂಸ್ಕಾರಯುತ ಶಿಕ್ಷಣವೇ ಉತ್ತಮ ಸಮಾಜ ನಿರ್ಮಾಣಕ್ಕೆ ಪೂರಕವಾಗುತ್ತದೆ ಎಂದು ಎಎಸ್‌ಐ ಜಿ. ಕೊಟ್ಟೂರೇಶ್ವರ ಹೇಳಿದರು.

ಪಟ್ಟಣದ ಡೆಲ್ಲಿ ವರ್ಲ್ಡ್ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ನಡೆದ ಶಾಲಾ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಶಾಲಾ ಸಂಸತ್ ಚುನಾವಣೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಂಸ್ಕಾರವಿಲ್ಲದ ಶಿಕ್ಷಣಕ್ಕೆ ಭವಿಷ್ಯವಿಲ್ಲ. ಆದ್ದರಿಂದ ಪಾಲಕರು ಮತ್ತು ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನೂ ನೀಡಬೇಕು. ಆಗ ಮಾತ್ರ ಮಕ್ಕಳು ಜವಾಬ್ದಾರಿಯುತ ಹಾಗೂ ಹೃದಯವಂತ ನಾಗರಿಕರಾಗಿ ಬೆಳೆಯಲು ಸಾಧ್ಯ ಎಂದು ಹೇಳಿದರು.

ಸಂಸ್ಥೆಯ ಕಾರ್ಯದರ್ಶಿ ಪುಷ್ಪರಾಜ್ ಮಾತನಾಡಿ, ವಿದ್ಯಾರ್ಥಿಗಳು ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ಬದುಕು ರೂಪಿಸಿಕೊಳ್ಳಬೇಕು. ಶಿಸ್ತು, ಸಮಯಪಾಲನೆ ಹಾಗೂ ಗುರಿ ಸಾಧಿಸುವ ಮನೋಭಾವ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಚಾರ್ಯೆ ವಿ.ಡಿ.ಪುಷ್ಪಲತಾ, ಶಿಕ್ಷಕರಾದ ಶಂಕರ್, ಕುಮಾರ್, ಕುಲ್ಸುಮ್, ತಾಸಿನ್ ಬಾನು, ರೇಖಾ, ಸುಧಾ, ಪವಿತ್ರ, ಮಮತಾ, ಸಾಧನ, ಸಹನಾ, ಅರ್ಪಿತ, ಶಿವ (ಕ್ಲರ್ಕ್), ಕಿರಣ್, ನವೀನ್ ಸೇರಿದಂತೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News