×
Ad

ವಿಜಯನಗರ | ಎತ್ತಿನ ಬಂಡಿಗೆ ಬೈಕ್ ಢಿಕ್ಕಿ : ಸ್ಥಳದಲ್ಲೇ ಇಬ್ಬರು ಮೃತ್ಯು

Update: 2025-12-25 23:38 IST

ಸಾಂದರ್ಭಿಕ ಚಿತ್ರ

ವಿಜಯನಗರ : ಎತ್ತಿನ ಬಂಡಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರಿಬ್ಬರು ಮೃತಪಟ್ಟ ಘಟನೆ ಹರಪನಹಳ್ಳಿ ತಾಲೂಕಿನ ಸಾಸಿವೆಹಳ್ಳಿ-ಹುಣಸಿಹಳ್ಳಿ ಹತ್ತಿರ ನಡೆದಿದೆ ಎಂದು ವರದಿಯಾಗಿದೆ.

ಮೃತರನ್ನು ಶಿವಕುಮಾರ್ ( 37) ರವಿಕುಮಾರ್ (41) ಎಂದು ಗುರುತಿಸಲಾಗಿದೆ.

ಘಟನೆಯ ಮಾಹಿತಿ ಪಡೆದ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಹಾಗೂ ಹರಪನಹಳ್ಳಿ ಡಿವೈಎಸ್ಪಿ ಡಾ. ಸಂತೋಷ್ ಚೌವ್ಹಾಣ್ ಅವರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಚಿಗಟೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News