Vijayanagara | ಹಡಪದ ಅಪ್ಪಣ್ಣನವರ ಜಯಂತಿ ಅರ್ಥಪೂರ್ಣ ಆಚರಣೆಗೆ ಸಿದ್ಧತೆ

Update: 2026-07-24 23:10 IST

ಕೂಡ್ಲಿಗಿ (ವಿಜಯನಗರ): ಜುಲೈ 29ರಂದು ನಡೆಯಲಿರುವ ಶ್ರೀ ಹಡಪದ ಅಪ್ಪಣ್ಣನವರ ಜಯಂತಿಯನ್ನು ತಾಲೂಕು ಮಟ್ಟದಲ್ಲಿ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ತಾಲೂಕು ಆಡಳಿತ ಕಚೇರಿ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

ಗ್ರೇಡ್-2 ತಹಶೀಲ್ದಾರ್ ರಾಮಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲೂಕು ಆಡಳಿತ ಸೌಧ, ಶಾಲೆ-ಕಾಲೇಜುಗಳು, ಗ್ರಾಮ ಪಂಚಾಯಿತಿಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಜಯಂತಿ ಆಚರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೆ. ವೆಂಕಟೇಶ್ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಶಿಸ್ತುಬದ್ಧವಾಗಿ ಜಯಂತಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ, ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲು ತೀರ್ಮಾನಿಸಲಾಯಿತು. ಸಮಾಜದ ಮುಖಂಡರು ಹಡಪದ ಅಪ್ಪಣ್ಣನವರ ಸಮಾನತೆ, ಶ್ರಮ, ಕಾಯಕ ಮತ್ತು ಸಾಮಾಜಿಕ ನ್ಯಾಯದ ಸಂದೇಶವನ್ನು ಯುವಜನರಿಗೆ ತಲುಪಿಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟರು.

ಜಯಂತಿ ಅಂಗವಾಗಿ ಊಟೋಪಹಾರ ವ್ಯವಸ್ಥೆ, ವೇದಿಕೆ ಕಾರ್ಯಕ್ರಮ ಹಾಗೂ ಉಪನ್ಯಾಸಕರ ಆಯ್ಕೆ ಕುರಿತು ವಿವಿಧ ಮುಖಂಡರು ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ಪಂಚಾಯತ್ ರಾಜ್ ಮುಖ್ಯಾಧಿಕಾರಿ ದಾದಪೀರ್, ಕೋಟೇಶ, ಬಿಇಒ ಕಚೇರಿಯ ಸಿಆರ್ಪಿ ಶಿವಕುಮಾರ, ಕರ್ನಾಟಕ ರಕ್ಷಣಾ ವೇದಿಕೆಯ ಕಾಟೇರ ಹಾಲೇಶ, ಸಮಾಜದ ಹಿರಿಯ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News