×
Ad

Vijayanagara | ಮಾಜಿ ಸಚಿವ ಎನ್.ಎಂ.ನಬಿ ಸಾಹೇಬ್‌ಗೆ ಎಸ್‌ಐಆರ್ ಎನ್ಯುಮರೇಷನ್ ಫಾರ್ಮ್ ವಿತರಣೆ

Update: 2026-07-01 21:25 IST

ಕೂಡ್ಲಿಗಿ/ವಿಜಯನಗರ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದ ಅಂಗವಾಗಿ ತಹಶೀಲ್ದಾರ್ ಕೆ.ವಿ.ನೇತ್ರಾವತಿ ಅವರು ಮಾಜಿ ಸಚಿವ ಎನ್.ಎಂ.ನಬಿ ಸಾಹೇಬ್ ಅವರಿಗೆ ಎನ್ಯುಮರೇಷನ್ ಫಾರ್ಮ್ ವಿತರಿಸಿದರು.

ಈ ಸಂದರ್ಭದಲ್ಲಿ ವಾರ್ಡ್‌ನ ಬಿಎಲ್‌ಒಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ನಾಗರಿಕರು ಸಕ್ರಿಯವಾಗಿ ಭಾಗವಹಿಸಿ ಅಗತ್ಯ ಮಾಹಿತಿಯನ್ನು ಒದಗಿಸುವಂತೆ ಅಧಿಕಾರಿಗಳು ಮನವಿ ಮಾಡಿದರು.

ಮಾಜಿ ಸಚಿವ ಎನ್.ಎಂ. ನಬಿ ಸಾಹೇಬ್ ಮಾತನಾಡಿ, ಮತದಾನದ ಹಕ್ಕು ಪ್ರಜಾಪ್ರಭುತ್ವದ ಮೂಲಾಧಾರವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ತಹಶೀಲ್ದಾರ್ ಕೆ.ವಿ. ನೇತ್ರಾವತಿ ಮಾತನಾಡಿ, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುತ್ತಿದ್ದು, ಹೊಸ ಮತದಾರರ ನೋಂದಣಿ, ಮತದಾರರ ವಿವರಗಳ ಪರಿಶೀಲನೆ ಹಾಗೂ ನಕಲಿ ಹೆಸರುಗಳ ತೆರವುಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಸ್ಥಳೀಯರು ಈ ಅಭಿಯಾನವನ್ನು ಸ್ವಾಗತಿಸಿದ್ದು, ಮತದಾರರ ಪಟ್ಟಿಯ ಶುದ್ಧೀಕರಣ ಹಾಗೂ ಪಾರದರ್ಶಕ ಚುನಾವಣಾ ಪ್ರಕ್ರಿಯೆಗೆ ಎಸ್‌ಐಆರ್ ಮಹತ್ವದ ಹೆಜ್ಜೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News