×
Ad

Vijayanagara | ಮತದಾರರ ಪಟ್ಟಿ ಪರಿಷ್ಕರಣೆ : ಬಿಎಲ್‌ಒಗಳ ಕಾರ್ಯವೈಖರಿ ಪರಿಶೀಲಿಸಿದ ತಹಶೀಲ್ದಾರ್

Update: 2026-07-02 18:40 IST

ಕೂಡ್ಲಿಗಿ/ವಿಜಯನಗರ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ–2026 (SIR) ಪ್ರಕ್ರಿಯೆಯ ಅಂಗವಾಗಿ ತಹಶೀಲ್ದಾರ್ ಹಾಗೂ ದಂಡಾಧಿಕಾರಿ ಕೆ.ವಿ. ನೇತ್ರಾವತಿ ಅವರು ಪಟ್ಟಣದ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ ಬೂತ್ ಮಟ್ಟದ ಅಧಿಕಾರಿಗಳ (BLO) ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು.

ಕ್ಷೇತ್ರ ಮಟ್ಟದಲ್ಲಿ ಮನೆ-ಮನೆಗೆ ತೆರಳಿ ನಡೆಯುತ್ತಿರುವ ಮತದಾರರ ಪರಿಶೀಲನೆ ಮತ್ತು ಮಾಹಿತಿ ಸಂಗ್ರಹ ಕಾರ್ಯದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಪ್ರಜಾಪ್ರಭುತ್ವದ ಅಸ್ತಿಭದ್ರತೆಯನ್ನು ಬಲಪಡಿಸುವ ಮಹತ್ವದ ಪ್ರಕ್ರಿಯೆಯಾಗಿದ್ದು, ಇದನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ತಿಳಿಸಿದರು.

“ಯಾವೊಬ್ಬ ಅರ್ಹ ಮತದಾರನ ಹೆಸರೂ ಪಟ್ಟಿಯಿಂದ ಕೈಬಿಡದಂತೆ ಎಚ್ಚರಿಕೆ ವಹಿಸಬೇಕು. ಪರಿಷ್ಕರಣೆ ನಮೂನೆಗಳಲ್ಲಿ ಮಾಹಿತಿಯನ್ನು ದಾಖಲಿಸುವ ವೇಳೆ ನಿಖರತೆ ಮತ್ತು ಪಾರದರ್ಶಕತೆಗೆ ಹೆಚ್ಚಿನ ಆದ್ಯತೆ ನೀಡಬೇಕು” ಎಂದು ಬಿಎಲ್‌ಒಗಳಿಗೆ ಸೂಚನೆ ನೀಡಿದರು.

ವಿಶೇಷ ಸಮಗ್ರ ಪರಿಷ್ಕರಣೆ–2026ರ ಯಶಸ್ಸಿಗೆ ಅಧಿಕಾರಿಗಳ ನಿರಂತರ ಮೇಲ್ವಿಚಾರಣೆ ಮತ್ತು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ದೋಷರಹಿತ ಮತದಾರರ ಪಟ್ಟಿಯ ಮೂಲಕ ಚುನಾವಣಾ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕಗೊಳಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.

ಈ ಸಂದರ್ಭದಲ್ಲಿ ತಾಲೂಕು ಚುನಾವಣಾ ಕಚೇರಿಯ ಸಿಬ್ಬಂದಿ ಹಾಗೂ ಸ್ಥಳೀಯ ಸಾರ್ವಜನಿಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News