ವಿಜಯಪುರ: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು
Update: 2025-09-03 11:28 IST
ವಿಜಯಪುರ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಸಾಗಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಗರದ ಗಾಂಧಿ ವೃತ್ತದಲ್ಲಿ ಬುಧವಾರ ನಸುಕಿನ ವೇಳೆ ಸಂಭವಿಸಿದೆ.
ನಗರದ ಶುಭಂ ಸಂಕಪಾಳ್(21) ಮೃತ ಯುವಕ. ನಗರದ ಗಾಂಧಿ ಚೌಕ್ ಠಾಣಾ ವ್ಯಾಪ್ತಿಯ ಡೋಬಳೆ ಗಲ್ಲಿಯ ಗಣಪತಿ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಕೋಲಿನಿಂದ ವಿದ್ಯುತ್ ತಂತಿ ಎತ್ತುವ ವೇಳೆ ವಿದ್ಯುತ್ ಶಾಕ್ನಿಂದ ಈತ ಮೃತಪಟ್ಟಿದ್ದಾನೆ.
ಪ್ರಭಾಕರ ಜಂಗಲೆ (22) ಹಾಗೂ ಲಖನ್ ಚವ್ಹಾಣ್ (28) ಎಂಬ ಇಬ್ಬರು ಗಾಯಾಳುಗಳು ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.