×
Ad

ಯಾದಗಿರಿಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ : ಶಾಸಕ ಚೆನ್ನಾರೆಡ್ಡಿ ಪಾಟೀಲ್

Update: 2026-06-20 21:23 IST

ಯಾದಗಿರಿ: ಒಂದೇ ಸೂರಿನಡಿ ವ್ಯಾಪಕ ಶ್ರೇಣಿಯ ವೈದ್ಯಕೀಯ ಸೇವೆಗಳನ್ನು ನೀಡುವ ರೂ. 100 ಕೋಟಿ ವೆಚ್ಚದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ತಿಳಿಸಿದ್ದಾರೆ. 

ಮುಖ್ಯಮಂತ್ರಿ ಆಗಿದ್ದಾಗ ಸಿದ್ಧರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಯಾದಗಿರಿಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ 100 ಕೋಟಿ ರೂ.ಮೀಸಲಿಟ್ಟಿದ್ದರು. ಇಂದು ಜರುಗಿದ ಕ್ಯಾಬಿನೆಟ್‌ನಲ್ಲಿ ಸಿಎಂ ಶಿವಕುಮಾರ್ ಅವರು ಆಸ್ಪತ್ರೆಗೆ ಅನುದಾನ ಬಿಡುಗಡೆ ಮಾಡಲು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. 

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯು ಸುಧಾರಿತ ರೋಗ ನಿರ್ಣಯ ಮತ್ತು ಅತ್ಯಾಧುನಿಕ ಚಿಕಿತ್ಸೆಗಳಿಗೆ ತಡೆ ರಹಿತ ಪ್ರವೇಶವನ್ನು ಒದಗಿಸುತ್ತದೆ. ತಜ್ಞರಿಂದ ಆರೈಕೆ ಮತ್ತು ಚಿಕಿತ್ಸೆಯ ಅಗತ್ಯಕ್ಕೆ ಶ್ರೇಷ್ಠತೆಯ ಕೇಂದ್ರವಾಗಲಿದೆ. ಜಿಲ್ಲೆಯ ಜನತೆಗೆ ಹೊರ ಜಿಲ್ಲೆ,ರಾಜ್ಯಗಳಿಗೆ ಅಲೆದಾಡುವುದು ತಪ್ಪಲಿದೆ. ಶೀಘ್ರದಲ್ಲೇ ಸಿಎಂ ಜೊತೆ ಚರ್ಚಿಸಿ ಆಸ್ಪತ್ರೆಗೆ ಸ್ಥಾಪನೆಗೆ ಕ್ರಮ ವಹಿಸಲಾಗುವುದು. ಈಗಾಗಲೇ ಬಹು ದಿನಗಳ ಬೇಡಿಕೆಗೆ ಸ್ಪಂದಿಸಿದ ನಮ್ಮ ಸರ್ಕಾರ ಜಿಲ್ಲಾಸ್ಪತ್ರೆಯಲ್ಲಿ ಎಮ್‌ಆರ್‌ಐ ಸ್ಕ್ಯಾನಿಂಗ್‌ ಸೆಂಟರ್ ಆರಂಭಿಸಲು ಎಲ್ಲಾ ತಯ್ಯಾರಿ ಮಾಡಿಕೊಂಡಿದೆ. ಇನ್ನೂ ಒಂದು ತಿಂಗಳಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಆರಂಭವಾಗಲಿದೆ ಎಂದು ಶಾಸಕರು ತಿಳಿಸಿದ್ದಾರೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News