ಯಾದಗಿರಿಯಲ್ಲಿ ಅನೈತಿಕ ಪೊಲೀಸ್ ಗಿರಿ ; ಯುವಕನ ಮೇಲೆ ಸಂಘಪರಿವಾರದ ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ ಆರೋಪ

Update: 2024-03-20 18:12 GMT

ಯಾದಗಿರಿ : ಕರಾವಳಿ ಬಳಿಕ ಇದೀಗ ಯಾದಗಿರಿಯಲ್ಲಿ ಅನೈತಿಕ ಪೊಲೀಸ್ ಗಿರಿ ಪ್ರಕರಣ ದಾಖಲಾಗಿದ್ದು, ಯುವಕನನ್ನು ಸಂಘಪರಿವಾರದ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.

ಯಾದಗಿರಿ ನಗರದ ಯುವಕನೊಬ್ಬ ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಸಂಘಪರಿವಾರದ ಕಾರ್ಯಕರ್ತರು ಯುವಕನನ್ನು ಕಿಡ್ನಾಪ್ ಮಾಡಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಎರಡು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯುವಕ ಕಾಲೇಜಿನಿಂದ ವಾಪಸ್ ಬರುವಾಗ ಒಂಭತ್ತು ಜನರ ಗುಂಪು ಯುವಕನನ್ನು ಅಪಹರಿಸಿ ಸತತ ಐದು ಗಂಟೆಗಳ ಕಾಲ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಘಟನೆ ಸಂಬಂಧ ಯುವಕನ ಪೋಷಕರು ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News