×
Ad

ಯಾದಗಿರಿಯಲ್ಲಿ ಹೊರಗುತ್ತಿಗೆ ನೌಕರರ ಸಮಾವೇಶ

Update: 2025-10-26 18:54 IST

ಯಾದಗಿರಿ: ಕಳೆದ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ನೌಕರರ ಸೇವೆ ಖಾಯಂ ಮಾಡಬೇಕೆಂದು ಸರಕಾರಿ ಹೊರಗುತ್ತಿಗೆ ಸಂಘದ ರಾಜ್ಯ ಅಧ್ಯಕ್ಷ ಸುಧಾಕರ್ ಹೇಳಿದರು.

ನಗರದ ಚಾಮಾ ಫಂಕ್ಷನ್ ಹಾಲ್ ನಲ್ಲಿ ಸರಕಾರಿ ಹೊರಗುತ್ತಿಗೆ ನೌಕರರ ಸಂಘ ಜಿಲ್ಲಾ ಘಟಕದ ಯಾದಗಿರಿ ಜಿಲ್ಲಾ ಮತ್ತು ತಾಲೂಕ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜ್ಯದ ಬಹುತೇಕ ಇಲಾಖೆಗಳಲ್ಲಿ ಹೊರಗುತ್ತಿಗೆ ನೌಕರರೇ ಕೆಲಸದಲ್ಲಿ‌ ಇದ್ದು, ದುಡಿಮೆ ತಕ್ಕ ವೇತನವಿಲ್ಲ. ಖಾಯಂ ನೌಕರರಿಗೆ ಸಿಗುವ ಯಾವುದೇ ಸೌಲಭ್ಯಗಳು ನಮಗಿಲ್ಲ. ಆದರೂ ಹೇಳಿದ ಕೆಲಸ ಮಾಡುವ ಮೂಲಕ ಅಭಿವೃದ್ಧಿಗೆ ಕೈಜೋಡಿಸುತ್ತಿದ್ದೆವೆ ಎಂದು ವಿವರಿಸಿದರು.

ಕಾರಣ, ಸರ್ಕಾರ ಮೊದಲು ನಮ್ಮ ಸೇವೆ ಖಾಯಂ ಮಾಡಿ, ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿದರು.

ಸರಕಾರಿ ಹೊರಗುತ್ತಿಗೆ ಸಂಘದ ಜಿಲ್ಲಾಧ್ಯಕ್ಷ ರೇಖಾ ಎಸ್ ಮುತ್ತಗಿ ಮಾತನಾಡಿ, ಇಂತಿಷ್ಟು ವರ್ಷಗಳ ಕಾಲ ಸೇವೆ ಮಾಡಿದರೇ ಅಂತಹವರಿಗೆ ಖಾಯಂ ಮಾಡಿಕೊಳ್ಳಬೇಕೆಂಬ ನಿಯಮವಿದ್ದರೂ, ಇದನ್ನು ಸಂಬಂಧಪಟ್ಟ ಇಲಾಖೆಯವರು ಗಮನ ಹರಿಸುತ್ತಿಲ್ಲ. ಕಡಿಮೆ ಸಂಬಂಳದಿಂದ ಸಂಸಾರ ನಡೆಸುವುದು ಕಷ್ಟವಾಗುತ್ತಿದೆ. ಸರ್ಕಾರ ನಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕೆಂದರು.

ಸರಕಾರಿ ಹೊರಗುತ್ತಿಗೆ ಸಂಘದ ರಾಜ್ಯ ಸಂಚಾಲಕ ಗಂಗಾಧರ್ ಎನ್., ರಾಜ್ಯ ಸರ್ಕಾರಿ ನೌಕರರ ಸಂಘದ ವಿಭಾಗೀಯ ಉಪಾಧ್ಯಕ್ಷ ಸಂತೋಷ ನಿರಟಿ ಮಾತನಾಡಿದರು.

ಈ‌ ಸಂದರ್ಭದಲ್ಲಿ ಹಿರಿಯ ವಕೀಲರಾದ ಬಿ.ವೈ.ಪಾಟೀಲ್, ಸಾವಿತ್ರಿ ಎಸ್.ಪಾಟೀಲ್, ಸರ್ಕಾರಿ ಎಸ್ ಸಿ ಎಸ್ ಟಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಎಮ್.ನಾಟೇಕರ್, ಸುನೀಲ್‌ ಕೆ.ಸಿ, ಮುಜಾಸೀರ್ ಅಹ್ಮದ್, ಧರ್ಮ ಚಿನ್ನು ರಾಠೊಡ್, ರಾಜಶೇಖರ, ನಾಗರಾಜ ಕಟ್ಟೆಪ್ಪ ಗೌಡರ, ಯಾದಗಿರಿ ತಾಲೂಕಾ ಪ್ರಧಾನ ಕಾರ್ಯದರ್ಶಿ ವೆಂಕಟರೆಡ್ಡಿ, ಜಿಲ್ಲಾ ಖಜಾಂಚಿ ಶಿವಕುಮಾರ, ಜಿಲ್ಲಾ ಉಪಾಧ್ಯಕ್ಷರಾದ ಕಾವೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಸೂಲ್ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News