×
Ad

ಯಾದಗಿರಿ ನೂತನ ಎಸ್.ಪಿಯಾಗಿ ಪೃಥ್ವಿಕ್ ಶಂಕರ್ ನೇಮಕ

Update: 2024-11-15 14:37 IST

ಯಾದಗಿರಿ: ಇಲ್ಲಿನ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ನಾಟಕದ 2018 ಬ್ಯಾಚಿನ ಐಪಿಎಸ್ ಅಧಿಕಾರಿ ಪೃಥ್ವಿಕ್ ಶಂಕರ್ ಅವರನ್ನು ನೇಮಕ ಮಾಡಿ ಕರ್ನಾಟಕ ಸರಕಾರದ ಆಡಳಿತದ ಸುಧಾರಣಾ ಕಾರ್ಯದರ್ಶಿ ನಾಗಪ್ಪ ಎಸ್ ಪಾರ್ತಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

  ಪೃಥ್ವಿಕ್ ಶಂಕರ್ ಅವರು ಅಪರಾಧ ವಿಭಾಗದ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಅವರು ತಕ್ಷಣ ಯಾದಗಿರಿ ಜಿಲ್ಲೆಯ ಎಸ್.ಪಿ ಆಗಿ ಅಧಿಕಾರ ವಹಿಸಿಕೊಳ್ಳಬೇಕೆಂದು ಸೂಚಿಸಿದ್ದಾರೆ. ಜಿ ಸಂಗೀತಾ ಅವರನ್ನು ಅಪರಾಧ ವಿಭಾಗದ ಎಸ್.ಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ಸೇರಿ ಏಳು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News