×
Ad

ಸುರಪುರ: ಎಸ್ಪಿ ಪೃಥ್ವಿಕ್ ಶಂಕರ್ ಅವರನ್ನು ವರ್ಗಾವಣೆ ಮಾಡದಂತೆ ಮಾಜಿ ಸಚಿವ ರಾಜುಗೌಡ ಮನವಿ

Update: 2025-07-03 20:24 IST

ರಾಜುಗೌಡ 

ಸುರಪುರ: ಯಾದಗಿರಿ ಜಿಲ್ಲಾ ಪೊಲೀಸ್ ಅಧಿಕ್ಷಕ ಪೃಥ್ವಿಕ್ ಶಂಕರ್ ಅವರನ್ನು ವರ್ಗಾವಣೆ ಮಾಡದಂತೆ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ನರಸಿಂಹ ನಾಯಕ (ರಾಜುಗೌಡ) ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.

ಈ ಕುರಿತು ಮನವಿ ಮಾಡಿ,ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ, ಮಟಕಾ, ಜೂಜಿನಂತಹ ಅನೇಕ ಅಕ್ರಮ ಚಟುವಟಿಕೆಗಳಿಗೆ ಎಸ್ಪಿ ಪೃಥ್ವಿಕ್ ಶಂಕರ್ ಅವರು ಕಡಿವಾಣ ಹಾಕಿದ್ದಾರೆ. ಅಲ್ಲದೆ ಜಿಲ್ಲೆಗೆ ಇವರು ಆಗಮಿಸಿ 7 ತಿಂಗಳಾಗಿದೆ. ಆಗಲೇ ವರ್ಗಾವಣೆಗೆ ಮುಂದಾಗಿರುವ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳಾದ ತಮ್ಮ ಬಗ್ಗೆ ಅಪಾರವಾದ ಗೌರವವಿದೆ. ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆ ನಡೆಸುವವರ ಒತ್ತಾಯದಿಂದ ತಾವು ಒಬ್ಬ ನಿಷ್ಠಾವಂತ ಮತ್ತು ಪ್ರಾಮಾಣಿಕ ಪೊಲೀಸ್ ಅಧಿಕ್ಷಕ ಪೃಥ್ವಿಕ್ ಶಂಕರ್ ಅವರನ್ನು ವರ್ಗಾವಣೆ ಮಾಡಿದರೆ ಜಿಲ್ಲೆಯ ಅಭಿವೃಧ್ಧಿಗೆ ವಂಚನೆ ಮಾಡಿದಂತಾಗಲಿದೆ. ಅಲ್ಲದೆ ನಿಮ್ಮ ಸರಕಾರ ಜನರ ಕೆಂಗಣ್ಣಿಗೂ ಗುರಿಯಾಗಲಿದೆ.ಆದ್ದರಿಂದ ಯಾವುದೇ ಕಾರಣಕ್ಕೂ ಎಸ್ಪಿಯನ್ನು ವರ್ಗಾವಣೆ ಮಾಡದಂತೆ ಮನವಿ ಮಾಡುವುದಾಗಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News