×
Ad

ಸುರಪುರ | ಕ್ಷೇತ್ರದ ಸಮಸ್ಯೆಗಳ ಕುರಿತು ವಿಧಾನಸಭೆಯಲ್ಲಿ ಗಮನ ಸೆಳೆದ ಶಾಸಕ ರಾಜಾ ವೇಣುಗೋಪಾಲ ನಾಯಕ

Update: 2026-03-10 23:28 IST

ಸುರಪುರ: ಬಜೆಟ್ ಅಧಿವೇಶನದಲ್ಲಿ ಕ್ಷೇತ್ರದ ವಿವಿಧ ಇಲಾಖೆಗಳ ಸಮಸ್ಯೆಗಳ ಕುರಿತು ಪ್ರಶ್ನೆ ಕೇಳುವ ಮೂಲಕ ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಅವರು ಮುಖ್ಯವಾಗಿ ಸುರಪುರ ವಿಧಾನಸಭಾ ಕ್ಷೇತ್ರದ ರಸ್ತೆಗಳ ಸಮಸ್ಯೆ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಚುಕ್ಕಿ ಗುರುತಿನ ಪ್ರಶ್ನೆ ಕೇಳಿದರು. ಅಂತರ ಜಿಲ್ಲಾ ಸಂಪರ್ಕ ರಸ್ತೆಗಳ ಸ್ಥಿತಿ ಹಾಗೂ ಅವುಗಳ ದುರಸ್ತಿ ಕಾರ್ಯದ ಕುರಿತು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಸಚಿವರು ಲಿಖಿತ ಉತ್ತರ ನೀಡಿ, ವಿವಿಧ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗಿದ್ದು ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕಿಲೋಮೀಟರ್‌ಗಳ ಅಂಕಿ–ಅಂಶಗಳೊಂದಿಗೆ ವಿವರ ನೀಡಿದ್ದಾರೆ.

ಇದಲ್ಲದೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಕೂಡ ಪ್ರಶ್ನೆ ಕೇಳಿದ ಶಾಸಕರು, ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳ ಕೊರತೆ ಇರುವುದನ್ನು ಗಮನಕ್ಕೆ ತಂದರು. ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು ಈಗಿರುವ ಎರಡು ವಸತಿ ನಿಲಯಗಳ ಜೊತೆಗೆ ಹೊಸ ವಸತಿ ನಿಲಯ ಆರಂಭಿಸಲು ಸೂಕ್ತ ಪ್ರಸ್ತಾವನೆ ಸಲ್ಲಿಸಿದರೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಕಂದಾಯ ಇಲಾಖೆಯ ವಿಷಯಕ್ಕೂ ಸಂಬಂಧಿಸಿ ಉಪನ್ಯಾಯಾಧಿಕಾರಿಗಳ ಕಚೇರಿಯ ಸಮಸ್ಯೆಗಳ ಕುರಿತು ಶಾಸಕರು ಗಮನ ಸೆಳೆದಿದ್ದಾರೆ.

ಒಟ್ಟಾರೆಯಾಗಿ ಕ್ಷೇತ್ರದ ವಿವಿಧ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಹಾಗೂ ಸಂಬಂಧಿತ ಸಚಿವರ ಗಮನ ಸೆಳೆಯಲು ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ನಿರಂತರವಾಗಿ ಪ್ರಯತ್ನಿಸುತ್ತಿರುವುದಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News