ಸುರಪುರ: ಪಟ್ಟಣದಾದ್ಯಂತ ನಡೆಯುತ್ತಿರುವ ಗಣೇಶೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಶಾಂತಿ, ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಯ ಸಂದೇಶ ಸಾರಲು ಸುರಪುರ ಪೊಲೀಸರು ಪಟ್ಟಣದಲ್ಲಿ ಬೃಹತ್ ಪಥಸಂಚಲನ ನಡೆಸಿದರು.

ಡಿವೈಎಸ್ಪಿ ಜಾವಿದ್ ಇನಾಂದಾರ್ ನೇತೃತ್ವದಲ್ಲಿ ಹಳೆ ಬಸ್ ನಿಲ್ದಾಣದ ಸಮೀಪದ ಡೊಣ್ಣಿಗೇರಾ ಬಳಿಯಿಂದ ಆರಂಭವಾದ ಪಥಸಂಚಲನವು ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನ, ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತ, ದರ್ಬಾರ್ ರಸ್ತೆ, ಮಹಾತ್ಮ ಗಾಂಧಿ ವೃತ್ತ ಮಾರ್ಗವಾಗಿ ಪೊಲೀಸ್ ಠಾಣೆಯವರೆಗೆ ಸಾಗಿತು.

ಪಥಸಂಚಲನದ ವೇಳೆ ಗಣೇಶ ಪ್ರತಿಷ್ಠಾಪನೆ ಮಾಡಿದ ಎಲ್ಲಾ ಆಚರಣೆ ಸಮಿತಿಗಳು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಶಾಂತಿ ಮತ್ತು ಸಾಮರಸ್ಯದಿಂದ ಹಬ್ಬವನ್ನು ಆಚರಿಸಬೇಕು ಎಂದು ಪೊಲೀಸರು ಮನವಿ ಮಾಡಿದರು.

ಪಥಸಂಚಲನದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಉಮೇಶ ಎಂ. ನಾಯಕ, ಪಿಎಸ್‌ಐಗಳು, ಡಿವೈಎಸ್ಪಿ ಕಚೇರಿಯ ಸಿಬ್ಬಂದಿ, ಮುಖ್ಯ ಪೇದೆಗಳು, ಸುರಪುರ ಠಾಣೆಯ ಪೊಲೀಸ್ ಸಿಬ್ಬಂದಿ, ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ತುಕಡಿ ಹಾಗೂ ವೆಂಕಟೇಶ ಸುರಪುರ ನೇತೃತ್ವದ ಗೃಹರಕ್ಷಕ ದಳದ ಸಿಬ್ಬಂದಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor