×
Ad

ಪಕ್ಷದ ಆಂತರಿಕ ಸಮಸ್ಯೆಗಳು ಏನೇ ಇದ್ದರೂ ಬಹಿರಂಗವಾಗಿ ಹೇಳಿಕೆ ನೀಡಬೇಡಿ : ಬಿ.ವೈ.ವಿಜಯೇಂದ್ರ

Update: 2025-07-19 18:47 IST

ಯಾದಗಿರಿ: ಮುಂಬರುವ ಸ್ಥಳೀಯ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೂಚನೆ ನೀಡಿದರು.

ಶನಿವಾರ ಕಲಬುರಗಿಯಲ್ಲಿ ಜರುಗಿದ ಪಕ್ಷದ ವಿಭಾಗೀಯ ಸಂಘಟನಾ ಸಭೆ ಪೂರ್ಣವಾದ ಬಳಿಕ ಯಾದಗಿರಿ ಜಿಲ್ಲಾ ಘಟಕದ ಪದಾಧಿಕಾರಿಗಳೊಡನೆ ಪ್ರತ್ಯೇಕ ಸಭೆ ನಡೆಸಿ ಮಾತನಾಡಿದ ಅವರು, ಪಕ್ಷದಲ್ಲಿ ಆಂತರಿಕ ಸಮಸ್ಯೆಗಳು ಏನೇ ಇದ್ದರೂ ಬಹಿರಂಗವಾಗಿ ಹೇಳಿಕೆ ನೀಡದಂತೆ ನಿರ್ದೇಶನ ನೀಡಿದರು.

ಬರುವ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿವೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ. ನಮ್ಮಲ್ಲಿ ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಧ್ಯೇಯವಿದೆ. ಆ ನಿಲುವಿಗೆ ಪ್ರತಿಯೊಬ್ಬರು ಬದ್ಧರಾಗಿರುವಂತೆ ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ, ರಾಜ್ಯ ಕಾರ್ಯದರ್ಶಿ ಮತ್ತು ನಗರಸಭೆ ಅಧ್ಯಕ್ಷೆ ಕು.ಲಲಿತಾ ಸಅನಂತಪುರ, ಮಾಜಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ, ನಿಗಮದ ಮಾಜಿ ಅಧ್ಯಕ್ಷ ದೆವಿಂದ್ರನಾಥ ನಾದ, ಯುವ ಮುಖಂಡ ಮಹೇಶರಡ್ಡಿ ಮುದ್ನಾಳ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುರೇಶ ಸಜ್ಜನ್, ಚಂದ್ರಶೇಖರಗೌಡ ಮಾಗನೂರ, ಜಿಲ್ಲಾ ವಕ್ತಾರ ಹಣಮಂತ ಇಟಗಿ,ಚನ್ನುಗೌಡ ಬಿಳಾರ,ಡಾ.ಚಂದ್ರಶೇಕರ ಸುಬೇದಾರ್,ಸದಶಿವಪ್ಪಗೌಡ ರೋಟಡನಿಗಿ, ಪರ್ವತರಡ್ಡಿ ಬೆಂಡಗೊಂಬಳ್ಳಿ, ಬಸವರಾಜ ಸೋನ್ನದ, ಅಡಿವೆಪ್ಪ ಜಾಕ,ಮಾರುತಿ ಕಲಾಲ್, ದೆವಿಂದ್ರಪ್ಪ ಕೊನೆರ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳ ಮತ್ತು ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಹಾಗೂ ಆರು ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯಾದ್ಯಂತ ಪ್ರವಾಸ ಮಾಡಲಾಗುವುದು. ಈ ಭ್ರಷ್ಟ ರಾಜ್ಯ ಸರ್ಕಾರದ ವಿರುದ್ಧ ನಮ್ಮ ಹೋರಾಟ ಮುಂದುವರೆಸಲಾಗುತ್ತದೆ.

- ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News