ಯಾದಗಿರಿ | ನ.2ರಂದು ರಾಜ್ಯೋತ್ಸವ, ಅತ್ಯುತ್ತಮ ಶಿಕ್ಷಕರಿಗೆ ಸನ್ಮಾನ ಸಮಾರಂಭ : ಸಿದ್ದಪ್ಪ ಹೊಟ್ಟಿ
ಯಾದಗಿರಿ : ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತುಗಳ ಸಂಯುಕ್ತ ಆಶ್ರಯದಲ್ಲಿ ನ.2ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಕಸಾಪ ಸಭಾಂಗಣದಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ಹಾಗೂ 2025ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ ತಿಳಿಸಿದ್ದಾರೆ.
ಶುಕ್ರವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ವಿಶ್ವಕರ್ಮ ಏಕದಂಡಿಗಿ ಮಠದ ಕುಮಾರ ಸ್ವಾಮಿಗಳ ಸಾನಿಧ್ಯದಲ್ಲಿ ನಡೆಯುವ ಈ ಜೋಡು ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚನ್ನಬಸಪ್ಪ ಎಸ್. ಮುದೋಳ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ನಿವೃತ್ತ ಶಿಕ್ಷಕರಾದ ಸಕ್ರಪ್ಪ ಮಾಮನಿ, ಬಸವರಾಜ ಸಾಹು ಗೊಂದಡಗಿ, ಶಿವಪ್ಪ ದಾಸನಕೇರಿ ಹಾಗೂ ಹಸನ್ ಸಾಬ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ಸಿದ್ದಪ್ಪ ಹೊಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ವೆಂಕಟರಾವ್ ಕುಲಕರ್ಣಿ ಅವರು ಕರ್ನಾಟಕ ಏಕೀಕರಣ ಚಳುವಳಿ” ಕುರಿತು ಉಪನ್ಯಾಸ ನೀಡಲಿದ್ದಾರೆ.
ಕನ್ನಡ ಅಧ್ಯಾಪಕ ಡಾ.ಡಿ.ಎನ್.ಪಾಟೀಲ್ ಕರಡಕಲ್ ಅವರು “ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ” ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಹೇಳಿದರು.
ಶಹಾಪುರ ತಾಲೂಕು ಕಸಾಪ ಅಧ್ಯಕ್ಷ ಡಾ.ರವೀಂದ್ರ ಹೊಸಮನಿ ಹಾಗೂ ಯಾದಗಿರಿ ತಾಲೂಕು ಕಸಾಪ ಅಧ್ಯಕ್ಷ ವೆಂಕಟೇಶ ಕಲಕಂಭ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ.ಭೀಮರಾಯ ಲಿಂಗೇರಿ, ಡಾ.ಸಿದ್ದರಾಜ್ ರೆಡ್ಡಿ, ಗೌರವ ಕೋಶಾಧ್ಯಕ್ಷ ಬಸವರಾಜ ಅರಳಿ ಮೊಟನಳ್ಳಿ, ತಾಲೂಕು ಗೌರವ ಕಾರ್ಯದರ್ಶಿ ಮಹೇಶ ಪಾಟೀಲ್ ಕಿಲ್ಲನಕೇರಾ, ದೇವರಾಜಗೌಡ ಬೆಳಗೆರಿ, ವೀರಭದ್ರಪ್ಪ ಸ್ವಾಮಿ ಜಾಕಾ ಮಠ ಹಾಗೂ ಇತರರು ಹಾಜರಿದ್ದರು.