ಯಾದಗಿರಿ | ರೊಟ್ಟಿ ಖರೀದಿಯ ವೇಳೆ ವಾಗ್ವಾದ, ಕೊಲೆಯಲ್ಲಿ ಅಂತ್ಯ

Update: 2024-04-22 12:54 GMT

ಮೃತ ಯುವಕ ರಾಕೇಶ್

ಯಾದಗಿರಿ : ರೊಟ್ಟಿ ಖರೀದಿಯ ವೇಳೆಯಲ್ಲಿ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ನಗರದಲ್ಲಿ ವರದಿಯಾಗಿದೆ.

ಯಾದಗಿರಿ ನಗರದ ಶಹಾಪುರಪೇಟೆಯ ಬಡಾವಣೆಯ ರೊಟ್ಟಿ ಕೇಂದ್ರಕ್ಕೆ ನಿನ್ನೆ(ಎ.21) ರಾತ್ರಿ ರಾಕೇಶ್ ಎಂಬಾತ ರೊಟ್ಟಿ ತೆಗೆದುಕೊಂಡು ಬರೋದಕ್ಕೆ ತೆರಳಿದ್ದಾನೆ. ಈ ವೇಳೆ ರೊಟ್ಟಿ ಕೇಂದ್ರದ ಫಯಾಝ್‌  ಎಂಬಾತನ ಜೊತೆ ಗಲಾಟೆಯಾಗಿದೆ ಎನ್ನಲಾಗಿದೆ.

ಗಲಾಟೆ ಬಳಿಕ ರಾಕೇಶ್ ಮನೆಗೆ ಮರಳಿದ ನಂತರ ಮತ್ತೆ ಜಗಳವಾಗಿದ್ದು, ಈ ವೇಳೆ ಆರೋಪಿ ಫಯಾಝ್ , ರಾಕೇಶ್‌ ನ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಿರುವ ಆರೋಪ ಮಾಡಲಾಗಿದೆ.

ಬಳಿಕ ಬಿಜೆಪಿ ಮುಖಂಡರ ನೆರವಿನಲ್ಲಿ ಕೊಲೆಯಾದ ರಾಕೇಶ್ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಯಾದಗಿರಿ ಎಸ್ಪಿ ಸಂಗೀತಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಬಂದ ನಂತರ ರಾಕೇಶ್ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಯಾದಗಿರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News