×
Ad

ಯಾದಗಿರಿ | ಅರ್ಥಪೂರ್ಣವಾಗಿ ಸರ್ವಜ್ಞನ ಜಯಂತಿ ಆಚರಣೆಗೆ ನಿರ್ಧಾರ

Update: 2025-02-10 20:30 IST

ಯಾದಗಿರಿ : ಸಂತಕವಿ ಸರ್ವಜ್ಞನ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸಂತಕವಿ ಸರ್ವಜ್ಞನ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಸಭೆಯ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು, ಸಂತ ಕವಿ ಸರ್ವಜ್ಞನ ಜಯಂತಿಯೂ ಫೆ.20 ರಂದು ಇರುವುದರಿಂದ ಜಿಲ್ಲೆಯ ಎಲ್ಲ ಶಾಲೆ, ಕಾಲೇಜು, ಕಚೇರಿಗಳಲ್ಲಿ, ತಾಲೂಕು ಮಟ್ಟದ ಜಯಂತಿಯನ್ನು ಅರ್ಥಪೂರ್ಣವಾಗಿ ಅಂದು ಆಚರಿಸಲಾಗುವುದು.

ಈಗ ಸಮಾಜದ ಮುಖಂಡರು, ಪ್ರತಿನಿಧಿಗಳ ಬೇಡಿಕೆಯ ಹಿನ್ನೆಲೆಯಲ್ಲಿ ಬರುವ ಫೆ.24 ರಂದು ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಮಧ್ಯಾಹ್ನ 12-30 ಗಂಟೆಗೆ ಸಂತ ಕವಿ ಶ್ರೀ ಸರ್ವಜ್ಞನ ಜಯಂತಿಯನ್ನು ಆಚರಿಸಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಯಿತು.

ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲು, ವೇದಿಕೆ, ಆಹ್ವಾನ ಪತ್ರಿಕೆ ಸೇರಿದಂತೆ ಇನ್ನಿತರ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಅದರಂತೆ ಜಿಲ್ಲೆಯ ಎಲ್ಲ ಶಾಲಾ, ಕಾಲೇಜು, ಕಚೇರಿಗಳಲ್ಲಿ ಈ ಜಯಂತಿ ಆಚರಿಸಲು ಹಾಗೂ ತಾಲೂಕು ಮಟ್ಟದಲ್ಲಿ, ಜಯಂತಿಯನ್ನು ಆಚರಣೆಗೆ ಸಕಲ ಕ್ರಮಗಳನ್ನು ಕೈಗೊಳ್ಳಬೇಕು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲು ಹಾಗೂ ನುರಿತ ಉಪನ್ಯಾಸಕರನ್ನು ಜಿಲ್ಲಾಮಟ್ಟದಲ್ಲಿ ಕಾರ್ಯಕ್ರಮಕ್ಕೆ ಆಹ್ವಾನಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಜಯಂತ್ಯೋತ್ಸವ ಸಮಿತಿ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಬೇಕು, ಜಿಲ್ಲೆಯ ಅಧಿಕಾರಿಗಳು, ಸಿಬ್ಬಂದಿಗಳು, ಆಯಾ ಸಮಾಜದ ಮುಖಂಡರು, ಸಂಘ ಸಂಸ್ಥೆಗಳವರು ತಪ್ಪದೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಅವರು ಸಲಹೆ ನೀಡಿದರು. ಮೆರವಣಿಗೆ ಕುರಿತು ಮುಂಚಿತವಾಗಿ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದು ಹೇಳಿದರು.

ಸಭೆಯಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರದೇವಿ ಮಠಪತಿ, ಸರ್ವಜ್ಞ ತಾಲೂಕ ಸಂಘದ ತಾಲೂಕಾಧ್ಯಕ್ಷ ಬಸವರಾಜ ಅಜಲಾಪುರ್, ಉಪಾಧ್ಯಕ್ಷರಾದ ಶಾಂತಮ್ಮ ಕುಂಬಾರ್, ಮಲ್ಲಿಕಾರ್ಜುನ, ಕಾರ್ಯದರ್ಶಿಗಳಾದ ರಮೇಶ್ ಕುಂಬಾರ್ ಬದ್ದೇಪಲ್ಲಿ, ದೇವೇಂದ್ರ, ಯರಗೋಳ, ನರಸಿಂಹಲು ಸೌರಾಷ್ಟ್ರಹಳ್ಳಿ, ಬಿಚ್ಚಪ್ಪ ಕುಂಬಾರ್, ಶ್ರೀಕಾಂತ್ ಮೋದಿ, ರಾಜೇಂದ್ರ ಕುಮಾರ್, ಹರ್ಷವರ್ಧನ್ ಗುರುಮಠಕಲ್, ಹನುಮಂತ ಮಗದಮಪುರ್, ವಿಜಯಕುಮಾರ್ ಕೊಂಕಲ್ ಹಾಗೂ ಇತರರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News