ಯಾದಗಿರಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಅಂಬ್ರೇಶ
ಯಾದಗಿರಿ: ರೈತರೊಬ್ಬರು ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.
ಅಂಬ್ರೇಶ (44) ಆತ್ಮಹತ್ಯೆ ಮಾಡಿಕೊಂಡ ರೈತ. ಬ್ಯಾಂಕ್ ಸಾಲ, ಖಾಸಗಿಯವರ ಬಳಿ ಕೈಸಾಲ ಎಲ್ಲಾ ಸೇರಿ ಸುಮಾರು 10 ಲಕ್ಷದಷ್ಟು ಸಾಲ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ತಂದೆ ತಾಯಿಗೆ ವಯಸ್ಸಾಗಿದ್ದು ಅವರ ಚಿಕಿತ್ಸೆಯ ಖರ್ಚು ಹಾಗೂ ವ್ಯವಸಾಯಕ್ಕಾಗಿ ಸಾಲ ಮಾಡಿಕೊಂಡಿದ್ದ. ಒಂದು ಎಕರೆ ಜಮೀನು ಇದ್ದು ಬೆಳೆಯೂ ಸರಿಯಾಗಿ ಬಾರದೆ ಸಾಲ ತೀರಿಸಲಾಗದೆ ಚಿಂತೆಗೀಡಾಗಿ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿಸು ಬಂದಿದೆ.
ಸುರಪುರ ತಾಲೂಕು ಆಸ್ಪತ್ರೆಗೆ ತಲುಪಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಆಸ್ಪತ್ರೆಗೆ ಸುರಪುರ ಠಾಣೆ ಪಿ.ಐ ಉಮೇಶ್ ನಾಯಕ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.