ಯಾದಗಿರಿ | ಬಿಜೆಪಿಯಿಂದ ಎಸ್‌ಐಆರ್ ಮಹಾಸಂಪರ್ಕ ಅಭಿಯಾನ

Update: 2026-07-26 21:53 IST

ಹುಣಸಗಿ: ಪರಿಶುದ್ಧ ಮತದಾರರ ಪಟ್ಟಿ ಸಿದ್ಧಪಡಿಸುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಎಸ್‌ಐಆರ್ ಕಾರ್ಯಕ್ಕೆ ಮುಂದಾಗಿದ್ದು ಅರ್ಹ ಮತದಾರರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಬಿಜೆಪಿ ಮಹಾಸಂಪರ್ಕ ಅಭಿಯಾನ ನಡೆಸುತ್ತಿದೆ ಎಂದು ಬಿಜೆಪಿ ಮುಖಂಡ ವಿರೇಶ ಸಾಹುಕಾರ ಚಿಂಚೋಳಿ ಹೇಳಿದರು.

ಪಟ್ಟಣದ ವಿವಿಧ ವಾರ್ಡಗಳಲ್ಲಿ ಬಿಜೆಪಿ ಪಕ್ಷದ ವತಿಯಿಂದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮಹಾಸಂಪರ್ಕ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜುಲೈ 25 ಹಾಗೂ 26ರಂದು ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಬಿಜೆಪಿ ಎಸ್‌ಐಆರ್ ಮಹಾ ಸಂಪರ್ಕ ಅಭಿಯಾನದಲ್ಲಿ ಪ್ರತಿಯೊಂದು ವಾರ್ಡ್‌ನಲ್ಲಿ ಪ್ರತಿ 20 ಮನೆಗಳಿಗೆ ಒಬ್ಬ ಬಿಜೆಪಿ ಪಕ್ಷದ ಕಾರ್ಯಕರ್ತ ಹಾಗೂ ಮುಖಂಡರನ್ನು ನಿಯೋಜಿಸಿ ಮನೆಮನೆಗೆ ಭೇಟಿ ನೀಡಲಾಯಿತು.

ಬಿಎಲ್‌ಒಗಳು ಮನೆಮನೆಗೆ ಇನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಿದ್ದು, ಬಹುತೇಕ ಮತಗಟ್ಟೆಗಳಲ್ಲಿ ವಿತರಣೆ ಕಾರ್ಯ ಪೂರ್ಣಗೊಂಡಿದೆ. ಬಿಜೆಪಿ ವತಿಯಿಂದ ನಿಯೋಜಿಸಲಾದ ಬಿಎಲ್‌ಎ-2 ಕಾರ್ಯಕರ್ತರು ಬಿಎಲ್‌ಒಗಳಿಗೆ ಸಹಕಾರ ನೀಡುತ್ತಿದ್ದು, ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಬೇಟಿ ನೀಡಿ ಎಸ್‌ಐಆರ್ ಕುರಿತು ಮಾಹಿತಿ ನೀಡಿ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗು ಮುಖಂಡರು ಪ್ರತಿ ಮನೆಗೆ ಬೇಟಿ ನೀಡಿ ಪ್ರತಿಯೊಬ್ಬ ಮತದಾರರ ಮಾಹಿತಿಯನ್ನು ಪಡೆದುಕೊಂಡು ಸರಳ ಆ್ಯಪ್‌ದಲ್ಲಿ ಮಾಹಿತಿಯನ್ನು ದಾಖಲು ಮಾಡುತ್ತಿದ್ದಾರೆ.

ಅರ್ಹ ಮತದಾರರು ಮತದಾನದಿಂದ ವಂಚಿತರಾಗದಂತೆ ಮಾರ್ಗದರ್ಶನ ನೀಡಬೇಕು. ಮತದಾರರ ಪಟ್ಟಿ ಪರಿಷ್ಕರಣೆಗೆ ಆಗಸ್ಟ್ 8 ರವರೆಗೆ ಕಾಲಾವಕಾಶ ನೀಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟ ಹಾಗೂ ಕ್ಷೇತ್ರ ಮಟ್ಟದಲ್ಲಿ ನಿಯೋಜಿಸಿರುವ ಬಿಎಲ್‌ಒಗಳನ್ನು ಸಂಪರ್ಕಿಸಿ ಸರಿಯಾದ ಕ್ರಮದಲ್ಲಿ ಮಾಹಿತಿಯನ್ನು ತುಂಬಿರಿ ಎಂದು ಸಲಹೆ ನೀಡಿದರು.

ಮರಣ ಹೊಂದಿರುವವರು, ಒಂದೆಡೆಯಿಂದ ಮತ್ತೊಂದೆಡೆಗೆ ಸ್ಥಳಾಂತರಗೊಂಡಿರುವವರು ಹಾಗೂ ಎರಡೆರಡು ಕಡೆಗಳಲ್ಲಿ ಮತ ಚೀಟಿ ಹೊಂದಿರುವವರು ಇವೇ ಮುಂತಾದ ಎಲ್ಲ ತಪ್ಪುಗಳನ್ನು ಸರಿಪಡಿಸಲು ಮತದಾರರ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದೆ. ಈ ಪ್ರಕ್ರಿಯೆಯಲ್ಲಿ ಮತದಾರರು ತಮಗೆ ದೊರೆತಿರುವ ನಮೂನೆಗಳಲ್ಲಿ ತಪ್ಪಾಗಿ ನಮೂದಿಸದೇ ನಿಯಮಬದ್ಧವಾಗಿ ಮಾಹಿತಿ ಭರ್ತಿ ಮಾಡಬೇಕು ಎಂದು ಹೇಳಿದರು.

ಈ ಎಸ್‌ಐಆರ್ ಕಾರ್ಯವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವ ಅತ್ಯಂತ ಮಹತ್ವದ ಕಾರ್ಯವಾಗಿದೆ. ಯಾವುದೇ ಅರ್ಹ ಮತದಾರರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಹಾಗೂ ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪದೋಷಗಳು ಕಂಡುಬರದಂತೆ ಪ್ರತಿಯೊಬ್ಬ ಕಾರ್ಯಕರ್ತರೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿರುಪಾಕ್ಷಿ ಸ್ಥಾವರಮಠ, ಮುದಕಪ್ಪ ದೇಸಾಯಿ, ಕಾಂತು ದೊರಿ, ಶಿವನಗೌಡ ಪಾಟೀಲ್, ಶರಣು ವೈಲಿ, ಆನಂದ ಬಾರಿಗಿಡದ, ಯೂಸುಪ್ ಡೆಕ್ಕನ್, ಸಿದ್ದಣ ಮೇಲಿನಮನಿ, ಚನ್ನು ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News