×
Ad

ಯಾದಗಿರಿ | ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳ ನೇಮಕ

Update: 2025-05-21 17:36 IST

ಸುರಪುರ: ಜಿಲ್ಲೆಯಲ್ಲಿ ಶರಣ ಸಾಹಿತ್ಯದ ಯಾವುದೇ ರೀತಿಯ ಚಟುವಟಿಕೆಗಳು ಹಾಗೂ ಆಧುನಿಕ ವಚನಗಳ ಕೃತಿ ಪ್ರಕಟಣೆ ಸೇರಿದಂತೆ ಶರಣ ಸಾಹಿತ್ಯಕ್ಕೆ ಎಲ್ಲ ರೀತಿಯ ನೆರವನ್ನು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ನೀಡಲಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ ತಿಳಿಸಿದರು.

ನಗರದ ರಂಗಂಪೇಟೆಯ ಬಸವಪ್ರಭು ಕೇಂದ್ರದಲ್ಲಿ ನಡೆದ ಪರಿಷತ್ತಿನ ತಾಲೂಕು ಘಟಕದ ನೂತನ ಪದಾಧಿಕಾರಿಗಳ ನೇಮಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶರಣ ಸಾಹಿತ್ಯ ಉತ್ತಮ ಸಮಾಜ ನಿರ್ಮಾಣಕ್ಕೆ ತುಂಬಾ ಅಗತ್ಯವಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಅನೇಕ ಜನ ಶರಣ ಸಾಹಿತಿಗಳನ್ನು ಗುರುತಿಸಿ ಅವರ ಪುಸ್ತಕಗಳನ್ನು ಪ್ರಕಟಿಸುವ ಕಾರ್ಯವನ್ನು ಪರಿಷತ್ತು ಮಾಡುತ್ತಿದ್ದು, ಇನ್ನೂ ಹೆಚ್ಚಿನ ಕಾರ್ಯ ಮಾಡಲಿದ್ದೇವೆ. ಇಂದು ತಾಲೂಕು ಘಟಕದ ಅಧ್ಯಕ್ಷರಾದ ರಾಜು ಕುಂಬಾರ ಹಾಗೂ ಅವರ ತಂಡಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು, ತಾಲೂಕಿನಲ್ಲಿ ಶರಣ ಸಾಹಿತ್ಯವನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡುವಂತೆ ಸಲಹೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಪರಿಷತ್ತಿನ ರಾಷ್ಟ್ರೀಯ ಹಿರಿಯ ಉಪಾಧ್ಯಕ್ಷರಾದ ಅಪ್ಪಾರಾವ್ ಅಕ್ಕೋಣಿ ಮಾತನಾಡಿ, ಸುತ್ತೂರಿನ ರಾಜೇಂದ್ರ ದೇಶಿಕೇಂದ್ರ ಸ್ವಾಮೀಜಿಗಳಿಂದ ಆರಂಭಗೊಂಡಿರುವ ಪರಿಷತ್ತು ಇಂದು ಕೇವಲ ಕರ್ನಾಟಕ ಮಾತ್ರವಲ್ಲದೆ, ಹೊರ ನಾಡು ಮತ್ತು ವಿದೇಶಗಳಲ್ಲೂ ತನ್ನ ಶಾಖೆಗಳನ್ನು ಹೊಂದಿದೆ ಎಂದರು.

ಪರಿಷತ್ತಿನ ಯುವ ಘಟಕದ ರಾಜ್ಯ ಸಂಚಾಲಕ ಪ್ರಕಾಶ ಅಂಗಡಿ ಕನ್ನೆಳ್ಳಿ ಮಾತನಾಡಿದರು. ವೇದಿಕೆಯಲ್ಲಿ ತಾಲೂಕು ವೀರಶೈವ ಲಿಂಗಾಯತ ಸಮಿತಿ ಅಧ್ಯಕ್ಷ ಸುರೇಶ ಸಜ್ಜನ್, ಉಪನ್ಯಾಸಕ ಅಬ್ದುಲ್ ಕರೀಂ ಕನ್ಯೆಕೋಳೂರ, ಶಿವಶರಣಪ್ಪ ಹೆಡಗಿನಾಳ ಉಪಸ್ಥಿತರಿದ್ದರು.

ನೂತನ ಅಧ್ಯಕ್ಷರಾಗಿ ನೇಮಕಗೊಂಡು ಪತ್ರಕರ್ತ ರಾಜು ಕುಂಬಾರ ಮಾತನಾಡಿದರು. ಜಗದೀಶ ಪಾಟೀಲ್, ಸೋಮರಾಯ ಶಖಾಪುರ, ಅಮರೇಶ ಕುಂಬಾರ, ರವಿಗೌಡ ಹೆಮನೂರ, ಸಿದ್ದಣಗೌಡ ಹೆಬ್ಬಾಳ, ಕದಳಿ ಮಹಿಳಾ ವೇದಿಕೆ ಅದ್ಯಕ್ಷೆ ನೀಲಾಂಬಿಕಾ ಪಾಟೀಲ್, ಸಂಗಣ್ಣ ತುಂಬಗಿ ಕೆಂಭಾವಿ,ದೇವಿಂದ್ರ ಕರಡಕಲ್, ಅಪ್ಪು ಸೂಗೂರ, ಹಣಮಂತ್ರಾಯ ದೇವತ್ಕಲ್, ಶ್ರೀಕಾಂತ ರತ್ತಾಳ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News