ಯಾದಗಿರಿ | ಮೇ 18ರಂದು ನಾಗರಿಕ ರಕ್ಷಣಾ ʼಅಣಕು ಪ್ರದರ್ಶನʼ : ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ.
ಡಾ.ಸುಶೀಲಾ ಬಿ.
ಯಾದಗಿರಿ : ಪ್ರಸ್ತುತ, ದೇಶದಲ್ಲಿ ಯುದ್ಧ ಸಂಭವಿಸುವ ವಿದ್ಯಮಾನಗಳನ್ನು ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರದ ಕೇಂದ್ರ ಗೃಹ ಸಚಿವಾಲಯ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಮುಂದೆ ಆಗಬಹುದಾದ ಎಲ್ಲಾ ರೀತಿಯ ಅನಾಹುತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸನ್ನದ್ಧರಾಗಿರಲು ಜಿಲ್ಲಾಡಳಿತ, ಜಿಲ್ಲಾ ಪೋಲಿಸ್, ಜಿಲ್ಲಾ ಅಗ್ನಿಶಾಮಕ ದಳ, ಜಿಲ್ಲಾ ಆರೋಗ್ಯ ಇಲಾಖೆ, ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಾಗರಿಕ ರಕ್ಷಣಾ ಅಣಕು ಪ್ರದರ್ಶನ ಕಾರ್ಯಕ್ರಮವನ್ನು ಮೇ.18ರ ಸಂಜೆ 4ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಹಮ್ಮಿಕೊಳ್ಳಿಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿಗಳಾದ ಡಾ.ಸುಶೀಲಾ ಬಿ. ಅವರು ಕೋರಿದ್ದಾರೆ.
ಆಪರೇಷನ್ ಅಭ್ಯಾಸ್" (Operation Abhyas) ನಾಗರಿಕ ರಕ್ಷಣಾ ಅಣಕು ಪ್ರದರ್ಶನದ (Civil Defence Excersise/Mock Drill) ಕಾರ್ಯಕ್ರಮದ ಮುಖ್ಯ ಉದ್ದೇಶ ಒಂದು ವೇಳೆ ಯುದ್ಧ ಸಂಭವಿಸಿದ್ದಲ್ಲಿ ಅಥವಾ ಇಂತಹ ಯಾವುದೇ ಘಟನೆ ಜರುಗಿದ್ದಲ್ಲಿ ಭಯಭೀತರಾಗದೆ, ಯುದ್ಧದ ಸನ್ನಿವೇಶವನ್ನು ಧೈರ್ಯದಿಂದ ಎದುರಿಸಲು ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳನ್ನು ಅಣಕು ಪ್ರದರ್ಶನದ ಮೂಲಕ ವಿವರಿಸಿ ಜಿಲ್ಲೆಯ ಸಾರ್ವಜನಿಕರಲ್ಲಿ ಆತ್ಮಸ್ಥೆರ್ಯ ತುಂಬುವಂತಹ ಕಾರ್ಯಕ್ರಮವಾಗಿರುತ್ತದೆ.
ಆಪರೇಷನ್ ಅಭ್ಯಾಸ್" (Operation Abhyas) ನಾಗರಿಕ ರಕ್ಷಣಾ ಅಣಕು ಪ್ರದರ್ಶನ (Civil Defence Excersise/Mock Drill) ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೋಲಿಸ್ ಇಲಾಖೆ, ಜಿಲ್ಲಾ ಅಗ್ನಿಶಾಮಕ ದಳ, ಜಿಲ್ಲಾ ಆರೋಗ್ಯ ಇಲಾಖೆ, ವಿವಿಧ ಇಲಾಖೆ ಹಾಗೂ ಸ್ವಯಂ ಸೇವಕರು ಭಾಗವಹಿಸಿ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದು, ಜಿಲ್ಲೆಯ ಎಲ್ಲಾ ನಾಗರಿಕರು ಈ ಕಾರ್ಯಕ್ರಮವನ್ನು ವೀಕ್ಷಿಸಲು ಆಗಮಿಸಿ, ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.