×
Ad

ಯಾದಗಿರಿ | ಪಹಲ್ಗಾಮ್‌ನಲ್ಲಿ ಉಗ್ರರ ಕೃತ್ಯ ಖಂಡನೀಯ : ಬಸರೆಡ್ಡಿ ಪಾಟೀಲ್ ಅನಪೂರ

Update: 2025-04-24 17:06 IST

ಯಾದಗಿರಿ : ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆಂದು ದೇಶದ ನಾನಾ ಭಾಗಗಳಿಂದ ತೆರಳಿದ ಪ್ರವಾಸಿಗರ ಮೇಲೆ ಪಹಲ್ಗಾಮ್‌ ನಲ್ಲಿ ಉಗ್ರರ ದಾಳಿಯಿಂದ ಮಾಡಿ 28 ಜನರು ಮೃತಪಟ್ಟಿರುವ ಘಟನೆ ಎಲ್ಲರಿಗೂ ತೀವ್ರ ನೋವುಂಟು ಮಾಡಿದೆ, ನಾವೂ ಇದನ್ನು ಖಂಡಿಸುತ್ತೇವೆ, ಕೇಂದ್ರ ಸರ್ಕಾರ ಉಗ್ರರ ಮಟ್ಟ ಹಾಕಲು ಕೈಗೊಳ್ಳುವ ತೀರ್ಮಾನಕ್ಕೆ ನಮ್ಮ ಬೆಂಬಲವಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರಡ್ಡಿ ಪಾಟೀಲ್ ಅನಪೂರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಉಗ್ರರು ದೇಶದಲ್ಲಿ ಶಾಂತಿ ಕದಡುವ ದೃಷ್ಟಿಯಿಂದ ಪ್ರವಾಸಿಗರ ಜೊತೆ ವಿಕೃತವಾಗಿ ವರ್ತಿಸಿ, ಅವರನ್ನು ಕೊಲೆ ಮಾಡಿರುವುದು ಅಮಾನವೀಯ ಕೃತ್ಯವಾಗಿದೆ ಎಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News