ಯಾದಗಿರಿ | ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಲು ಗ್ರಾಮಸ್ಥರ ಮನವಿ
ಯಾದಗಿರಿ: ವರ್ಕನಳ್ಳಿ ಗ್ರಾಮದ ಸೀಮೆಯಲ್ಲಿ ಅಕ್ರಮ ಗಣಿಗಾರಿಕೆಯ ಬ್ಲಾಸ್ಟಿಂಗ್ನಿಂದ ರಸ್ತೆ ಹದೆಗೆಟ್ಟಿದ್ದು, ಧೂಳಿನಿಂದ ಜನರಿಗೆ ಬಹಳ ತೊಂದರೆಯಾಗಿದೆ. ಕೂಡಲೇ ಇದನ್ನು ತಡೆಗಟ್ಟುವಂತೆ ವರ್ಕನಳ್ಳಿ ಗ್ರಾಮದ ಯುವಕರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಯಾದಗಿರಿ ತಾಲೂಕು ವರ್ಕನಳ್ಳಿ ಗ್ರಾಮದ ಸೀಮೆಯಲ್ಲಿ ಅಕ್ರಮ ಗಣಿಗಾರಿಕೆಯಿಂದ ದಿನನಿತ್ಯ ಓಡಾಡುವ ಕಲಬುರಗಿ ಮತ್ತು ಸ್ಥಳೀಯ ಟಿಪ್ಪರ್ಗಳ ಹಾವಳಿ ಜಾಸ್ತಿಯಾಗಿ ಈ ಭಾಗದ ರಸ್ತೆಗಳು ಹದೆಗೆಟ್ಟಿದ್ದು, ಓವರ್ ಲೋಡ್ ಹಾಕಿ ನಡೆಸುತ್ತಿದ್ದಾರೆ. ವಾಹನದಲ್ಲಿ ದೊಡ್ಡ ದೊಡ್ಡ ಸೋಲಿಂಗ್ ಕಲ್ಲುಗಳು ತರುತ್ತಿದ್ದು, ಕೆಳಗಡೆ ಬಿದ್ದರೆ ಜನರ ಪ್ರಾಣಕ್ಕೆ ಹಾನಿ ಉಂಟಾಗುತ್ತದೆ ಹಾಗೂ ಧೂಳಿನಿಂದ ಜನರಿಗೆ ಬಹಳ ತೊಂದರೆ ಆಗಿದ್ದು, ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಿ, ಜನರ ಆರೋಗ್ಯ ಹದಗೆಟ್ಟಿದೆ. ಅಪಘಾತಗಳು ಸಂಭವಿಸುತ್ತಿವೆ ಎಂದು ಆರೋಪಿಸಿದರು.
ಈ ಭಾಗದಲ್ಲಿ ಗಣಿಗಾರಿಕೆ ಹಾವಳಿ ಜಾಸ್ತಿಯಾಗಿದ್ದು, ನೈಸರ್ಗಿಕ ಸಂಪತ್ತು ಲೂಟಿ ಮಾಡುತ್ತಿದ್ದಾರೆ. ಬ್ಲಾಸ್ಟಿಂಗ್ನಿಂದ ಗ್ರಾಮಗಳ ಜನರು ಭಯಭೀತರಾಗಿದ್ದು, ಅಕ್ರಮವಾಗಿ ಅವ್ಯವಹತವಾಗಿ ಗಣಿಗಾರಿಕೆ ನಡೆಯುತ್ತಿದೆ. ಈ ಅಕ್ರಮದ ಬಗ್ಗೆ ಗಣಿಗಾರಿಕೆ ಇಲಾಖೆಯ ಗಮನಕ್ಕೆ ತಂದರೂ ಕೂಡಾ ಕ್ರಮ ಕೈಗೊಂಡಿಲ್ಲ. ಇಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಈ ಕೂಡಲೇ ತಡೆಹಿಡಿದು, ಜನರ ಆರೋಗ್ಯ ಕಾಪಾಡಬೇಕೆಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಶಫಿ ವರ್ಕನಳ್ಳಿ ಮಲ್ಲುನಾಯಕ ವರ್ಕನಳ್ಳಿ ರವಿನಾಯಕ, ಭೀಮುನಾಯಕ, ಕಾಶಿನಾಯಕ, ಭೀಮು ಮಡಿವಾಳ, ತಾಯಪ್ಪನಾಯಕ ಮೋದಿನ, ದೇವು ನಾಯಕ ರಾಜಪ್ಪ ನಾಯಕ ಇತರರು ಇದ್ದರೂ.