Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ನೆಲದ ಸತ್ಯಗಳಿಗೆ ಕಿವಿಯಾಗಿ...

ನೆಲದ ಸತ್ಯಗಳಿಗೆ ಕಿವಿಯಾಗಿ...

ಕಾರುಣ್ಯಕಾರುಣ್ಯ18 Dec 2015 10:58 AM IST
share
ನೆಲದ ಸತ್ಯಗಳಿಗೆ ಕಿವಿಯಾಗಿ...

 ಕೃಷಿ ಮತ್ತು ಅದಕ್ಕೆ ಸಂಬಂಸಿದ ಪರಿಸರ, ಆಹಾರ ಭದ್ರತೆ, ಜೈವಿಕ ತಂತ್ರಜ್ಞಾನಗಳ ಬಗ್ಗೆ ಅಪಾರ ಅಧ್ಯಯನ ಮಾಡಿರುವ ಅಂತಾರಾಷ್ಟ್ರೀಯ ಮಟ್ಟದ ಚಿಂತಕ ದೇವಿಂದರ್ ಶರ್ಮಾ ಅವರ ಲೇಖನಗಳ ಸಂಗ್ರಹವೇ ‘ನೆಲದ ಸತ್ಯ’ ಕೃತಿ. ನಾಗೇಶ್ ಕೆ. ಎನ್. ಅವರು ಇದನ್ನು ಸಮರ್ಥವಾಗಿ ಕನ್ನಡಕ್ಕಿಳಿಸಿದ್ದಾರೆ. ಇಲ್ಲಿರುವ ಎಲ್ಲ ಲೇಖನಗಳೂ ಕೃಷಿ ಕ್ಷೇತ್ರ ಅವಸಾನದತ್ತ ಸಾಗುತ್ತಿರುವ ಹಿಂದಿನ ರಾಜಕೀಯ ಮತ್ತು ಸಾಮಾಜಿಕ ಕಾರಣಗಳನ್ನು ವಿಶ್ಲೇಷಿಸುತ್ತದೆ. ಭಾರತದ ಕೃಷಿನೀತಿ ಮತ್ತು ಆರ್ಥಿಕ ನೀತಿಗಳ ನಡುವಿನ ವಿರೋಧಾಭಾಸಗಳ ಕಡೆಗೆ ನಮ್ಮ ಗಮನವನ್ನು ಸೆಳೆಯುತ್ತದೆ. ಹೇಗೆ ನಮ್ಮ ನೆಲ, ಬದುಕು ದುರಂತದ ಅಂಚಿಗೆ ದಾಪುಗಾಲಿಕ್ಕುತ್ತಿದೆ ಎನ್ನುವ ಸತ್ಯವನ್ನು ನಮಗೆ ಮನವರಿಕೆ ಮಾಡಿ ಕೊಡುವಲ್ಲಿ ಕೃತಿ ಯಶಸ್ವಿಯಾಗುತ್ತದೆ. ಇಲ್ಲಿ ದೇವೇಂದ್ರ ಶರ್ಮಾ ಅವರ 20ಕ್ಕೂ ಅಕ ಲೇಖನಗಳಿವೆ. ಭಾರತದ ಕೃಷಿ ಯಾಕೆ ಲಾಭದಾಯಕವಾಗಿಲ್ಲ, ದೇಶದ ಪ್ರಗತಿ ಹೇಗೆ ಕೃಷಿಯ ಜೊತೆಗಿನ ಕೊಂಡಿಯನ್ನು ಕಳಚಿಕೊಳ್ಳುತ್ತಾ ಅಧಃಪತನದೆಡೆಗೆ ಸಾಗುತ್ತಿದೆ, ರಾಜಕಾರಣಿಗಳ ಕುಲಾಂತರಿ ಜಪಗಳಿಂದ ನಮ್ಮ ನೆಲೆ ಮತ್ತು ಬದುಕು ಹೇಗೆ ಪರಾವಲಂಬಿಯಾಗುತ್ತಿದೆ. ಸೆಲೆಬ್ರಿಟಿಗಳ ಹಿಪಾಕ್ರಸಿ, ಮಾರುಕಟ್ಟೆಯ ಬಿಕ್ಕಟ್ಟು, ನಗರ-ಗ್ರಾಮೀಣ ಭಾರತದ ಸಂಘರ್ಷಗಳನ್ನು ಲೇಖನಗಳು ತೆರೆದಿಡುತ್ತವೆ. ಈರುಳ್ಳಿ ಕಥಾನಕದ ಹಿಂದಿರುವ ಕಪಟ ನಾಟಕವನ್ನು ಅಂಕಿ ಸಂಖ್ಯೆಗಳ ಜೊತೆಗೆ ಶರ್ಮಾ ಬಯಲಿಗೆಳೆಯುತ್ತಾರೆ. ಇಲ್ಲಿರುವ ಪ್ರತೀ ಲೇಖನಗಳೂ ಈ ನೆಲದ ಸತ್ಯವನ್ನು ತೆರೆದಿಡುವ ಶಕ್ತಿಯನ್ನು ಹೊಂದಿವೆ. ಶರ್ಮಾ ಅವರ ಬರಹಗಳು ಕನ್ನಡಕ್ಕಿಳಿಯುವಾಗ ಮೂಲ ಲಾಲಿತ್ಯಕ್ಕೆ ಯಾವುದೇ ಭಂಗ ಬಾರದೇ ಇರುವುದು ಅನುವಾದಕರ ಹೆಗ್ಗಳಿಕೆ. ಈ ನೆಲ, ಬದುಕು, ಭವಿಷ್ಯದ ಕುರಿತಂತೆ ಚಿಂತಿಸುವ ಪ್ರತಿಯೊಬ್ಬರೂ ಓದಬೇಕಾದ ಕೃತಿ ಇದು. ಲೇಖನಗಳಿಗೆ ಪೂರಕವಾಗಿ ಕಲಾವಿದ ಗುಜ್ಜಾರಪ್ಪ ಅವರ ಗೆರೆಗಳು ಪುಸ್ತಕವನ್ನು ಇನ್ನಷ್ಟು ಆಪ್ತವಾಗಿಸುತ್ತವೆೆ.

ಕೃಷಿ ಸಮಯ, ಬೆಂಗಳೂರು ಇವರು ಈ ಕೃತಿಯನ್ನು ಪ್ರಕಟಿಸಿದ್ದಾರೆ. ಕೃತಿಯ ಮುಖಬೆಲೆ 300 ರೂ. ಆಸಕ್ತರು 9845548313 ದೂರವಾಣಿಯನ್ನು ಸಂಪರ್ಕಿಸಬಹುದು. 

share
ಕಾರುಣ್ಯ
ಕಾರುಣ್ಯ
Next Story
X