Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದ ವಿರುದ್ಧ ಹೇಳಿಕೆ ಬೇಡ: ಪಾಕ್...

ಭಾರತದ ವಿರುದ್ಧ ಹೇಳಿಕೆ ಬೇಡ: ಪಾಕ್ ಪ್ರಧಾನಿ ತಾಕೀತು

ಭಾರತದ ವಿರುದ್ಧ ಯಾವುದೇ ಹೇಳಿಕೆಗಳನ್ನು ನೀಡದಿರುವಂತೆ ತನ್ನ ಸಂಪುಟದ ಸಚಿವರಿಗೆ ಪಾಕ್ ಪ್ರಧಾನಿ ನವಾಝ್ ಶರೀಫ್ ತಾಕೀತು ಮಾಡಿರುವುದಾಗಿ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ವಾರ್ತಾಭಾರತಿವಾರ್ತಾಭಾರತಿ20 Dec 2015 12:52 PM IST
share
ಭಾರತದ ವಿರುದ್ಧ ಹೇಳಿಕೆ ಬೇಡ: ಪಾಕ್ ಪ್ರಧಾನಿ ತಾಕೀತು

ಇಸ್ಲಾಮಾಬಾದ್, ಡಿ.19: ಭಾರತದ ವಿರುದ್ಧ ಯಾವುದೇ ಹೇಳಿಕೆಗಳನ್ನು ನೀಡದಿರುವಂತೆ ತನ್ನ ಸಂಪುಟದ ಸಚಿವರಿಗೆ ಪಾಕ್ ಪ್ರಧಾನಿ ನವಾಝ್ ಶರೀಫ್ ತಾಕೀತು ಮಾಡಿರುವುದಾಗಿ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಪ್ರಸಕ್ತ ಎರಡೂ ರಾಷ್ಟ್ರಗಳ ನಡುವೆ ನಡೆಯುತ್ತಿರುವ ಶಾಂತಿ ಪ್ರಕ್ರಿಯೆಗೆ ಧಕ್ಕೆಯುಂಟು ಮಾಡುವ ಅಪಾಯವಿರುವುದರಿಂದ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಭಾರತದ ವಿರುದ್ಧ ಯಾವುದೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡದಿರುವಂತೆ ಪ್ರಧಾನಿ ಸೂಚಿಸಿರುವುದಾಗಿ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಮಾಧ್ಯಮ ವರದಿಯೊಂದು ತಿಳಿಸಿದೆ.

‘‘ಯಾವುದಾದರೂ ಹೇಳಿಕೆ ನೀಡುವುದಿದ್ದಲ್ಲಿ ಅದು ದ್ವಿಪಕ್ಷೀಯ ಶಾಂತಿ ಮಾತುಕತೆಗೆ ಪೂರಕ ಹಾಗೂ ಪ್ರೋತ್ಸಾಹದಾಯಕವಾಗಿರಬೇಕು. ಬದಲಿಗೆ ಎಲ್ಲವನ್ನು ಕೆಡಿಸುವಂತಹ ಹೇಳಿಕೆಗಳನ್ನು ನೀಡಕೂಡದು ಎಂದಿರುವ ನವಾಝ್ ಶರೀಫ್, ಶಾಂತಿ ಪ್ರಕ್ರಿಯೆಯನ್ನು ಉತ್ತೇಜಿಸಬೇಕು ಎಂಬುದಾಗಿ ತಮ್ಮ ನಿಕಟವರ್ತಿಗಳನ್ನು ಹಾಗೂ ಸಚಿವರನ್ನು ಕೇಳಿಕೊಂಡಿದ್ದಾರೆ’’ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ‘ದ ನೇಶನ್’ ಪತ್ರಿಕೆ ವರದಿ ಮಾಡಿದೆ.
ಭಾರತದ ಜೊತೆಗೆ ಉತ್ತಮ ಬಾಂಧವ್ಯ ಹೊಂದುವುದರಿಂದ ಪಾಕ್‌ಗೆ ಮಾತ್ರವಲ್ಲದೆ, ಪ್ರಾದೇಶಿಕವಾಗಿಯೂ ಅನುಕೂಲವಾಗುವ ಆಶಯವನ್ನು ಶರೀಫ್ ವ್ಯಕ್ತಪಡಿಸಿದ್ದಾರೆ.


ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧ ಉತ್ತಮಗೊಳ್ಳುವ ಬಗ್ಗೆ ತಾನು ಆಶಾವಾದಿ ಯಾಗಿರುವುದಾಗಿ ಅವರು ಹೇಳಿದ್ದಾರೆ.
ಇತ್ತೀಚೆಗೆ ಇಸ್ಲಾಮಾಬಾದ್‌ನಲ್ಲಿ ಏರ್ಪಡಿಸಲಾಗಿದ್ದ ‘ಹಾರ್ಟ್ ಆಫ್ ಏಶ್ಯ’ ಸಮ್ಮೇಳನದಲ್ಲಿ ಭಾಗವಹಿಸಲು ತೆರಳಿದ್ದ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಪಾಕ್ ಪ್ರಧಾನಿ ನವಾಝ್ ಶರೀಫ್ ಹಾಗೂ ಅವರ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್ ಅಝೀಝ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆ ಬಳಿಕ ಉಭಯ ರಾಷ್ಟ್ರಗಳು ಸಮಗ್ರ ದ್ವಿಪಕ್ಷೀಯ ಮಾತುಕತೆಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದವು.
ಇತ್ತೀಚೆಗೆ ನಡೆದ ಭಾರತ-ಪಾಕ್ ಮಾತುಕತೆ ವೇಳೆ ವ್ಯಾಪಾರ ವಹಿವಾಟು, ಭಯೋತ್ಪಾದನೆ ನಿಗ್ರಹ ವಿಷಯಗಳ ಬಗ್ಗೆ ಚರ್ಚಿಸಿದಾಗ ಕಾಶ್ಮೀರ ವಿವಾದದ ಬಗ್ಗೆ ಪ್ರಸ್ತಾಪಿಸಲು ಶರೀಫ್ ಉತ್ಸುಕರಾಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


 ಪ್ರಧಾನಿ ನವಾಝ್ ಶರೀಫ್ ಹಾಗೂ ರಾಷ್ಟ್ರದ ಸೇನಾ ನಾಯಕತ್ವವು ಭಾರತದೊಂದಿಗಿನ ಶಾಂತಿ ಸ್ಥಾಪನೆಗೆ ಸಂಬಂಧಿಸಿ ಸಮಾನ ನಿಲುವು ಹೊಂದಿದೆ ಎಂದು ಇನ್ನೋರ್ವ ಅಧಿಕಾರಿಯನ್ನು ಉಲ್ಲೇಖಿಸಿ ವರದಿ ತಿಳಿಸಿದೆ. ಪಾಕ್ ಪ್ರಧಾನಿ ನವಾಝ್ ಶರೀಫ್ ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ ಜನವರಿಯಲ್ಲಿ ಸ್ವಿಝರ್‌ಲ್ಯಾಂಡ್‌ನಲ್ಲಿ ಭೇಟಿಯಾಗುವ ನಿರೀಕ್ಷೆಯಿದೆ. ಜನವರಿಯಲ್ಲಿ ದಾವೊಸ್-ಕ್ಲೋಸ್ಟರ್ಸ್‌ನಲ್ಲಿ ನಡೆಯಲಿರುವ ಜಾಗತಿಕ ಆರ್ಥಿಕ ವೇದಿಕೆಯ 46ನೆ ವಾರ್ಷಿಕ ಸಭೆಯಲ್ಲಿ ಉಭಯ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X