Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವಸಂಸ್ಥೆಯಿಂದ ನಿರ್ಣಯ ಅಂಗೀಕಾರ:...

ವಿಶ್ವಸಂಸ್ಥೆಯಿಂದ ನಿರ್ಣಯ ಅಂಗೀಕಾರ: ಸಿರಿಯದಲ್ಲಿ ಶಾಂತಿ ಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ20 Dec 2015 3:44 PM IST
share
ವಿಶ್ವಸಂಸ್ಥೆಯಿಂದ ನಿರ್ಣಯ ಅಂಗೀಕಾರ: ಸಿರಿಯದಲ್ಲಿ ಶಾಂತಿ ಸ್ಥಾಪನೆ

ಕಳೆದ ಸುಮಾರು ಐದು ವರ್ಷಗಳಿಂದ ಸಮರ ಜರ್ಜರಿತವಾಗಿರುವ ಸಿರಿಯದಲ್ಲಿ ಶಾಂತಿ ಸ್ಥಾಪನೆಗೆ ಸಂಬಂಧಿಸಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿರ್ಣಯವೊಂದನ್ನು ಸರ್ವಾನುಮತದಿಂದ ಅಂಗೀಕರಿಸಿದೆ ಎಂದು ವರದಿಗಳು ತಿಳಿಸಿವೆ.


ಆದರೆ ಈ ಕುರಿತು ಸಿರಿಯದ ಅಧ್ಯಕ್ಷ ಬಶರ್ ಅಲ್ ಅಸದ್ ವೌನ ತಳದಿರುವುದಾಗಿ ಮಾಧ್ಯಮ ವರದಿಗಳು ಹೇಳಿವೆ.
  ಶುಕ್ರವಾರ ನಡೆದ ಭದ್ರತಾ ಮಂಡಳಿಯ 15 ಖಾಯಂ ಸದಸ್ಯ ರಾಷ್ಟ್ರಗಳ ಸಚಿವ ಮಟ್ಟದ ಸಭೆಯಲ್ಲಿ ಯುದ್ಧ ಕೊನೆಗೊಳಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಮುಂದಿನ ತಿಂಗಳು ಸಿರಿಯ ಸರಕಾರ ಹಾಗೂ ಆಡಳಿತ ವಿರೋಧಿಗಳ ನಡುವೆ ಮಾತುಕತೆ ನಡೆಯಲಿದೆ. ತನ್ಮೂಲಕ ಸಿರಿಯದಲ್ಲಿನ ಸಮರವನ್ನು ಕೊನೆಗಾಣಿಸಲು ವಿಶ್ವ ಸಂಸ್ಥೆ ಮುಂದಾಗಿದೆ.


 ‘‘ಇಲ್ಲಿ ಅಂಗೀಕಾರ ಗೊಂಡಿರುವ ನಿರ್ಣಯವು ಸಿರಿಯದಲ್ಲಿ ಯುದ್ಧದಿಂದ ಸಂಭವಿಸುತ್ತಿರುವ ನಾಗರಿಕರ ಹತ್ಯೆಯನ್ನು ನಿಲ್ಲಿಸಲು ವಿಶ್ವಕ್ಕೆ ಸ್ಪಷ್ಟ ಸಂದೇಶವನ್ನು ರವಾನಿಸುತ್ತದೆ ಮತ್ತು ಯುದ್ಧಭೂಮಿಯಲ್ಲಿ ಜರ್ಜರಿತರಾಗಿ ನರಳುತ್ತಿರುವ ಮುಗ್ಧ ಜನರನ್ನು ಬೆಂಬಲಿಸುತ್ತದೆ’’ ಎಂದು ನಿರ್ಣಯ ಅಂಗೀಕಾರಗೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರಿ ಹೇಳಿದ್ದಾರೆ.
ಐಸಿಸ್ ಉಗ್ರರನ್ನು ಮಟ್ಟ ಹಾಕುವ ಕಾರ್ಯದಲ್ಲಿ ಅಮೆರಿಕ ಪಾಲುದಾರಿಕೆ ವಹಿಸುತ್ತದೆ ಎಂಬುದಾಗಿಯೂ ಅವರು ಇದೇ ವೇಳೆ ಒತ್ತಿ ಹೇಳಿದ್ದಾರೆ.
 ವಿಶ್ವಸಂಸ್ಥೆಯ ಮಧ್ಯಸ್ಥಿಕೆಯಲ್ಲಿ ಮುಂದಿನ ಆರು ತಿಂಗಳ ಅವಧಿಯಲ್ಲಿ ಸಿರಿಯ ನೇತೃತ್ವದ ರಾಜಕೀಯ ಪ್ರಕ್ರಿಯೆಯ ಮೂಲಕ ರಾಷ್ಟ್ರದಲ್ಲಿ ‘ವಿಶ್ವಾಸಾರ್ಹ, ಸಮಗ್ರ ಹಾಗೂ ಜನಾಂಗೀಯ ಭೇದವಿಲ್ಲದ’ ಸರಕಾರವೊಂದನ್ನು ರಚಿಸುವಂತೆ ನಿರ್ಣಯ ಕರೆ ನೀಡಿದೆ. ಸಿರಿಯದ ಅಧ್ಯಕ್ಷ ಬಶರ್ ಅಲ್ ಅಸದ್ ಹೊಸದಾಗಿ ನಡೆಯುವ ಚುನಾವಣೆಗಳಲ್ಲಿ ಸ್ಪರ್ಧಿಸಬಹುದೇ ಎಂಬುದರ ಬಗ್ಗೆ ನಿರ್ಣಯದಲ್ಲಿ ಯಾವುದೇ ಉಲ್ಲೇಖ ಮಾಡಲಾಗಿಲ್ಲ ಎಂದು ವರದಿಗಳು ತಿಳಿಸಿವೆ.


 ಅರಬ್ ಲೀಗ್, ಐರೋಪ್ಯ ಒಕ್ಕೂಟ, ವಿಶ್ವಸಂಸ್ಥೆ ಮತ್ತು ಅಮೆರಿಕ ಹಾಗೂ ರಶ್ಯ ಒಳಗೊಂಡಂತೆ 17 ರಾಷ್ಟ್ರಗಳನ್ನೊಳಗೊಂಡಿರುವ ಅಂತಾರಾಷ್ಟ್ರೀಯ ಸಿರಿಯ ಬೆಂಬಲಿಗರ ಸಮೂಹ(ಐಎಸ್‌ಎಸ್‌ಜಿ)ದ ಜೊತೆಗೆ ನಡೆಸಿದ ಮಾತುಕತೆ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ವಿವರಿಸಿದ ಬಳಿಕ ನಿರ್ಣಯವು ಸರ್ವಾನುಮತದಿಂದ ಅಂಗೀಕಾರಗೊಂಡಿರುವುದಾಗಿ ವರದಿಗಳು ತಿಳಿಸಿವೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X