Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂವಿಧಾನಬಾಹಿರ ಶಕ್ತಿಗಳ ಪ್ರಭುತ್ವ...

ಸಂವಿಧಾನಬಾಹಿರ ಶಕ್ತಿಗಳ ಪ್ರಭುತ್ವ ಅಪಾಯಕಾರಿ: ಅಮೀನ್ ಮಟ್ಟು

ವಾರ್ತಾಭಾರತಿವಾರ್ತಾಭಾರತಿ21 Dec 2015 12:59 PM IST
share
ಸಂವಿಧಾನಬಾಹಿರ ಶಕ್ತಿಗಳ ಪ್ರಭುತ್ವ ಅಪಾಯಕಾರಿ: ಅಮೀನ್ ಮಟ್ಟು

ಜನನುಡಿ-2015 ಸಮಾರೋಪ

ಮಂಗಳೂರು, ಡಿ.20: ದೇಶದಲ್ಲಿ ಸಂವಿಧಾನಬಾಹಿರವಾದ ಶಕ್ತಿಗಳು ಪ್ರಭುತ್ವವನ್ನು ನಡೆಸುವುದು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ರಾಜ್ಯ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಅಭಿಪ್ರಾಯಿಸಿದ್ದಾರೆ.


 ಅವರಿಂದು ನಂತೂರಿನ ಶಾಂತಿಕಿರಣದಲ್ಲಿ ಅಭಿಮತ ಸಂಘಟನೆಯ ನೇತೃತ್ವದಲ್ಲಿ ಎರಡು ದಿನಗಳ ಕಾಲ ನಡೆದ ‘ಜನನುಡಿ-2015’ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಪ್ರಜಾಪ್ರಭುತ್ವದಲ್ಲಿ ಪ್ರಜೆಗಳಿಂದ ಆಯ್ಕೆಯಾದ ಜನಪ್ರತಿನಿಧಿಗಳು ಹಾಗೂ ಸಂವಿಧಾನ ಪ್ರಕಾರ ರಚನೆಯಾದ ಇತರ ಅಂಗ ಸಂಸ್ಥೆಗಳನ್ನು ಬದಿಗೆ ಸರಿಸಿ ಚುನಾವಣೆಯ ಮೂಲಕ ಆಯ್ಕೆಯಾಗದೆ ಇರುವ ಶಕ್ತಿಗಳು ಪ್ರಭುತ್ವವನ್ನು ಮುನ್ನಡೆಸುತ್ತಿವೆ. ದೇಶದ ಆಡಳಿತದ ನೀತಿಯನ್ನು ಅವರೇ ರೂಪಿಸು ತ್ತಿದ್ದಾರೆ. ಈ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಅವರು ಹೇಳಿದರು.

ಸಾಹಿತಿಗಳು ಪ್ರಶಸ್ತಿ ವಾಪಸ್ ಮಾಡಿರುವುದು ಅಸಹಿಷ್ಣುತೆಯ ವಿರುದ್ಧ ಸಜ್ಜನರು ನಡೆಸಿದ ಪ್ರತಿಭಟನೆಯಾಗಿದೆ. ಇದರಿಂದ ದೇಶದಲ್ಲಿ ಸಾಹಿತಿಗಳು, ಬುದ್ಧಿಜೀವಿಗಳು ಎಲ್ಲ ಕಾಲದಲ್ಲೂ ವೌನವಾಗಿರುತ್ತಾರೆ ಎನ್ನುವುದು ಸುಳ್ಳಾಗಿದೆ. ಇದೊಂದು ಮಹತ್ವದ ಬೆಳವಣಿಗೆ ಎಂದವರು ನುಡಿದರು.
ದೇಶದಲ್ಲಿ ಸಾವಿರಾರು ವರ್ಷಗಳ ಹಿಂದೆಯೇ ಅಸಹಿಷ್ಣುತೆ ಇತ್ತು. ಇದೇ ಕಾರಣಕ್ಕೆ ಬುದ್ಧ, ಬಸವಣ್ಣ, ಪೆರಿಯಾರ್, ನಾರಾಯಣ ಗುರು, ಅಂಬೇಡ್ಕರ್‌ರವರು ಅಸಹಿಷ್ಣುತೆಯ ವಿರುದ್ಧ ಹೋರಾಟದ ಚಳವಳಿ ರೂಪಿಸಿದ ಪರಂಪರೆ ಕಟ್ಟಿಕೊಟ್ಟಿದ್ದಾರೆ ಎಂದು ತಿಳಿಸಿದರು.


ಜನನುಡಿ ಸಾಂಸ್ಕೃತಿಕ ಮುಖವಾಡದ ರಾಜಕಾರಣವನ್ನು ಬಯಲು ಮಾಡುವಲ್ಲಿ, ಹೊಸ ಪರಂಪರೆಯನ್ನು ಹುಟ್ಟು ಹಾಕುವಲ್ಲಿ ಯಶಸ್ವಿಯಾಗಿದೆ ಎಂದರು.ಖ್ಯಾತ ವಿಮರ್ಶಕ ಪ್ರೊ.ರಹಮತ್ ತರೀಕೆರೆ ಮಾತನಾಡಿ, ಭಾರತದ ಸಮಗ್ರತೆ ಇರುವುದು ಅದರ ಬಹುತ್ವದಲ್ಲಿ. ಇಲ್ಲಿ ಬೆಳೆದು ಬಂದಿರುವ ಕೂಡು ಸಂಸ್ಕೃತಿ ಇಲ್ಲಿನ ವಿಶೇಷತೆಯಾಗಿದೆ. ಧರ್ಮಗಳ ಒಳಗಿರುವ ಮಾನವೀಯ ವೌಲ್ಯಗಳನ್ನು ಅರಿಯದೆ ಹೋದರೆ ನಾವು ಮತೀಯವಾದಿಗಳಾಗುತ್ತೇವೆ.

ಮತೀಯವಾಗಿ ಸಮಾಜವನ್ನು ಧ್ರುವೀಕರಿಸುವುದೆಂದರೆ ಭಾರತವನ್ನು ನಾಶ ಮಾಡಿದಂತೆ. ಎಲ್ಲ ಧರ್ಮಗಳ ಮೂಲಭೂತವಾದಿಗಳಿಂದ ಮಹಿಳೆಯರ, ದುರ್ಬಲರ ಹಕ್ಕುಗಳು ದಮನಗೊಳ್ಳುತ್ತವೆ. ಒಂದು ಸಮುದಾಯವನ್ನು ದಮನ ಮಾಡಿ ಇನ್ನೊಂದು ಸಮುದಾಯವನ್ನು ಬಲಿಷ್ಠಗೊಳಿಸಲು ಅಸಾಧ್ಯ ಎಂದರು.

ರಾಷ್ಟ್ರೀಯ ವಿಚಾರವಾದಿ ಸಂಘದ ಅಧ್ಯಕ್ಷ ಪ್ರೊ.ನರೇಂದ್ರ ನಾಯಕ್ ಮಾತನಾಡಿ, ಸಮಾಜದಲ್ಲಿ ಅವೈಜ್ಞಾನಿಕವಾದ ವಿಚಾರಗಳನ್ನು ಹರಡುತ್ತ ಭವಿಷ್ಯ, ಜ್ಯೋತಿಷ್ಯಗಳೆನ್ನುತ್ತ ಆಧಾರರಹಿತವಾಗಿ ರೋಗಗಳಿಗೆ ಮದ್ದು ನೀಡುತ್ತೇವೆ. ಬುದ್ಧಿಶಕ್ತಿ ಹೆಚ್ಚಿಸಲು ಮದ್ದು ನೀಡುವ, ಮೆದುಳಿನ ಶಕ್ತಿ ಹೆಚ್ಚಿಸಲು ಚಿಕಿತ್ಸೆ ನೀಡುವ ಅವೈಜ್ಞಾನಿಕ ವಿಚಾರಗಳ ವಿರುದ್ಧ ಜಾಗೃತಿ ಮೂಡಿಸಬೇಕಾಗಿದೆ. ಇದರ ಹಿಂದಿ ರುವ ಮುಖವಾಡಗಳನ್ನು ಬಯಲು ಮಾಡ ಬೇಕಾಗಿದ್ದು, ಇದರ ವಿರುದ್ಧ ನೇರ ಹೋರಾಟ ನಡೆಸಬೇಕಾಗಿದೆ ಎಂದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X