Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಡಿಯನ್ ಸೂಪರ್ ಲೀಗ್: ಧೋನಿ ತಂಡ...

ಇಂಡಿಯನ್ ಸೂಪರ್ ಲೀಗ್: ಧೋನಿ ತಂಡ ಚೆನ್ನೈಯನ್ ಚಾಂಪಿಯನ್

ಭಾರತದ ಸೀಮಿತ ಓವರ್‌ಗಳ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಫುಟ್ಬಾಲ್ ತಂಡ ಎಫ್‌ಸಿ ಚೆನ್ನೈಯಿನ್ ಇಲ್ಲಿ ನಡೆದ ಐಎಎಸ್‌ಎಲ್‌ನ ಫೈನಲ್‌ನಲ್ಲಿ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿಯ ಎಫ್‌ಸಿ ಗೋವಾ ಫುಟ್ಬಾಲ್ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ಬಾಚಿಕೊಂಡಿದೆ.

ವಾರ್ತಾಭಾರತಿವಾರ್ತಾಭಾರತಿ21 Dec 2015 3:57 PM IST
share
ಇಂಡಿಯನ್ ಸೂಪರ್ ಲೀಗ್: ಧೋನಿ ತಂಡ ಚೆನ್ನೈಯನ್  ಚಾಂಪಿಯನ್

ಭಾರತದ ಸೀಮಿತ ಓವರ್‌ಗಳ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಫುಟ್ಬಾಲ್ ತಂಡ ಎಫ್‌ಸಿ ಚೆನ್ನೈಯಿನ್ ಇಲ್ಲಿ ನಡೆದ ಐಎಎಸ್‌ಎಲ್‌ನ ಫೈನಲ್‌ನಲ್ಲಿ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿಯ ಎಫ್‌ಸಿ ಗೋವಾ ಫುಟ್ಬಾಲ್ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ಬಾಚಿಕೊಂಡಿದೆ.


ಫಟೊರ್ಡಾದ ಜವಾಹರ್‌ಲಾಲ್ ನೆಹರೂ ಸ್ಟೇಡಿಯಂನಲ್ಲಿ ಇಂದು ನಡೆದ ಇಂಡಿಯನ್ ಸೂಪರ್ ಲೀಗ್(ಐಎಸ್‌ಎಲ್) ಫೈನಲ್‌ನಲ್ಲಿ ಚೆನ್ನೈಯಿನ್ ತಂಡ ಗೋವಾ ತಂಡವನ್ನು 3-2 ಅಂತರದಲ್ಲಿ ಮಣಿಸಿ ಚಾಂಪಿಯನ್ ಎನಿಸಿಕೊಂಡಿತು.


ಕುತೂಹಲ ಕೆರಳಿಸಿದ್ದ ಪಂದ್ಯದಲ್ಲಿ ಎಫ್‌ಸಿ ಗೋವಾ ತಂಡ ಚೊಚ್ಚಲ ಪ್ರಶಸ್ತಿ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿತು.
 ಪ್ರಥಮಾರ್ಧದಲ್ಲಿ ಉಭಯ ತಂಡಗಳಿಂದಲೂ ಗೋಲು ದಾಖಲಾಗಿರಲಿಲ್ಲ. ಆದರೆ ದ್ವಿತೀಯಾರ್ಧ ದಲ್ಲಿ ಬ್ರುನೊ ಪೆಲ್ಲಿಸ್ಸರಿ (54ನೆ ನಿಮಿಷ) ಚೆನ್ನೈನ ಗೋಲು ಖಾತೆೆ ತೆರೆದಿದ್ದರು. ಮತ್ತೆ ನಾಲ್ಕು ನಿಮಿಷ ಕಳೆಯುವಷ್ಟರಲ್ಲಿ ಗೋವಾ ತಂಡದ ಥೊಂಗ್‌ಕೊಸಿಮ್ ಹಾವೊಕಿಪ್ (58ನೆ ನಿಮಿಷ) ಗೋಲು ಜಮೆ ಮಾಡಿ 1-1 ಸಮಬಲ ಸಾಧಿಸಿದ್ದರು.


  ಗೋವಾ ತಂಡದ ಜಾಫ್ರಿ 87ನೆ ನಿಮಿಷದಲ್ಲಿ ಗೋಲು ಸಂಪಾದಿಸಿ ಗೋವಾ ತಂಡ 2-1 ಮುನ್ನಡೆಗೆ ನೆರವಾಗಿದ್ದರು. ಇದು ಗೋವಾ ಪಾಲಿಗೆ ಗೆಲುನಿನ ಗೋಲು ಎಂದು ಭಾವಿಸಲಾಗಿತ್ತು. ಆದರೆ ಮತ್ತೆ ಮೂರು ನಿಮಿಷಗಳಲ್ಲಿ ಗೋವಾದ ಕೈಯಲ್ಲಿದ್ದ ಪಂದ್ಯ ಜಾರಿತು. 90ನೆ ನಿಮಿಷದಲ್ಲಿ ಗೋವಾ ತಂಡದ ಗೋಲು ಕೀಪರ್ ಲಕ್ಷ್ಮೀಕಾಂತ್ ಕಟ್ಟಿಮನಿ ಮಾಡಿದ ಎಡವಟ್ಟಿನಿಂದಾಗಿ ಚೆನ್ನೈ ಖಾತೆಗೆ ಸ್ವಯಂ ಗೋಲು ಉಡುಗೊರೆ ಸಿಕ್ಕಿತು. ಇದರ ಬೆನ್ನಿಗೆ ಮೆಂಡೊನ್ಸಾ ವೆಲೆನ್ಸಿಯಾ ಗೋಲು ಬಾರಿಸುವುದರೊಂದಿಗೆ ಚೆನ್ನೈ ತಂಡ ಎರಡನೆ ಅವೃತ್ತಿಯ ಐಎಎಸ್‌ಎಲ್ ಕಿರೀಟವನ್ನು ತನ್ನದಾಗಿಸಿಕೊಂಡಿತು.
 ಮೆಂಡೊನ್ಸಾ ಗೆಲುವಿನ ಗೋಲು ದಾಖಲಿಸುವು ದರೊಂದಿಗೆ ಚೆನ್ನೈ ಎಫ್‌ಸಿಗೆ ತಾನೊಬ್ಬ ಅರ್ಹ ಆಟಗಾರ ಎನ್ನುವುದನ್ನು ಅವರು ಸಾಬೀತುಪಡಿಸಿದರು. ಚೆನ್ನೈ ತಂಡಕ್ಕೆ ತವರಿನಲ್ಲಿ ಭಾರೀ ಮಳೆ ಮತ್ತು ಪ್ರವಾಹ ದಿಂದಾಗಿ ಆಡಲು ಸಾಧ್ಯವಾಗಲಿಲ್ಲ. ಅಂತಿಮ ಕ್ಷಣದಲ್ಲಿ ದಾಖಲಾದ ಗೋಲುಗಳು ಪಂದ್ಯದ ಫಲಿತಾಂಶವನ್ನು ನಿರ್ಣಯಿಸಿತು.


ಗೋವಾ ತಂಡ ಹಲವು ಏಳುಬೀಳುಗಳ ನಡುವೆ ಫೈನಲ್ ಪ್ರವೇಶಿಸಿತ್ತು. 29 ಗೋಲು ಸಂಪಾದಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದ ಗೋವಾ ತಂಡ ಫೈನಲ್‌ನಲ್ಲಿ ಎಡವಿತು.
ಈ ಆವೃತ್ತಿಯ ಐಎಸ್‌ಎಲ್‌ನಲ್ಲಿ ದಾಖಲೆಯ ಗೋಲು ದಾಖಲಾಗಿತ್ತು ಕಳೆದ ವರ್ಷ 121 ಗೋಲು ದಾಖಲಾಗಿತ್ತು. ಈ ಸಾಲಿನಲ್ಲಿ 60 ಪಂದ್ಯಗಳಲ್ಲಿ 186 ಗೋಲು ಜಮೆ ಆಗಿದೆ. ಗೋವಾದಲ್ಲಿ ನಡೆದ ಫೈನಲ್‌ನಲ್ಲಿ 5 ಗೋಲುಗಳು ಬಂದಿವೆ. ಅದರಲ್ಲೂ ಮುಖ್ಯವಾಗಿ ದ್ವಿತೀಯಾರ್ಧದಲ್ಲಿ ಗೋಲುಗಳು ದಾಖಲಾಗಿದೆ.


ವಿಜೇತ ಚೆನ್ನೈ ತಂಡ 8 ಕೋಟಿ ರೂ, ದ್ವಿತೀಯ ಸ್ಥಾನ ಪಡೆದ ಗೋವಾ 4 ಕೋಟಿ ರೂ. ಮೊತ್ತದ ಬಹುಮಾನ ಪಡೆಯಿತು.
 ನೀತಾ ಅಂಬಾನಿ ಬಹುಮಾನ ವಿತರಿಸಿದರು.ಚೆನ್ನೈಯಿನ್ ಎಫ್‌ಸಿಯ ಸ್ಟೀವನ್ ಮೆಂಡೊನ್ಸಾ ‘ಗೋಲ್ಡನ್ ಬೂಟ್’ ಮತ್ತು ‘ಹೀರೊ ಆಫ್ ಲೀಗ್ ಅವಾರ್ಡ್’ ಚೆನ್ನೈ ತಂಡದ ಗೋಲ್ ಕೀಪರ್ ಅಪೋಲಾ ಎಡ್ಮಿಯಾ ಎಡೆಲ್ ಬೇಟೆ ‘ಗೋಲ್ಡನ್ ಗ್ಲೌವ್, ಚೆನ್ನೈನ ಜೀಜೆ ಉದಯೋನ್ಮುಖ ಆಟಗಾರ ಪ್ರಶಸ್ತಿ ಪಡೆದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X