Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ತುಳುನಾಡಿನ ಹಿನ್ನೋಟ ಮತ್ತು ಮುನ್ನೋಟ

ತುಳುನಾಡಿನ ಹಿನ್ನೋಟ ಮತ್ತು ಮುನ್ನೋಟ

-ಕಾರುಣ್ಯ-ಕಾರುಣ್ಯ22 Dec 2015 7:51 PM IST
share
ತುಳುನಾಡಿನ ಹಿನ್ನೋಟ ಮತ್ತು ಮುನ್ನೋಟ

 ‘ಇತಿಹಾಸದ ಶೋಧ, ಗತದ ಹುಡುಕಾಟ’ ಲೇಖಕ ಬಾರ್ಕೂರು ಉದಯ ಅವರ ಹೊಸ ಸಂಶೋಧನಾ ಕೃತಿಯಾಗಿದೆ. ತುಳು ಸಂಸ್ಕೃತಿ ಚರಿತ್ರೆ ಕಥನದ ನಿರೂಪಣೆಯನ್ನು ಈ ಕೃತಿಯಲ್ಲಿ ಮಾಡಲಾಗಿದೆ. ಕರಾವಳಿ ಕರ್ನಾಟಕದ ಇತಿಹಾಸ, ಸಂಸ್ಕೃತಿ, ಧಾರ್ಮಿಕ ಪರಂಪರೆಗಳನ್ನು ಕುರಿತು ಇಲ್ಲಿ ಚರ್ಚಿಸಲಾಗಿದೆ. ತುಳು ಇತಿಹಾಸವೆನ್ನುವುದು ನೆಲಮೂಲವಾದದ್ದು. ಇಂದು ಆ ಇತಿಹಾಸವನ್ನು ತಿರುಚಿ, ಅಲ್ಲಿ ಅನ್ಯವಾದುದನ್ನು ತುರುಕಿಸಿ ಅದನ್ನೇ ಇತಿಹಾಸ, ಪರಂಪರೆ ಎಂದು ನಂಬಿಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ, ತುಳು ಬೇರನ್ನು ಹುಡುಕುತ್ತಾ ಹೋಗುವ ಈ ಕೃತಿ, ವರ್ತಮಾನಕ್ಕೆ ಅತ್ಯಗತ್ಯವಾದ ಕೊಡುಗೆಯಾಗಿದೆ.

ಇಲ್ಲಿ ಇತಿಹಾಸ ಕಥನ, ಸ್ಥಳೀಯ ಆಡಳಿತ, ಬಾರ್ಕೂರಿನ ಇತಿಹಾಸ, ಅಬ್ಬಕ್ಕ ರಾಣಿ ಕಾಲದ ರಾಜಕೀಯ ಹಾಗೂ ಸಾಮಾಜಿಕ ಪರಿಸರ, ಹೊನ್ನೆ ಕಂಬಳಿ ಅರಸರು, ದೈವಾರಾಧನೆಯ ಪ್ರತೀಕವಾಗಿ ಕಚ್ಚೂರ ಮಾಲ್ದಿ ಮತ್ತು ಕೋಟೆದ ಬಬ್ಬು ಮೊದಲಾದುವುಗಳಲ್ಲದೆ ಆಧುನಿಕ ಜಗತ್ತಿಗೆ ತುಳುನಾಡನ್ನು ತೆರೆದುಕೊಟ್ಟ ಸಮಾಜ ಸುಧಾರಕ ಕುದ್ಮಲ್ ರಂಗರಾವ್‌ನ್ನೂ ಪರಿಚಯಿಸಲಾಗಿದೆ. ಕಾರಂತರ ಚೋಮನ ದುಡಿಯನ್ನು ಮುಂದಿಟ್ಟುಕೊಂಡು ಆಧುನಿಕೋತ್ತರವಾದ ಧ್ವನಿಗಳನ್ನು ಲೇಖಕರು ಚರ್ಚಿಸಿದ್ದಾರೆ.

ಇಲ್ಲಿ ಒಟ್ಟು 11 ಅಧ್ಯಾಯಗಳಿವೆ. ಮೊದಲ ಮತ್ತು ಕೊನೆಯ ಲೇಖನಗಳು ಇತಿಹಾಸ ರಚನಾ ಪರಂಪರೆಯ ಕುರಿತು ವ್ಯಾಖ್ಯಾನಗಳಾಗಿವೆ. ಆಳೂಪರ ಕಾಲದಿಂದ ವಿಜಯನಗರದ ಕಾಲದವರೆಗಿನ ತುಳುವ ಪರಂಪರೆಯನ್ನು ಕುರಿತು ವಿಶ್ಲೇಷನಾತ್ಮಕ ಅಧ್ಯಯನ ಮಾಡಲಾಗಿದೆ. ತುಳುನಾಡಿನ ಇತಿಹಾಸ ಹೇಳುವ ಸತ್ಯಗಳು, ತುಳುನಾಡಿನಲ್ಲಿ ಬೇರು ಬಿಟ್ಟ ಗೋಚರ, ಅಗೋಚರ ಗುಲಾಮಗಿರಿ ಪದ್ಧತಿ, ಇಲ್ಲಿನ ಪ್ರತಿಭಟನೆ, ಬಂಡಾಯ ಇತ್ಯಾದಿಗಳನ್ನು ಬೇರೆ ಬೇರೆ ಪಾತ್ರಗಳನ್ನು ಇಟ್ಟುಕೊಂಡು ಲೇಖಕರು ಚರ್ಚಿಸುತ್ತಾರೆ. ದ್ರಾವಿಡ ಸಂಸ್ಕೃತಿಯ ಮತ್ತು ಕನ್ನಡ ನಾಡು ನುಡಿಯ ಅಧ್ಯಯನದ ಸಂದರ್ಭದಲ್ಲಿ ಅತ್ಯಮೂಲ್ಯ ಕೃತಿ ಇದಾಗಿದೆ.

 ಆಕೃತಿ ಆಶಯ ಪಬ್ಲಿಕೇಶನ್ಸ್, ಮಂಗಳೂರು ಇವರು ಪ್ರಕಟಿಸಿರುವ ಈ ಕೃತಿಯ ಮುಖಬೆಲೆ 230 ರೂ. ಆಸಕ್ತರು 944 8331 284 ದೂರವಾಣಿಯನ್ನು ಸಂಪರ್ಕಿಸಬಹುದಾಗಿದೆ.

share
-ಕಾರುಣ್ಯ
-ಕಾರುಣ್ಯ
Next Story
X