Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಪ್ರಭುತ್ವ-ಜನರ ನಡುವಿನ ಸಂಘರ್ಷವಾಗಿ...

ಪ್ರಭುತ್ವ-ಜನರ ನಡುವಿನ ಸಂಘರ್ಷವಾಗಿ ಪರಿಸರ..

ಕಾರುಣ್ಯಕಾರುಣ್ಯ23 Dec 2015 3:24 PM IST
share
ಪ್ರಭುತ್ವ-ಜನರ ನಡುವಿನ ಸಂಘರ್ಷವಾಗಿ ಪರಿಸರ..

ಡಾ. ಟಿ.ಎಸ್. ವಿವೇಕಾನಂದ್ ಪರಿಸರವನ್ನು ಕಂಡ ಬಗೆ ಬಹಳ ವಿಶಿಷ್ಟವಾದುದು. ಅವರ ಪರಿಸರದಲ್ಲಿ ಗಾಳಿ, ಬೆಳಕು, ಮಣ್ಣು , ಕಾಡು ಮಾತ್ರವಲ್ಲ ಮನುಷ್ಯ ಮತ್ತು ಮನುಷ್ಯತ್ವವೂ ಪ್ರಮುಖ ಸ್ಥಾನ ಪಡೆಯುತ್ತದೆ. ಇವರ ‘ಭೂಮಿಗೀತೆ’ ಕೃತಿ ಈ ಕಾರಣಕ್ಕಾಗಿಯೇ ಸಾಕಷ್ಟು ಹೆಸರು ಮಾಡಿತ್ತು.

ಪರಿಸರವಾದದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಂಪನ್ಮೂಲಗಳ ಹಂಚಿಕೆಯ ಮಹತ್ವಗಳನ್ನು ಈ ಕೃತಿಯಲ್ಲಿ ಸಾದರ ಪಡಿಸಿದವರು. ಆದುದರಿಂದಲೇ ಅವರ ಪರಿಸರದ ಮಾತುಗಳು ಸದಾ ಜೀವಂತಿಕೆಯಿಂದ ನಳನಳಿಸುತ್ತವೆ. ‘ಜೀವ ಪಲ್ಲಟಗಳ ಆತ್ಮಕಥನ’ ಕೃತಿಯೂ ಈ ಕಾರಣಕ್ಕಾಗಿಯೇ ಮುಖ್ಯವೆನಿಸುತ್ತದೆ. ಭೂಮಿಗೀತೆಯ ಎರಡನೆ ಭಾಗವೆಂದು ಇದನ್ನು ಪರಿಗಣಿಸಿದರೂ ಸಲ್ಲುತ್ತದೆ.

ಈ ಕೃತಿ ‘ಗಿಡ ನೆಡಿ’ ಎನ್ನುವ ಜನಪ್ರಿಯ ಪರಿಸರವಾದಕ್ಕೆ ಹೊರತಾದುದು. ಅರಣ್ಯ ನೀತಿಯಿಂದ ಬಳಲುತ್ತಿರುವ ಬುಡಕಟ್ಟು ಜನರು, ಕೃಷಿ ನೀತಿಯಿಂದ ಆತ್ಮಹತ್ಯೆಗೀಡಾಗುತ್ತಿರುವ ರೈತರು, ಡೀಸೆಲ್ ತೆರಿಗೆಯ ದುರುಪಯೋಗದಿಂದ ಆಗುವ ಪರಿಸರ ಮಾಲಿನ್ಯ, ಗೋ ಉದ್ಯಮದ ಹಿಂದಿರುವ ರಾಜಕೀಯ, ಕೃಷಿಯಲ್ಲಿರುವ ಬಡಜನರ ಸಾಂಪ್ರದಾಯಿಕ ವಿವೇಕ, ನದಿಗಳು ಮತ್ತು ಅದನ್ನು ಅವಲಂಬಿಸಿದ ಜನರು....ಹೀಗೆ ಪರಿಸರದ ಚರ್ಚೆ ವಿಸ್ತಾರವಾಗುತ್ತಾ ಅದು ಪ್ರಭುತ್ವ ಮತ್ತು ಜನರ ನಡುವಿನ ಸಂಘರ್ಷವಾಗಿ ಹೇಗೆ ನಮ್ಮ ಮುಂದಿದೆ ಎನ್ನುವುದನ್ನು ಈ ಕೃತಿ ತೆರೆದಿಡುತ್ತದೆ. ಪರಿಸರದ ಕುರಿತಂತೆ ಹೊಸತೊಂದು ಒಳನೋಟವನ್ನು ನಿಮಗೆ ಈ ಕೃತಿ ನೀಡುವುದರಲ್ಲಿ ಅನುಮಾನವಿಲ್ಲ. ಈ ಹಿನ್ನೆಲೆಯಲ್ಲೇ, ಈ ಕೃತಿ ಏಕ ಕಾಲದಲ್ಲಿ ಹಲವು ಕ್ಷೇತ್ರಗಳ ಜನರ ಆಸಕ್ತಿಯನ್ನು ತನ್ನೆಡೆಗೆ ಸೆಳೆದುಕೊಳ್ಳುತ್ತದೆ.

ಈ ಕೃತಿಯಲ್ಲಿ ಒಟ್ಟು 28 ಲೇಖನಗಳಿವೆ. ಸುದ್ದಿಯ ವಾರದಲ್ಲಿ ಬುದ್ಧ, ಗುಹೇಶ್ವರರೇ ಪರಿಸರವಾಗಿ, ಪ್ಲಾಚಿಮಡದ ಜಲಪಿಶಾಚಿಗಳು ಮತ್ತು ಇಸ್ಲಾಮಿಕ್ ಪರಿಸರ ವಿವೇಕ, ಇಂಗ್ಲಿಷ್ ಕಲಿಕೆ: ಸಾಮಾಜಿಕ ನ್ಯಾಯದ ಪ್ರಶ್ನೆ, ಇಂದಿರಾಗಾಂಧಿಯ ಶೌಚ ಪುರಾಣ...ವೈವಿಧ್ಯಮ ಯವಾದ ಲೇಖನಗಳನ್ನು ಇದು ಒಳಗೊಂಡಿದೆ. ಕವಿಯೂ ಆಗಿರುವ ವಿವೇಕಾನಂದರ, ಗದ್ಯಕ್ಕೂ ಕಾವ್ಯದ ಸೊಗಡಿದೆ. ಆದುದರಿಂದಲೇ ಈ ಕೃತಿ ನಮ್ಮನ್ನು ಲೀಲಾಜಾಲವಾಗಿ ಓದಿಸಿಕೊಂಡು ಹೋಗುತ್ತದೆ.

ತೇಜಸ್ವಿ ಪ್ರಕಾಶನ, ಬೆಂಗಳೂರು ಹೊರತಂದಿರುವ ಈ ಕೃತಿಯ ಮುಖಬೆಲೆ 150 ರೂ. ಆಸಕ್ತರು ವಿಚಾರಿಸ ಬೇಕಾದ ಮೊಬೈಲ್ ನಂ. 99868 33515

share
ಕಾರುಣ್ಯ
ಕಾರುಣ್ಯ
Next Story
X