Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಓದಿರಿ-ಸೃಜನಶೀಲ ಬರಹಗಾರನ ಕಣ್ಣಲ್ಲಿ...

ಓದಿರಿ-ಸೃಜನಶೀಲ ಬರಹಗಾರನ ಕಣ್ಣಲ್ಲಿ ಪ್ರವಾದಿ

ಕಾರುಣ್ಯಕಾರುಣ್ಯ25 Dec 2015 7:28 PM IST
share
ಓದಿರಿ-ಸೃಜನಶೀಲ ಬರಹಗಾರನ ಕಣ್ಣಲ್ಲಿ ಪ್ರವಾದಿ

ಬೊಳುವಾರು ಮಹಮದ್ ಕುಂಞಿ ಅವರ ಮೂರನೆ ಕಾದಂಬರಿ ‘ಓದಿರಿ’. ಹಲವು ಕಾರಣಕ್ಕೆ ಈ ಕೃತಿ ವಿಶಿಷ್ಟವಾಗಿದೆ. ಪ್ರವಾದಿ ಮುಹಮ್ಮದರ ಜೀವನಾಧಾರಿತ ಮೊತ್ತ ಮೊದಲ ಕಾದಂಬರಿ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿರುವುದು ಮತ್ತು ಕಾದಂಬರಿಯಾಗಿ ಮುಹಮ್ಮದರ ಪಾತ್ರವನ್ನು ಬೊಳುವಾರು ಹೇಗೆ ಗ್ರಹಿಸಿದ್ದಾರೆ ಎನ್ನುವುದು ಸಾಹಿತ್ಯಕ ವಲಯದಲ್ಲಿ ಸಾಕಷ್ಟು ಕುತೂಹಲವನ್ನು ಮೂಡಿಸಿತ್ತು.

ಪ್ರವಾದಿ ಮುಹಮ್ಮದರನ್ನು ಧಾರ್ಮಿಕ ವ್ಯಕ್ತಿಗಳು ಕಟ್ಟಿಕೊಟ್ಟಿರುವುದನ್ನು ನಾವು ಓದಿದ್ದೇವೆ. ಹಾಗೆಯೇ ಇತಿಹಾಸ ತಜ್ಞರು ಕಟ್ಟಿಕೊಟ್ಟಿರುವುದನ್ನೂ ನಾವು ಓದಿದ್ದೇವೆ. ಆದರೆ ಒಬ್ಬ ಸೃಜನಶೀಲ ಬರಹಗಾರನ ಕೈಯಲ್ಲಿ ಪ್ರವಾದಿಯವರು ಮೂಡಿ ಬಂದಿರುವುದು ಕಡಿಮೆ. ಈ ಕಾರಣದಿಂದಲೇ ಕನ್ನಡ ಸಾಹಿತ್ಯಕ್ಕೆ ಬೊಳುವಾರರ ‘ಓದಿರಿ’ ಒಂದು ಹೊಸ ಓದು. ಪ್ರವಾದಿ ಮುಹಮ್ಮದರನ್ನು ಎಲ್ಲ ಧರ್ಮ, ವರ್ಗದ ಜನರಿಗೆ ಸಾರ್ವತ್ರಿಕಗೊಳಿಸಿದ ಹೆಗ್ಗಳಿಕೆ ಈ ಕಾದಂಬರಿಯದು.

 ಹಾಗೆ ನೋಡಿದರೆ ಕಾದಂಬರಿಕಾರರದು ಹಗ್ಗದ ಮೇಲಿನ ನಡಿಗೆ. ಯಾರ ಭಾವನೆಗಳಿಗೂ ಧಕ್ಕೆಯಾಗದಂತೆ ನೋಡಿಕೊಳ್ಳುವ ಹೊಣೆಗಾರಿಕೆಯನ್ನು ಬೊಳುವಾರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಅತ್ಯಂತ ಭಾವ ತೀವ್ರತೆಯಲ್ಲಿ ಪ್ರವಾದಿಯ ವ್ಯಕ್ತಿತ್ವವನ್ನು ಕಟ್ಟಿಕೊಟ್ಟಿದ್ದಾರೆ. ಪ್ರವಾದಿಯ ಬಾಲ್ಯಕಾಲ, ಯೌವನ ಮತ್ತು ಹೋರಾಟದ ಕಾಲ ಹೀಗೆ ಮೂರು ಘಟ್ಟಗಳನ್ನು ಅಂತರಂಗ, ಬಹಿರಂಗ ಮತ್ತು ಚದುರಂಗ ಎಂದು ವಿಂಗಡಿಸಿದ್ದಾರೆ. ಅಂದರೆ ಮೊದಲನೆಯದು ಅವರೊಳಗಿನ ಚಿಂತನೆ ಆಲೋಚನೆಗಳ ಸಂಘರ್ಷ ವನ್ನು ತಿಳಿಸುತ್ತದೆ.

ಎರಡನೆ ಭಾಗದಲ್ಲಿ, ಅದನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸುವ ಹಂತಕ್ಕೆ ಇಳಿಯುತ್ತಾರೆ. ಮೂರನೆಯದಾಗಿ, ಅದರ ಅನುಷ್ಠಾನಕ್ಕಾಗಿ ಅವರು ನಡೆಸಿದ ಹೋರಾಟಗಳನ್ನು ತೆರೆದಿಡುತ್ತಾರೆ. ಪ್ರವಾದಿ ಮುಹಮ್ಮದರನ್ನು ಅರಿತವರು ಮತ್ತು ಅರಿಯದವರು ಜೊತೆಗೂಡಿ ಓದಬೇಕಾದ ಕೃತಿ ಇದು. ಪ್ರವಾದಿಯ ವ್ಯಕ್ತಿತ್ವದ ಕುರಿತಂತೆ ಇನ್ನಷ್ಟು ಹೊಳಹುಗಳನ್ನು ಈ ಕಾದಂಬರಿ ನೀಡುವುದರಲ್ಲಿ ಅನುಮಾನವಿಲ್ಲ.

ಮುತ್ತುಪ್ಪಾಡಿ ಪುಸ್ತಕ ಹೊರತಂದಿರುವ ಈ ಕೃತಿಯ ಮುಖಬೆಲೆ 220 ರೂ. ಆಸಕ್ತರು 876 2800786 ದೂರವಾಣಿಯನ್ನು ಸಂಪರ್ಕಿಸಬಹುದಾಗಿದೆ.

share
ಕಾರುಣ್ಯ
ಕಾರುಣ್ಯ
Next Story
X