Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಬಳ ಹೆಚ್ಚಿಸುವಂತೆ ಕೋರಿ ಭಾಗವತ್‌ಗೆ...

ಸಂಬಳ ಹೆಚ್ಚಿಸುವಂತೆ ಕೋರಿ ಭಾಗವತ್‌ಗೆ ಆರೆಸ್ಸೆಸ್ ಮುಖವಾಣಿಗಳ ಸಿಬ್ಬಂದಿಗಳಿಂದ ಪತ್ರ

ವಾರ್ತಾಭಾರತಿವಾರ್ತಾಭಾರತಿ28 Dec 2015 5:59 PM IST
share

ಆರೆಸ್ಸೆಸ್ ತನ್ನ ಉದ್ಯೋಗಿಗಳಿಂದಲೇ ತೊಂದರೆಯನ್ನು ಎದುರಿಸುತ್ತಿದೆ. ತಮ್ಮ ಸಂಬಳವನ್ನು ಹೆಚ್ಚಿಸುವಂತೆ ಕೋರಿ ಅದರ ಅಧಿಕೃತ ಇಂಗ್ಲಿಷ್ ಮತ್ತು ಹಿಂದಿ ಪ್ರಕಟನೆಗಳಾದ ‘ಆರ್ಗನೈಸರ್’ ಮತ್ತು ‘ಪಾಂಚಜನ್ಯ’ಗಳ ಉದ್ಯೋಗಿಗಳು, ಸಂಘದ ಮುಖ್ಯಸ್ಥ ಮೋಹನ ಭಾಗವತ್ ಅವರಿಗೆ ಪತ್ರಗಳನ್ನು ಬರೆದಿದ್ದಾರೆ ಎಂದು ಸ್ಕ್ರೋಲ್ ಡಾಟ್ ಇನ್ ಸುದ್ದಿತಾಣವು ವರದಿ ಮಾಡಿದೆ.


 ಈ ಎರಡೂ ಪತ್ರಿಕೆಗಳನ್ನು ನಡೆಸುತ್ತಿರುವ ಭಾರತ ಪ್ರಕಾಶನ (ದಿಲ್ಲಿ) ಲಿ.ವಿರುದ್ಧ ಉದ್ಯೋಗಿಗಳು ಪ್ರತಿಭಟನೆ ನಡೆಸಿದ್ದಾರೆ,ಆದರೆ ಪ್ರತೀಕಾರದ ಭಯದಿಂದಾಗಿ ಅವರು ತುಂಬ ಎಚ್ಚರಿಕೆಯನ್ನು ವಹಿಸಿದ್ದಾರೆ ಎಂದು ಅದು ಹೇಳಿದೆ.


 ತಮ್ಮ ‘ಅನಿಶ್ಚಿತ ಭವಿಷ್ಯ’ದ ಬಗ್ಗೆ ಚಿಂತೆಗೊಳಗಾಗಿರುವ ಉದ್ಯೋಗಿಗಳು ಬಹಿರಂಗವಾಗಿ ತಮ್ಮ ನೋವನ್ನು ತೋಡಿಕೊಳ್ಳುವ ಅಥವಾ ಕಾನೂನಿನ ಮೊರೆ ಹೋಗುವ ಬದಲು ತಮ್ಮ ಪ್ರತಿಭಟನೆಗೆ ಕಾರಣವಾಗಿರುವ ವಿವಾದಗಳನ್ನು ಬಗೆಹರಿಸುವಲ್ಲಿ ಭಾಗವತ್ ಅವರ ಮಧ್ಯಪ್ರವೇಶವನ್ನು ಕೋರಿದ್ದಾರೆ.
 ಪತ್ರಿಕೆಗಳು ಆರ್ಥಿಕವಾಗಿ ಸಂಕಷ್ಟದ ಸ್ಥಿತಿಯಲ್ಲಿದ್ದಾಗ ಕಡಿಮೆ ಸಂಬಳಕ್ಕೆ ತಾವು ದುಡಿದಿದ್ದೆವು. ಕೆಲವೊಮ್ಮೆ ಸಂಬಳವನ್ನು ವಿಳಂಬವಾಗಿ ಚೂರು ಚೂರೇ ಪಾವತಿ ಮಾಡಿದಾಗಲೂ ತಾವು ಆ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ ಎನ್ನುವುದನ್ನು ಈ ಉದ್ಯೋಗಿಗಳು ಡಿ.2ರಂದು ಭಾಗವತ್‌ಗೆ ಬರೆದಿರುವ ಪತ್ರದಲ್ಲಿ ನೆನಪಿಸಿದ್ದಾರೆ.


ತಮಗೆ ಕಡಿಮೆ ಸಂಬಳವನ್ನು ನೀಡಲಾಗುತ್ತಿದೆ. ಇದರಿಂದಾಗಿ ಹಿರಿಯ ಉದ್ಯೋಗಿಗಳು ಅನಿವಾರ್ಯವಾಗಿ ಕೆಲಸ ಬಿಡುತ್ತಿದ್ದಾರೆ ಎಂದು ದೂರಿಕೊಂಡಿರುವ ಅವರು, ಇದೇ ಪ್ರವೃತ್ತಿ ಮುಂದುವರಿದರೆ ಕಾನೂನು ಕ್ರಮವನ್ನು ಕೈಗೊಳ್ಳುವ ಬೆದರಿಕೆಯನ್ನೊಡ್ಡಿದ್ದಾರೆ.


ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರವು ಅಧಿಕಾರಕ್ಕೆ ಬಂದ ನಂತರ ಇವೆರಡೂ ಆರೆಸ್ಸೆಸ್ ಮುಖವಾಣಿಗಳ ಪ್ರಸಾರ ಸಂಖ್ಯೆ ಮತ್ತು ಜಾಹೀರಾತು ಆದಾಯ ನಾಟಕೀಯ ಏರಿಕೆ ಕಂಡಿವೆ. ಎನ್‌ಡಿಎ ಸರಕಾರ ರೂಪುಗೊಂಡ ನಂತರ ಕಾರ್ಯ ನಿರ್ವಹಣೆಯನ್ನು ಆರಂಭಿಸಿರುವ ಭಾರತ ಪ್ರಕಾಶನದ ಪ್ರಸಕ್ತ ಆಡಳಿತವು ಆರ್ಗನೈಸರ್ ಮತ್ತು ಪಾಂಚಜನ್ಯಗಳ ಕೆಟ್ಟ ದಿನಗಳಲ್ಲಿ ಕಡಿಮೆ ಸಂಬಳಕ್ಕೆ ದುಡಿದಿದ್ದ ಹಳೆಯ ನೌಕರರ ಬಗ್ಗೆ ತಾರತಮ್ಯವನ್ನು ಪ್ರದರ್ಶಿಸುತ್ತಿದೆ ಎಂದು ಆರ್ಗನೈಸರ್‌ನ ಹಿರಿಯ ಸಂಪಾದಕೀಯ ಸಿಬ್ಬಂದಿಯೋರ್ವರು ಸ್ಕ್ರೋಲ್ ಡಾಟ್ ಇನ್‌ಗೆ ತಿಳಿಸಿದ್ದಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X