Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ: ಐಎಎಸ್ ಅಧಿಕಾರಿಗಳಿಂದ ಸಾಮೂಹಿಕ...

ದಿಲ್ಲಿ: ಐಎಎಸ್ ಅಧಿಕಾರಿಗಳಿಂದ ಸಾಮೂಹಿಕ ರಜೆ

ವಾರ್ತಾಭಾರತಿವಾರ್ತಾಭಾರತಿ31 Dec 2015 11:32 PM IST
share
ದಿಲ್ಲಿ: ಐಎಎಸ್ ಅಧಿಕಾರಿಗಳಿಂದ ಸಾಮೂಹಿಕ ರಜೆ

♦ ಅಧಿಕಾರಿಗಳ ಅಮಾನತು ವಿರೋಧಿಸಿ ಪ್ರತಿಭಟನೆ ♦ ಕೇಂದ್ರದ ಸಂಚು: ಕೇಜ್ರಿ


ಹೊಸದಿಲ್ಲಿ, ಡಿ.31: ಇಬ್ಬರು ಡಿಎಎನ್‌ಐಸಿಎಸ್ ಕೇಡರ್ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದನ್ನು ಪ್ರತಿಭಟಿಸಿ ದಿಲ್ಲಿ ಸರಕಾರದ ಹಿರಿಯ ಅಧಿಕಾರಿಗಳಿಂದು ಸಾಮೂಹಿಕ ರಜೆ ಹಾಕಿದ್ದಾರೆ. ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವಾಲಯವು ಅಮಾನತನ್ನು ಅಸಿಂಧುವೆಂದು ಘೋಷಿಸಿದೆ. ಅಧಿಕಾರಿಗಳ ಪ್ರತಿಭಟನೆಯನ್ನು ಖಂಡಿಸಿರುವ ಮುಖ್ಯಮಂತ್ರಿ ಕೇಜ್ರಿವಾಲ್, ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಯವರ ಬಿ ಬಣದಂತೆ ವರ್ತಿಸುತ್ತಿದ್ದಾರೆ. ಕೇಂದ್ರ ಸಂಚಿನಲ್ಲಿ ಭಾಗೀದಾರರಾಗಿದ್ದಾರೆ ಎಂದು ಆರೋಪಿಸಿದ್ದಾರೆ.


 ಸಂಪುಟ ನಿರ್ಣಯದ ಕಡತವೊಂದಕ್ಕೆ ಸಹಿ ಹಾಕಲು ನಿರಾಕರಿಸಿದುದಕ್ಕಾಗಿ ಆಪ್ ಸರಕಾರವು ಗೃಹ ಇಲಾಖೆಯ ಇಬ್ಬರು ನಾಗರಿಕ ಸೇವಾ ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಅಮಾನತುಗೊಳಿಸಲಾದ ಅಧಿಕಾರಿಗಳೊಂದಿಗೆ ಐಕ್ಯಮತ ಪ್ರದರ್ಶಿಸಿ ಸುಮಾರು 200 ಮಂದಿ ಡಿಎಎನ್‌ಐಸಿಎಸ್ ಅಧಿಕಾರಿಗಳು ಸಾಮೂಹಿಕ ರಜೆ ಹಾಕಿದ್ದರೆ, 70 ಐಎಎಸ್ ಅಧಿಕಾರಿಗಳು ಅರ್ಧ ದಿನದ ರಜೆಯ ಮೇಲೆ ಹೋಗಿದ್ದರು. ವಿಶೇಷ ಕಾರ್ಯದರ್ಶಿ ಯಶಪಾಲ್ ಗರ್ಗ್ ಹಾಗೂ ಸುಭಾಶ್ಚಂದ್ರ ಎಂಬ ಅಧಿಕಾರಿಗಳನ್ನು ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ವೇತನವನ್ನು ಹೆಚ್ಚಿಸುವ ಸಂಪುಟ ನಿರ್ಣಯಕ್ಕೆ ಸಹಿ ಹಾಕಲು ನಿರಾಕರಿಸಿದುದಕ್ಕಾಗಿ ಮೊನ್ನೆ ಅರವಿಂದ ಕೇಜ್ರಿವಾಲ್ ಸರಕಾರವು ಅಮಾನತುಗೊಳಿಸಿತ್ತು. ಕೇಂದ್ರ ಗೃಹ ಸಚಿವಾಲಯವು ಈ ಅಮಾನತನ್ನು ಅಸಿಂಧುವೆಂದು ಹೇಳಿತ್ತು.


ಕೇಂದ್ರದ ಲೋಕೋಪಯೋಗಿ ಆಯೋಗವು (ಯುಪಿಎಸ್‌ಸಿ) ನಡೆಸುವ ಪರೀಕ್ಷೆಗಳ ಮೂಲಕ ದಿಲ್ಲಿ, ಅಂಡಮಾನ್ ನಿಕೋಬಾರ್ ಐಲ್ಯಾಂಡ್ ಸಿವಿಲ್ ಸರ್ವೀಸ್ (ಡಿಎಎನ್‌ಐಸಿಎಸ್) ಅಧಿಕಾರಿಗಳನ್ನು ಆರಿಸುತ್ತಿದೆ.
ಕೇವಲ ಲೆಫ್ಟಿನೆಂಟ್ ಗವರ್ನರ್ ಮಾತ್ರ ಕೇಂದ್ರ ಗೃಹ ಸಚಿವಾಲಯದ ಅನುಮತಿ ಪಡೆದು, ಡಿಎಎನ್‌ಐಸಿಎಸ್ ಕೇಡರ್ ಅಧಿಕಾರಿಗಳನ್ನು ಅಮಾನತುಗೊಳಿಸಬಹುದು.


ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ದಿಲ್ಲಿಯ ಗೃಹ ಸಚಿವ ಸತ್ಯೇಂದ್ರ ಜೈನ್, ಡಿಎಎನ್‌ಐಸಿಎಸ್ ಹಾಗೂ ಐಎಎಸ್ ಅಧಿಕಾರಿಗಳು ಪ್ರತಿಭಟನೆ ನಡೆಸುವ ಹಕ್ಕು ಹೊಂದಿರುವುದಿಲ್ಲ. ಅದು ಅವರ ಸೇವಾ ನಿಯಮಕ್ಕೆ ವಿರುದ್ಧವಾದುದು ಎಂದಿದ್ದಾರೆ.


ಇಂದು ಐಎಎಸ್ ಮತ್ತು ಡಿಎಎನ್‌ಐಸಿಎಸ್ ಅಧಿಕಾರಿಗಳ ಸಂಘಟನೆ ಕೆಲಸ ಮಾಡಿರುವ ನಿರ್ಧಾರಕ್ಕೆ ಸೊಪ್ಪು ಹಾಕದ ಅವರು, ಅಧಿಕಾರಿಗಳು ಮುಷ್ಕರ ಮಾಡಿದರೆ ಜನರಿಗೆ ಸಂತೋಷವಾಗಬಹುದು. ಇಂದು ಆಡಳಿತಕ್ಕೆ ಸಂಬಂಧಿಸಿದ ಎಲ್ಲ ವ್ಯವಸ್ಥೆ ಆನ್‌ಲೈನ್‌ನನ್ನು ಆಧರಿಸಿದೆ. ಆದುದರಿಂದ ಸರಕಾರಕ್ಕೆ ತೊಂದರೆಯಾಗದೆಂದು ಅವರು ಪ್ರತಿಪಾದಿಸಿದ್ದಾರೆ.


ಎಲ್ಲ ಅಧಿಕಾರಿಗಳು ಒಂದು ತಿಂಗಳು ಅಥವಾ 15 ದಿನಗಳ ರಜೆಗೆ ಅರ್ಜಿ ಸಲ್ಲಿಸಿದರೆ ದಿಲ್ಲಿ ಸರಕಾರ ಮಂಜೂರು ಮಾಡಲು ಸಿದ್ಧವಿದೆ. ಸಂಪುಟ ನಿರ್ಣಯವನ್ನು ಜಾರಿಗೊಳಿಸದಿದ್ದದಕ್ಕಾಗಿ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ತನ್ನ ಆದೇಶದಿಂದ ಅವರಿಗೆ ಯಾವುದೇ ಸಮಸ್ಯೆಯಾಗಿದ್ದರೆ, ಅವರು ಮುಖ್ಯಮಂತ್ರಿಯ ಬಳಿಗೆ ಹೋಗಬೇಕಿತ್ತೇ ಹೊರತು ಲೆಫ್ಟಿನೆಂಟ್ ಗವರ್ನರರ ಬಳಿಗಲ್ಲವೆಂದು ಜೈನ್ ಆರೋಪಿಸಿದ್ದಾರೆ.


ಲೆಫ್ಟಿನೆಂಟ್ ಗವರ್ನರ್, ದಿಲ್ಲಿ ಸರಕಾರ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿರುವುದನ್ನು ಅಸಿಂಧುವೆಂದು ಘೋಷಿಸಿದ್ದಾರೆಂಬುದು ತನಗೆ ಸಂಜೆ ತಿಳಿದಿದೆಯೆಂದು ಅವರು ಹೇಳಿದ್ದಾರೆ.


ದಿಲ್ಲಿ ಸರಕಾರದಲ್ಲಿ ಕೆಲಸ ಮಾಡುತ್ತಿರುವ ಯಾವನೇ ಅಧಿಕಾರಿಗೆ ಯಾವುದೇ ಸಮಸ್ಯೆಯಾದರೆ ಆತ ಎಲ್‌ಜಿ ಕಚೇರಿಗೆ ವರ್ಗಮಾಡಿಸಿಕೊಳ್ಳಬಹುದು. ಯಾವುದೇ ರೀತಿಯ ಅವಿಧೇಯತೆಯನ್ನು ಸರಕಾರ ಸಹಿಸದು. ದಿಲ್ಲಿ ಸರಕಾರದ ಅಧಿಕಾರಿಗಳನ್ನು ಮುಷ್ಕರ ಮಾಡುವಂತೆ ಬಿಜೆಪಿ ಪ್ರಚೋದಿಸುತ್ತಿದೆ ಎಂದವರು ದೂರಿದರು.


ಡಿಎಎನ್‌ಐಸಿಎಸ್ ಅಧಿಕಾರಿಗಳ ಸಂಘಟನೆಯಲ್ಲಿ ಸುಮಾರು 200 ಸದಸ್ಯರಿದ್ದು, ಎಸ್‌ಡಿಎಂ, ಸಚಿವರ ಕಾರ್ಯದರ್ಶಿ ಹಾಗೂ ವಿಶೇಷ ಕಾರ್ಯದರ್ಶಿ ಸಹಿತ ನಿರ್ಣಾಯಕ ಹುದ್ದೆಗಳನ್ನು ಹೊಂದಿದ್ದಾರೆ.
ಯಾವನೇ ಡಿಎಎನ್‌ಐಸಿಎಸ್ ಅಧಿಕಾರಿಯನ್ನು ಅಮಾನತುಗೊಳಿಸುವ ಅಧಿಕಾರ ದಿಲ್ಲಿ ಸರಕಾರಕ್ಕಿಲ್ಲ. ಅದು ಕೇವಲ ಶಿಫಾರಸು ಮಾಡಬಹುದಷ್ಟೇ. ಕೇಂದ್ರ ಸಚಿವ ಗೃಹ ಸಚಿವಾಲಯದ ಅನುಮತಿಯೊಂದಿಗೆ ಲೆಫ್ಟಿನೆಂಟ್ ಗವರ್ನರ್ ಮಾತ್ರ ಅಧಿಕಾರಿಯನ್ನು ಅಮಾನತುಗೊಳಿಸಿಬಹುದೆಂದು ಸಂಘಟನೆಯ ಪ್ರತಿನಿಧಿಯೊಬ್ಬರು ಹೇಳಿದ್ದಾರೆ.


ರೈಲ್ವೆ ಇಲಾಖೆಯು ಪಶ್ಚಿಮ ದಿಲ್ಲಿಯ ಶುಕೂರ್ ಬಸ್ತಿ ಪ್ರದೇಶದಲ್ಲಿ ಕೊಳೆಗೇರಿ ನಿವಾಸಿಗಳ ಗುಡಿಸಲುಗಳನ್ನು ಧ್ವಂಸ ಮಾಡಿತ್ತು. ಅದರ ಸಂತ್ರಸ್ತರಿಗೆ ತಕ್ಷಣದ ಪರಿಹಾರ ಒದಗಿಸಲು ವಿಫಲರಾಗಿದ್ದ ಇಬ್ಬರು ಉಪವಿಭಾಗೀಯ ದಂಡಾಧಿಕಾರಿಗಳನ್ನು ಈ ತಿಂಗಳ ಆರಂಭದಲ್ಲಿ ಕೇಜ್ರಿವಾಲ್ ಅಮಾನತುಗೊಳಿಸಿದ್ದರು.
ಆದಾಗ್ಯೂ ಅವರಿಬ್ಬರೂ ತಮ್ಮ ಹುದ್ದೆಗಳಲ್ಲೇ ಇದ್ದು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X