Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸೇನಾಪೂರೈಕೆದಾರ ರಾಷ್ಟ್ರಗಳೊಂದಿಗೆ...

ಸೇನಾಪೂರೈಕೆದಾರ ರಾಷ್ಟ್ರಗಳೊಂದಿಗೆ ಸಮಾಲೋಚನೆ ಅಗತ್ಯ: ಭದ್ರತಾ ಮಂಡಳಿ

ವಾರ್ತಾಭಾರತಿವಾರ್ತಾಭಾರತಿ2 Jan 2016 12:03 AM IST
share
ಸೇನಾಪೂರೈಕೆದಾರ ರಾಷ್ಟ್ರಗಳೊಂದಿಗೆ ಸಮಾಲೋಚನೆ ಅಗತ್ಯ: ಭದ್ರತಾ ಮಂಡಳಿ

ವಿಶ್ವಸಂಸ್ಥೆ, ಜ.1: ಶಾಂತಿಪಾಲನಾ ನಿಯಮಾವಳಿಗೆ ಸಂಬಂಧಿಸಿದಂತೆ ಸೇನಾ ನೆರವು ನೀಡುತ್ತಿರುವ ರಾಷ್ಟ್ರಗಳೊಂದಿಗೆ ಸಮರ್ಪಕವಾಗಿ ಸಮಾಲೋಚನೆ ನಡೆಸಲಾಗುತ್ತಿಲ್ಲವೆಂಬ ಭಾರತದ ಅಭಿಪ್ರಾಯವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಒಪ್ಪಿಕೊಂಡಿದೆ.
ಶಾಂತಿಪಾಲನಾ ಕಾರ್ಯಾಚರಣೆಯಲ್ಲಿ ಪರಿಣಾಮಕಾರಿ ಸಮಾಲೋಚನೆಯ ಮಹತ್ವ ಹಾಗೂ ಕಾರ್ಯಾಚರಣೆಯ ಸುಧಾರಣೆಗೆ ಸದಸ್ಯ ರಾಷ್ಟ್ರಗಳ ಸಂಪೂರ್ಣ ಸಹಭಾಗಿತ್ವದ ಬಗ್ಗೆಯೂ ಅದು ಇದೇ ಸಂದರ್ಭದಲ್ಲಿ ಒತ್ತು ನೀಡಿದೆ.
 ಶಾಂತಿಪಾಲನಾ ನಿಯಮಾವಳಿ ರೂಪಿಸುವಲ್ಲಿ ಭದ್ರತಾ ಮಂಡಳಿಯ ಉತ್ತರದಾಯಿತ್ವ ಹಾಗೂ ಪಾರದರ್ಶಕತೆಯ ಬಗ್ಗೆ ಭಾರತವು ಟೀಕಿಸುತ್ತಲೇ ಬಂದಿದೆ.


ಮಾತ್ರವಲ್ಲದೆ ಶಾಂತಿಪಾಲನಾ ಪಡೆಗಳ ಕಾರ್ಯಶೈಲಿಯಲ್ಲಿ ಸುಧಾರಣೆಯಾಗದಿದ್ದಲ್ಲಿ ಶಾಂತಿಪಾಲಕ ಯೋಧರು ಹಾಗೂ ನಾಗರಿಕರು ಸಾವಿಗೀಡಾಗುವ ಪ್ರಮಾಣದಲ್ಲಿ ಹೆಚ್ಚಳ ಉಂಟಾಗಬಹುದು ಎಂದು ಭಾರತ ಒತ್ತಿ ಹೇಳಿದೆ.
 ಶಾಂತಿಪಾಲನೆ ಪಡೆಗಳಿಗೆ ಸಂಬಂಧಿಸಿದ ನಿಯಮಾವಳಿ ರೂಪಿಸುವ ಸಂದರ್ಭದಲ್ಲಿ ಸೇನಾ ನೆರವು ನೀಡುವ ರಾಷ್ಟ್ರಗಳ ಜೊತೆಗೆ ಸಮಾಲೋಚನೆ ನಡೆಸುವುದು ಅತ್ಯಗತ್ಯ ಎಂದು ಕಳೆದ ತಿಂಗಳು ಹುದ್ದೆಯಿಂದ ನಿವೃತ್ತಿಗೊಂಡಿರುವ ವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿ ಅಶೋಕ್ ಮುಖರ್ಜಿ ಹಲವು ಸಂದರ್ಭಗಳಲ್ಲಿ ಹೇಳಿಕೆ ನೀಡಿದ್ದರು.


ವಿಶ್ವಸಂಸ್ಥೆಯ ಸನ್ನದಿನ ಕಲಂ 44ರ ಪ್ರಕಾರ ಭದ್ರತಾ ಮಂಡಳಿಯು ಶಾಂತಿಪಾಲನಾ ಪಡೆಗಳಿಗೆ ಯೋಧರನ್ನು ನಿಯೋಜಿಸುವ ನಿರ್ಧಾರ ಕೈಗೊಳ್ಳುವ ವೇಳೆ ಭದ್ರತಾ ಮಂಡಳಿಯ ಸದಸ್ಯತ್ವ ಹೊಂದಿರದ ರಾಷ್ಟ್ರಗಳ ಪ್ರತಿನಿಧಿಗಳಿಗೂ ಆಹ್ವಾನ ನೀಡಬೇಕಾಗುತ್ತದೆ ಎಂದವರು ವಿವರಿಸಿದ್ದರು.


ಪೊಲೀಸ್ ಹಾಗೂ ಸೇನಾ ನೆರವು ನೀಡುತ್ತಿರುವ ರಾಷ್ಟ್ರಗಳು ಯೋಜಿತ ಕಾರ್ಯಾಚರಣೆಗೆ ಅಗತ್ಯವಿರುವ ಯೋಧರ ಪ್ರಮಾಣ ಹಾಗೂ ಕಾರ್ಯವಿಧಾನ ನಿರ್ಣಯಿಸುವ ವಿಚಾರದಲ್ಲಿ ಮಹತ್ವದ ಪಾತ್ರ ವಹಿಸಲು ಸಾಧ್ಯ ಎಂದವರು ಅಭಿಪ್ರಾಯಿಸಿದ್ದರು.
ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗೆ ಅತಿ ಹೆಚ್ಚಿನ ಸಂಖ್ಯೆಯ ಯೋಧರನ್ನು ಒದಗಿಸುತ್ತಿರುವ ರಾಷ್ಟ್ರಗಳ ಪೈಕಿ ಭಾರತ ಅತಿದೊಡ್ಡ ರಾಷ್ಟ್ರವಾಗಿದ್ದು, ಶಾಂತಿಪಾಲನಾ ಕಾರ್ಯಾಚರಣೆಗೆ ನಿಯೋಜನೆಗೊಂಡಿರುವ 69 ಘಟಕಗಳ ಪೈಕಿ 49ಕ್ಕೆ ಸುಮಾರು 1,85,000ಕ್ಕಿಂತಲೂ ಹೆಚ್ಚಿನ ಸಂಖ್ಯೆಯ ಯೋಧರನ್ನು ಪೂರೈಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X