Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಷ್ ಕಂಪೆನಿಯ ಹಂಗಾಮಿ ಕಾರ್ಮಿಕರನ್ನು...

ಬಾಷ್ ಕಂಪೆನಿಯ ಹಂಗಾಮಿ ಕಾರ್ಮಿಕರನ್ನು ಖಾಯಂಗೊಳಿಸಿ: ಎಚ್.ಎಸ್.ದೊರೆಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ2 Jan 2016 11:20 PM IST
share
ಬಾಷ್ ಕಂಪೆನಿಯ ಹಂಗಾಮಿ ಕಾರ್ಮಿಕರನ್ನು ಖಾಯಂಗೊಳಿಸಿ: ಎಚ್.ಎಸ್.ದೊರೆಸ್ವಾಮಿ

ಬೆಂಗಳೂರು, ಜ.2: ಬಾಷ್ ಕಂಪೆನಿಯಲ್ಲಿ ಹತ್ತಾರು ವರ್ಷಗಳಿಂದ ದುಡಿಯುತ್ತಿದ್ದ ಹಂಗಾಮಿ ಕಾರ್ಮಿಕರನ್ನು ವಜಾ ಗೊಳಿಸಿರುವುದು ಕಾನೂನುಬಾಹಿರವಾಗಿದ್ದು, ಈ ಕೂಡಲೇ ಅವರನ್ನು ಖಾಯಂಗೊಳಿಸಬೇಕೆಂದು ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಒತ್ತಾಯಿಸಿದ್ದಾರೆ.
ಬಾಷ್ ಕಂಪೆನಿಯ ಆಡಳಿತ ವರ್ಗ ಕಾನೂನುಬಾಹಿರವಾಗಿ 263 ಹಂಗಾಮಿ ಕಾರ್ಮಿಕರನ್ನು ವಜಾಗೊಳಿಸಿರುವುದನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ನಗರದ ಪುರಭವನದ ಮುಂಭಾಗ ಆಯೋಜಿಸಿದ್ದ ಜಂಟಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರಕಾರದ ಅನುಮತಿಯಿಲ್ಲದೆ ಹಂಗಾಮಿ ಕಾರ್ಮಿಕರನ್ನು ವಜಾ ಮಾಡುವ ಹಾಗಿಲ್ಲ. ಆದರೆ, ಬಾಷ್ ಕಂಪೆನಿಯ ಆಡಳಿತ ವರ್ಗವು ಹಂಗಾಮಿ ಕಾರ್ಮಿಕರನ್ನು ವಜಾ ಗೊಳಿಸುವ ಮೂಲಕ ದೇಶದ ಕೈಗಾರಿಕಾ ಕಾನೂನನ್ನು ಉಲ್ಲಂಘನೆ ಮಾಡಿದೆ. ಜರ್ಮನಿ ಮೂಲದ ಬಾಷ್ ಕಂಪೆನಿ ನಮ್ಮ ಸ್ಥಳದ ಎಲ್ಲ ಮೂಲಭೂತ ಸೌಲಭ್ಯಗಳನ್ನು ಪಡೆದು, ನಮ್ಮ ನೌಕರರನ್ನು ಬೀದಿಪಾಲು ಮಾಡುತ್ತಿದೆ. ಬಾಷ್ ಕಂಪೆನಿಯ ಈ ಕ್ರಮವನ್ನು ಕಾರ್ಮಿಕ ಸಂಘಟನೆಗಳು ತೀವ್ರವಾಗಿ ಖಂಡಿಸಬೇಕೆಂದು ಅವರು ಸಲಹೆ ನೀಡಿದರು.
ದೇಶದಲ್ಲಿ ಬೃಹತ್ ಕಂಪೆನಿಗಳು ಸ್ಥಾಪನೆಯಾಗುತ್ತಿದ್ದು, ಅಲ್ಲಿ ಕಾರ್ಮಿಕರ ಬದಲಿಗೆ ಬೃಹತ್ ಯಂತ್ರಗಳು ಕಾರ್ಯನಿರ್ವಹಿಸುತ್ತಿವೆ. ಪ್ರಪಂಚದಲ್ಲಿಯೆ ಎರಡನೆ ಅತಿ ಹೆಚ್ಚು ಜನಸಂಖ್ಯೆ ಇರುವ ಭಾರತದಲ್ಲಿ ಬೃಹತ್ ಯಂತ್ರಗಳಿಂದಾಗಿ ಪ್ರತಿನಿತ್ಯ ಸಾವಿರಾರು ಕಾರ್ಮಿಕರು ಕೆಲಸವನ್ನು ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಕಾರ್ಮಿಕರ ವೃತ್ತಿ ಭದ್ರತೆಗೆ ಸಂಬಂಧಿಸಿದಂತೆ ಸರಕಾರ ಗಂಭೀರವಾಗಿ ಚಿಂತಿಸಬೇಕೆಂದು ಎಚ್.ಎಸ್.ದೊರೆಸ್ವಾಮಿ ಆಗ್ರಹಿಸಿದರು.
ಕಾರ್ಮಿಕ ಮುಖಂಡ ಅನಂತಸುಬ್ಬರಾವ್ ಮಾತನಾಡಿ, ಇಂದು ದೇಶದಲ್ಲಿ ಕಾರ್ಮಿಕರು ತೀವ್ರ ಆತಂಕದ ದಿನಗಳನ್ನು ಎದುರಿಸುತ್ತಿದ್ದು, ಆಧುನೀಕರಣ ಕಾರ್ಮಿಕರಿಗೆ ಶಾಪವಾಗಿ ಪರಿಣಮಿಸಿದೆ. ಕಂಪೆನಿಗಳ ಮಾಲಕರಿಗೆ ಜೀವ ಇರುವ ಕಾರ್ಮಿಕರಿಗಿಂತ ಜೀವವಿಲ್ಲದ ಬೃಹತ್ ಯಂತ್ರಗಳು ಬೇಕಾಗಿದೆ. ಇದರಿಂದಾಗಿ ಪ್ರತಿದಿನ ಕಾರ್ಮಿಕರು ಕೆಲಸ ಕಳೆದುಕೊಳ್ಳುತ್ತಿದ್ದಾರೆಂದು ಬೇಸರ ವ್ಯಕ್ತಪಡಿಸಿದರು.
ಬಾಷ್ ಕಂಪೆನಿಯ ಬೆಳವಣಿಗೆಗಾಗಿ ಕಾರ್ಮಿಕರು ತಮ್ಮ ಜೀವವನ್ನೆ ತೆತ್ತಿದ್ದಾರೆ. ಇದಕ್ಕೆ ಪ್ರತಿಫಲವಾಗಿ ಕಂಪೆನಿಯ ಆಡಳಿತ ಮಂಡಳಿ ಕಾರ್ಮಿಕರ ಬದುಕನ್ನು ನಾಶ ಮಾಡುವಂತಹ ಬಹುಮಾನ ನೀಡಿದೆ. ಕಾರ್ಮಿಕರ ಕಷ್ಟವನ್ನು ಕಾರ್ಮಿಕರೆ ಅರ್ಥ ಮಾಡಿಕೊಳ್ಳಲು ಸಾಧ್ಯವೆಂದು ಕಂಪೆನಿ ಮಾಲಕರು ಸಾಬೀತುಪಡಿಸಿದ್ದಾರೆ. ಹೀಗಾಗಿ ದೇಶದ ಎಲ್ಲ ಕಾರ್ಮಿಕರು ಒಟ್ಟಾಗಬೇಕೆಂದು ಕರೆ ನೀಡಿದರು.
ಬಾಷ್ ಕಂಪೆನಿಯ ಹಂಗಾಮಿ ಕಾರ್ಮಿಕರ ಪರವಾಗಿ ರಾಜ್ಯದ ಎಲ್ಲ ಕಾರ್ಮಿಕರ ಸಂಘಟನೆಯ ಕಾರ್ಮಿಕರು ಒಂದಾಗಬೇಕು. ಹಂಗಾಮಿ ಕಾರ್ಮಿಕರನ್ನು ಖಾಯಂ ಗೊಳಿಸುವವರೆಗೂ ಹೋರಾಟವನ್ನು ಹಿಂಪಡೆಯದಂತೆ ಶಪಥ ಮಾಡಬೇಕೆಂದು ಅವರು ಕಾರ್ಮಿಕರಲ್ಲಿ ಮನವಿ ಮಾಡಿದರು.
ಈ ಸಮಾವೇಶದಲ್ಲಿ ಕಾರ್ಮಿಕ ಮುಖಂಡರಾದ ವಿ.ಜೆ.ಕೆ.ನಾಯರ್, ಎಸ್.ಬಾಲನ್, ಜಿ.ಆರ್.ಶಿವಶಂಕರ್‌ಮೂರ್ತಿ, ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X