Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಲ್ಲಾ ಹಂತದಲ್ಲೆ ಕೈಗಾರಿಕೆ ಸ್ಥಾಪನೆಗೆ...

ಜಿಲ್ಲಾ ಹಂತದಲ್ಲೆ ಕೈಗಾರಿಕೆ ಸ್ಥಾಪನೆಗೆ ಮಂಜೂರಾತಿ: ಖಮರುಲ್ ಇಸ್ಲಾಮ್

ವಾರ್ತಾಭಾರತಿವಾರ್ತಾಭಾರತಿ2 Jan 2016 11:20 PM IST
share

ಕಲಬುರಗಿ,ಜ.2: ರಾಜ್ಯ ಸರಕಾರದ ನೂತನ ಕೈಗಾರಿಕಾ ನೀತಿ 2014-19 ರನ್ವಯ 15 ಕೋಟಿ ರೂ.ವರೆಗಿನ ಬಂಡವಾಳ ಹೂಡಿಕೆಯ ಕೈಗಾರಿಕಾ ಸ್ಥಾಪನೆಗಳಿಗೆ ಏಕಗವಾಕ್ಷಿ ಪದ್ಧತಿಯಡಿ (ಸಿಂಗಲ್ ವಿಂಡೊ ಸಿಸ್ಟಮ್) ಜಿಲ್ಲಾ ಮಟ್ಟದ ಹಂತದಲ್ಲೆ ಮಂಜೂರಾತಿ ನೀಡಲಾಗುವುದು ಎಂದು ಪೌರಾಡಳಿತ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಡಾ.ಖಮರುಲ್ ಇಸ್ಲಾಮ್ ತಿಳಿಸಿದ್ದಾರೆ.
ಶನಿವಾರ ಇನ್ವೆಸ್ಟ್ ಕರ್ನಾಟಕ-2016ಕ್ಕೆ ಪೂರಕವಾಗಿ ಕಲಬುರಗಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಹೈದರಾಬಾದ್-ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಅತ್ಯಂತ ವೇಗದಲ್ಲಿ ಪ್ರಗತಿ ಹೊಂದುತ್ತಿರುವ ಮತ್ತು ಕೈಗಾರಿಕಾ ಪರಿಸರವುಳ್ಳ ರಾಜ್ಯ ಕರ್ನಾಟಕವಾಗಿದೆ. ಅದರಲ್ಲೂ ವಿಶೇಷವಾಗಿ ಹೈದರಾಬಾದ್-ಕರ್ನಾಟಕ ಭಾಗದಲ್ಲಿ ಕೈಗಾರಿಕೆ ಬೆಳವಣಿಗೆಗೆ ನೂತನ ಕೈಗಾರಿಕಾ ನೀತಿಯಲ್ಲಿ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ ಎಂದು ಅವರು ಹೇಳಿದರು.
ಹೈದರಾಬಾದ್-ಕರ್ನಾಟಕ ಭಾಗಕ್ಕೆ 371(ಜೆ) ಅನ್ವಯ ಸಿಗುವ ವಿಶೇಷ ಸವಲತ್ತುಗಳನ್ನು ಬಳಸಿಕೊಂಡು ಇಲ್ಲಿನ ಉದ್ದಿಮೆದಾರರು ಕೈಗಾರಿಕೆ ಸ್ಥಾಪನೆ ಮಾಡುವುದರೊಂದಿಗೆ ಈ ಭಾಗದ ಮತ್ತು ರಾಜ್ಯದ ಪ್ರಗತಿಗೆ ಕಾರಣವಾಗಬೇಕು. ಕೈಗಾರಿಕೆ ಇಲ್ಲದೆ ಯಾವುದೆ ಪ್ರದೇಶ ಸಂಪೂರ್ಣ ಅಭಿವೃದ್ಧಿ ಹೊಂದುವುದು ಅಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಕಲಬುರಗಿ ಜಿಲ್ಲೆಯಲ್ಲಿ ಭೂಮಿಯಿಂದ 100 ಅಡಿ ಕೆಳಗಿನವರೆಗೂ ಹೇರಳವಾಗಿ ಸುಣ್ಣದ ಕಲ್ಲು ಲಭ್ಯವಿರುವ ಕಾರಣ ಜಿಲ್ಲೆಯಲ್ಲಿ 9 ಸಿಮೆಂಟ್ ಕಾರ್ಖಾನೆಗಳು ಕಾರ್ಯಗತವಾಗಿವೆ. ಇವುಗಳಿಂದ ಪ್ರಸ್ತುತ ಒಟ್ಟಾರೆ 45 ಮೆಟ್ರಿಕ್ ಟನ್ ಸಿಮೆಂಟ್ ಉತ್ಪಾದನೆಯಾಗುತ್ತಿದೆ. ಈ ಪ್ರಮಾಣವನ್ನು 100 ಮೆಟ್ರಿಕ್ ಟನ್‌ಗೆ ಹೆಚ್ಚಿಸಲು ಪ್ರಯತ್ನಿಸಬೇಕು ಎಂದು ಅವರು ಹೇಳಿದರು.
ಕಲಬುರಗಿಯ ತೊಗರಿ ಬೇಳೆ ವಿಶ್ವದಲ್ಲಿಯೆ ಉತ್ತಮ ಗುಣಮಟ್ಟದ ಬೆಳೆಯಾಗಿದ್ದು, ಕಲಬುರಗಿಯಲ್ಲಿ ತೊಗರಿ ಪಾರ್ಕ್ ಸ್ಥಾಪನೆಗೆ ಭೂಸ್ವಾಧೀನ ಕಾರ್ಯ ಪ್ರಗತಿಯಲ್ಲಿದೆ. ಫೆ.3 ರಿಂದ 5ರವರೆಗೆ ಬೆಂಗಳೂರಿನಲ್ಲಿ ನಡೆಯುವ ಇನ್ವೆಸ್ಟ್ ಕರ್ನಾಟಕ-2016 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಜಿಲ್ಲೆಯ ಉದ್ದಿಮೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ತಿಳಿಸಿದರು.
ಕಲಬುರಗಿಯಲ್ಲಿ ಈಗಿರುವ ವರ್ತುಲ ರಸ್ತೆ ಹೊರತುಪಡಿಸಿ ಇನ್ನೊಂದು ವರ್ತುಲ ರಸ್ತೆ ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ. ಎರಡನೆ ವರ್ತುಲ ರಸ್ತೆ ಒಟ್ಟು 46 ಕಿ.ಮೀ. ಇದ್ದು, ಇದರಲ್ಲಿ 36 ಕಿ.ಮೀ. ರಸ್ತೆ ಅಭಿವೃದ್ಧಿಗೆ ಕೇಂದ್ರ ಸರಕಾರ ಮಂಜೂರಾತಿ ನೀಡಿದೆ. ಉಳಿದ ರಸ್ತೆಯನ್ನು ರಾಜ್ಯ ಸರಕಾರದಿಂದ ನಿರ್ಮಿಸಲಾಗುವುದು ಎಂದು ಖಮರುಲ್ ಇಸ್ಲಾಮ್ ತಿಳಿಸಿದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಶಾಸಕ ಡಾ.ಉಮೇಶ್ ಜಾಧವ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ನಿತೀನ್ ವಿ.ಗುತ್ತೇದಾರ್, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್, ಮೇಯರ್ ಭೀಮರೆಡ್ಡಿ ಪಾಟೀಲ್ ಕುರಕುಂದಾ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಸ್ಗರ್ ಚುಲ್ಬುಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X