Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೊಟ್ಟಿಲಗುರಿ ಸಂತ್ರಸ್ತರ ಪುನರ್ವಸತಿ...

ತೊಟ್ಟಿಲಗುರಿ ಸಂತ್ರಸ್ತರ ಪುನರ್ವಸತಿ ಸಮುಚ್ಚಯ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ3 Jan 2016 12:06 AM IST
share
ತೊಟ್ಟಿಲಗುರಿ ಸಂತ್ರಸ್ತರ ಪುನರ್ವಸತಿ ಸಮುಚ್ಚಯ ಉದ್ಘಾಟನೆ

ಮಂಗಳೂರು, ಜ.2: ದ.ಕ. ಜಿಪಂ, ಮಂಗಳೂರು ತಾಪಂ ಹಾಗೂ ಬಜ್ಪೆ ಗ್ರಾಪಂಗಳ ಸಹಭಾಗಿತ್ವದಲ್ಲಿ ಬಜ್ಪೆ ಗ್ರಾಮದ ತೊಟ್ಟಿಲಗುರಿ ಸಂತ್ರಸ್ತರಿಗೆ ಪೊರ್ಕೋಡಿಯಲ್ಲಿ ನಿರ್ಮಿಸಲಾಗಿರುವ ಪುನರ್ವಸತಿ ಸಮುಚ್ಚಯ ಹಾಗೂ ಕುಡಿಯುವ ನೀರಿನ ಟ್ಯಾಂಕ್ ಉದ್ಘಾಟನೆ ಶನಿವಾರ ನಡೆಯಿತು. ಮೀನುಗಾರಿಕಾ ಸಚಿವ ಕೆ.ಅಭಯಚಂದ್ರ ಜೈನ್ ಫಲಾ ನುಭವಿಗಳಿಗೆ ಮನೆಗಳ ಕೀಗಳನ್ನು ಹಸ್ತಾಂತರಿಸಿದರು. ವಸತಿ ಸಮುಚ್ಚಯ ಹಾಗೂ ಕುಡಿಯುವ ನೀರಿನ ಸ್ಥಾವರವನ್ನು ಉದ್ಘಾಟಿಸಿ ಮಾತನಾಡಿದ ಜಿಪಂ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ಫಲಾನುಭವಿಗಳು ಪೊರ್ಕೋಡಿ ಯಲ್ಲಿ ನಿವೇಶನಕ್ಕೆ ಆರಂಭದಲ್ಲಿ ವಿರೋಧ ವ್ಯಕ್ತಪಡಿ ಸಿದ್ದರೂ ಬಳಿಕ ಅವರನ್ನು ಒಪ್ಪಿಸಿ, ಖಾಸಗಿ ಹಾಗೂ ಸರಕಾರಿ ಸಹಭಾಗಿತ್ವದಲ್ಲಿ ಸುಂದರ ಮನೆಗಳೊಂದಿಗೆ ಮಾದರಿ ಕಾಲನಿಯನ್ನು ನಿರ್ಮಿಸಲಾಗಿದೆ ಎಂದರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ಕಾಲನಿಯಲ್ಲಿ ಸೋಲಾರ್ ವಿದ್ಯುತ್ ವ್ಯವಸ್ಥೆಗೆ ಕೆಐಒಸಿಎಲ್ ಮುಂದಾಗುವಂತೆ ಮನವಿ ಮಾಡಿದರಲ್ಲದೆ, ಕಾಲನಿಯ ಸುತ್ತಮುತ್ತ ಸ್ವಚ್ಛತೆಗಾಗಿ 1 ಲಕ್ಷ ರೂ. ಅನುದಾನ ನೀಡುವ ಭರವಸೆ ನೀಡಿದರು. ಕೆಐಒಸಿಎಲ್ ಅಧ್ಯಕ್ಷ ಮಲಯ ಚಟರ್ಜಿ, ಜನರಲ್ ಮ್ಯಾನೇಜರ್ ಭೋಬ್‌ರಾಜ್ ಜೆಹ್ರನ್, ಜಿಪಂ ಸ್ಥಾಯಿ ಸಮಿತಿಯ ಅಧ್ಯಕ್ಷೆ ಮೀನಾಕ್ಷಿ, ಮಂಗಳೂರು ತಾಪಂ ಅಧ್ಯಕ್ಷೆ ರಜನಿ, ಜಿಪಂ ಯೋಜನಾ ನಿರ್ದೇಶಕ ಲೋಕೇಶ್, ಬಜ್ಪೆ ಗ್ರಾಪಂ ಅಧ್ಯಕ್ಷೆ ರೋಸಿ ಮಥಾಯಿಸ್, ಉಪಾಧ್ಯಕ್ಷ ಮುಹಮ್ಮದ್ ಶರೀಫ್, ಮೆಸ್ಕಾಂ ಕಾರ್ಯ ನಿರ್ವಾಹಕ ಅಭಿಯಂತರ ಲೋರ್ದು ಸ್ವಾಮಿ, ಎಂಜಿನಿಯರ್ ಪ್ರಭಾಕರ್, ದಲಿತ ಮುಖಂಡ ಚಂದಪ್ಪ, ಫಲಾನುಭವಿ ಸುಜಾತಾ ಉಪಸ್ಥಿತರಿದ್ದರು.
ತಾಪಂ ಇಒ ಗೋಪಾಲಕೃಷ್ಣ ಭಟ್ ಸ್ವಾಗತಿಸಿದರು. ಜಿಪಂ ಉಪ ಕಾರ್ಯದರ್ಶಿ ಎನ್.ಆರ್.ಉಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮನೆ ನಿರ್ಮಾಣಕ್ಕೆ ಸಹಕರಿಸಿದವರನ್ನು ಈ ಸಂದರ್ಭ ಸನ್ಮಾನಿಸಲಾಯಿತು.
 ತೊಟ್ಟಿಲಗುರಿಯಲ್ಲಿದ್ದ 18 ಕುಟುಂಬಗಳಲ್ಲಿ 15ಕ್ಕೆ ಪೊರ್ಕೋಡಿ ಪುನರ್ವಸತಿ ಕಾಲನಿಯಲ್ಲಿ ಮನೆ ನಿರ್ಮಾ ಣವಾಗಿದ್ದು, ಇನ್ನುಳಿದ ಮೂರು ಕುಟುಂಬಗಳಲ್ಲಿ ಎರಡು ಕುಟುಂಬಗಳು ಇಲ್ಲಿಗೆ ಬರಲು ನಿರಾಕರಿಸಿವೆ. ಮತ್ತೊಂದು ಕುಟುಂಬದಲ್ಲಿ ವೃದ್ಧೆಯೊಬ್ಬರು ಮಾತ್ರ ಇರುವುದರಿಂದ ಅವರು ಬೇರೆ ಮನೆಯಲ್ಲಿ ವಾಸವಾಗಿದ್ದಾರೆ.
ಮಾದರಿ ಪುನರ್ವಸತಿ ಸಮುಚ್ಚಯ
3.50 ಲಕ್ಷ ರೂ. ವೆಚ್ಚದಲ್ಲಿ ವಿವಿಧ ರೀತಿಯ ಅನುದಾನ, ಸಹಾಯಧನ ಹಾಗೂ ಕೊಡುಗೆಗಳ ಮೂಲಕ ನಿರ್ಮಾಣವಾಗಿರುವ ಈ ಪುನರ್ವಸತಿ ಸಮುಚ್ಚಯದ ತಾರಸಿ ಮನೆಗಳು ಟೈಲ್ಸ್ ನೆಲದೊಂದಿಗೆ ಹಾಲ್, ಬೆಡ್‌ರೂಂ, ಅಡುಗೆ ಮನೆ ಹಾಗೂ ಶೌಚಾಲಯ ಮತ್ತು ಬಚ್ಚಲುಮನೆಯನ್ನು ಒಳಗೊಂಡಿದೆ. ಬಜ್ಪೆ ಗ್ರಾಮದ ಪೊರ್ಕೋಡಿಯಲ್ಲಿ 3.43 ಎಕರೆ ಜಮೀನನ್ನು ಜಿಲ್ಲಾಧಿಕಾರಿಯ ತುರ್ತು ಆದೇಶದ ಮೇರೆಗೆ ಮಂಜೂರಾತಿ ಮಾಡಿಸಿಕೊಂಡು ಗ್ರಾಪಂ ವತಿಯಿಂದ 3.75 ಲಕ್ಷ ರೂ. ವೆಚ್ಚದಲ್ಲಿ ಸಮತಟ್ಟು ಮಾಡಿಸಿ ನಿವೇಶನ ರಚಿಸಿ ಫಲಾನುಭವಿಗಳಿಗೆ ವಿತರಿಸಲಾಗಿದೆ. ಇಲ್ಲಿ 15 ಮನೆಗಳು ಸುವ್ಯವಸ್ಥಿತವಾಗಿ ನಿರ್ಮಾಣವಾಗಿದ್ದು, ಕುಡಿಯುವ ನೀರು ಪೊರೈಕೆಗಾಗಿ ಪೈಪ್‌ಲೈನ್ ವ್ಯವಸ್ಥೆ ಮಾಡಲಾಗಿದೆ. ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪೈಪ್ ಕಾಂಪೋಸ್ಟ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಸುಮಾರು 1.15 ಕೋ.ರೂ. ವೆಚ್ಚದಲ್ಲಿ ಮಾದರಿ ಪುನರ್ವಸತಿ ಸಮುಚ್ಚಯವಾಗಿ ಇದು ರೂಪುಗೊಂಡಿದೆ.

ತಡವಾಗಿಯಾದರೂ ಸಿಕ್ಕಿತು ನೆಮ್ಮದಿ
2013ರ ಜೂನ್ 18ರಂದು ಬಜ್ಪೆ ತೊಟ್ಟಿಲಗುರಿ ಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ನಾಲ್ವರು ಮೃತ ಪಟ್ಟಿದ್ದಲ್ಲದೆ, 18 ಕುಟುಂಬಗಳು ನಿರ್ವಸಿತ ವಾಗಿತ್ತು. ಮೊದಲೇ ತೀರಾ ಸಂಕಷ್ಟ ಪರಿಸ್ಥಿತಿಯಲ್ಲಿ ಜೀವಿಸುತ್ತಿದ್ದ ಆ ಕುಟುಂಬಗಳು ಆ ಅವಘಡದ ಬಳಿಕ 3 ವರ್ಷಗಳ ಕಾಲ ಒಂದೇ ಶೌಚಾಲಯ, ಹೆಣ್ಣು ಮಕ್ಕಳು ಬಟ್ಟೆ ಬದಲಾಯಿಸಲು, ಸ್ನಾನ ಮಾಡಲು ಪರದಾಡುವ ಪರಿಸ್ಥಿತಿಯಲ್ಲಿ ಜೀವಿಸ ಬೇಕಾಗಿತ್ತು. ಇದೀಗ ಸ್ವಂತ ಹಾಗೂ ಸುಂದರವಾದ ಮನೆಗಳು ನಿರ್ಮಾಣವಾಗಿರುವುದು ನೆಮ್ಮದಿ ದೊರಕಿದಂತಾಗಿದೆ.
- ಬಜ್ಪೆ ಗ್ರಾಪಂ ಸದಸ್ಯೆ ಲಲಿತಾ

ನಮಗೆ ಇದೀಗ ಮನೆ, ಕುಡಿಯುವ ನೀರು, ವಿದ್ಯುತ್ ಸೌಲಭ್ಯ ಸರಕಾರದಿಂದ ದೊರೆತಿವೆ. ಆದರೆ ಇಲ್ಲಿನ ಕಚ್ಚಾ ರಸ್ತೆಯಲ್ಲಿ ಮಳೆಗಾಲದಲ್ಲಿ ಸಂಚರಿಸಲು ಕಷ್ಟಕರವಾಗಬಹುದು. ಅದಕ್ಕೆ ಡಾಮರು ಅಥವಾ ಕಾಂಕ್ರಿಟ್ ಹಾಕಿಸಿ ಸುವ್ಯವ ಸ್ಥಿತ ಗೊಳಿಸಬೇಕೆಂಬುದು ನಮ್ಮ ಬೇಡಿಕೆ. ಅಲ್ಲದೆ ತೊಟ್ಟಿಲಗುರಿಯಲ್ಲಿರುವ ಇನ್ನೆರಡು ಕುಟುಂಬ ಗಳನ್ನು ಒಕ್ಕಲೆಬ್ಬಿಸಿ, ಪೊರ್ಕೋಡಿಗೆ ಸ್ಥಳಾಂತರಿ ಸಬೇಕು.
 - ಸುಜಾತಾ, ಫಲಾನುಭವಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X