Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಫ್ಝಲ್ ಗುರು ನೇಣಿಗೆ ಪ್ರತಿಕಾರವಾಗಿ...

ಅಫ್ಝಲ್ ಗುರು ನೇಣಿಗೆ ಪ್ರತಿಕಾರವಾಗಿ ಉಗ್ರರ ದಾಳಿ

ವಾರ್ತಾಭಾರತಿವಾರ್ತಾಭಾರತಿ3 Jan 2016 10:16 AM IST
share
ಅಫ್ಝಲ್ ಗುರು ನೇಣಿಗೆ ಪ್ರತಿಕಾರವಾಗಿ ಉಗ್ರರ ದಾಳಿ

ಪಠಾಣ್‌ಕೋಟ್: ಸಂಸತ್ ಭವನದ ಮೇಲೆ ದಾಳಿಯ ಆರೋಪಿ ಅಫ್ಝಲ್ ಗುರುವಿಗೆ ಮರಣ ದಂಡನೆ ವಿಧಿಸಿ ನೇಣುಗಂಭಕ್ಕೆ ಏರಿಸಿರುವುದಕ್ಕೆ ಪ್ರತಿಕಾರ ತೀರಿಸಲು ಪಠಾಣ್‌ಕೋಟ್‌ನ ವಾಯುನೆಲೆಗೆ ದಾಳಿ ನಡೆಸುತ್ತಿರುವುದಾಗಿ ಪಾಕ್‌ನ ಉಗ್ರರು ಹೇಳಿರುವುದಾಗಿ ಉಗ್ರರಿಂದ ಹಲ್ಲೆಗೊಳಗಾದ ಗುರುದಾಸಪುರ ನಿವಾಸಿ ರಾಜೇಶ್ ವರ್ಮಾ ಹೇಳಿದ್ಧಾರೆ.


 ಪಠಾಣ್‌ಕೋಟ್‌ನಿಂದ ಉಗ್ರರಿಂದ ಅಪಹರಣಕ್ಕೊಳಗಾದ ಮೂವರಲ್ಲಿ ಒಬ್ಬರಾಗಿರುವ ರಾಜೇಶ್ ವರ್ಮಾ ಅವರ ಗಂಟಲನ್ನು ಉಗ್ರರು ಸೀಳಿದ್ದಾರೆ. ಸ್ಥಳೀಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನಡೆಯುತ್ತಿರುವ ರಾಜೇಶ್ ಉಗ್ರರನ್ನು ಹತ್ತಿರದಿಂದ ಕಂಡವರು.


40ರ ಹರೆಯದ ರಾಜೇಶ್ ಮತ್ತು ಪೊಲೀಸ್ ಅಧಿಕಾರಿ ಸಲ್ವಿಂದರ್ ಸಿಂಗ್ ಜ.1ರಂದು ಭಾರತ-ಪಾಕ್ ಗಡಿಯಲ್ಲಿರುವ ಸೈಂಟ್ ಮಝಾರ್‌ಗೆ ಭೇಟಿ ನೀಡಿ ವಾಪಸ್ ಬರುತ್ತಿದ್ದಾಗ ಉಗ್ರರು ಅಪಹರಿಸಿದ್ದರು.


  ನಾವು ಕಾರ್‌ನಲ್ಲಿ ವಾಪಾಸ್ ಬರುತ್ತಿದ್ದಾಗ ಸೇನಾ ಸಮವಸ್ತ್ರ ಧರಿಸಿದ್ದ ನಾಲ್ವರು ನಮ್ಮ ಕಾರನ್ನು ಅಡ್ಡಗಟ್ಟಿದರು. ವಾಹನದೊಳಕ್ಕೆ ನುಗ್ಗಿದ ನಾಲ್ವರು ನಮ್ಮನ್ನು ಹಗ್ಗದಿಂದ ಕಟ್ಟಿ ಹಾಕಿದರು’’ ಎಂದು ಅವರು ತಮಗಾದ ಅನುಭವವನ್ನು ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.

‘‘ಉರ್ದು ಮಾತನಾಡುತ್ತಿದ್ದ ಅವರಲ್ಲಿ ರೈಫಲ್, ಗ್ರೆನೇಡ್ ಜೊತೆಗೆ ಜಿಪಿಎಸ್ ನೇವಿಗೇಶನ್ ಸಿಸ್ಟಮ್ ಇತ್ತು. ನೀವು ಅಫ್ಝಲ್ ಗುರುವನ್ನು ಕೊಂದಿರುವಿರಿ. ಅದಕ್ಕಾಗಿ ಪ್ರತಿಕಾರ ತೀರಿಸುತ್ತಿರುವುದಾಗಿ ಹೇಳುತ್ತಾ ರೈಫಲ್‌ನ ತುದಿಯಿಂದ ನಮ್ಮ ಮೇಲೆ ಹಲ್ಲೆ ನಡೆಸಿದರು.’’
 

ಕಾರು 30 ಕಿ.ಮೀ ದೂರಕ್ಕೆ ತಲುಪುವಷ್ಟರಲ್ಲಿ ಪೊಲೀಸ್ ಅಧಿಕಾರಿ ಹಾಗೂ ಇನ್ನೊಬ್ಬರನ್ನು ಕಾರ್‌ನಿಂದ ಹೊರದಬ್ಬಿದರು. ಆದರೆ ನನ್ನನ್ನು ಕರೆದೊಯ್ದು ತೇಜ್‌ಪುರ ತಲುಪುಷ್ಟರಲ್ಲಿ ನನ್ನ ಗಂಟಲು ಕೊಯ್ದರು. ವಾಯುನೆಲೆ ಪ್ರವೇಶಿಸುವ ಯೋಜನೆ ರೂಪಿಸಿದ್ದ ಅವರು, ನನ್ನನ್ನು ಕಾರ್‌ನಲ್ಲಿ ಬಿಟ್ಟು ಪರಾರಿಯಾದರು.

‘‘ರಕ್ತ ಸುರಿಯುತ್ತಿದ್ದ ಜಾಗಕ್ಕೆ ಗಾಯಕ್ಕೆ ಬಟ್ಟೆ ಕಟ್ಟಿ ಅಲ್ಲಿಂದ ಓಡಿ ಹೋಗಿ ಗುರುದ್ವಾರ ತಲುಪಿದೆ. ಬಳಿಕ ದೂರವಾಣಿ ಮೂಲಕ ಸಂಬಂಧಿಕರಿಗೆ ಮಾಹಿತಿ ನೀಡಿದೆ. ಅವರು ಕೂಡಲೇ ಧಾವಿಸಿ ಬಂದು ನನ್ನನ್ನು ಆಸ್ಪತ್ರೆಗೆ ದಾಖಲಿಸಿದರು.’’

ಭಯೋತ್ಪಾಕರು ತನ್ನ ಮುಂದೆ ಹೇಳಿದ ಎಲ್ಲವನ್ನು ಗುಪ್ತಚರ ಇಲಾಖೆ ಮತ್ತು ಪೊಲೀಸರಿಗೆ ತಿಳಿಸಿರುವುದಾಗಿ ರಾಜೇಶ್ ವರ್ಮ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X