Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಫೆಲೆಸ್ತೀನಿಯರಿಗೆ ಯಹೂದಿಗಳಿಂದ ಮುಕ್ತಿ...

‘ಫೆಲೆಸ್ತೀನಿಯರಿಗೆ ಯಹೂದಿಗಳಿಂದ ಮುಕ್ತಿ ಸಿಗುವವರೆಗೂ ನಾವು ಸ್ವತಂತ್ರರಲ್ಲ’

ವಾರ್ತಾಭಾರತಿವಾರ್ತಾಭಾರತಿ3 Jan 2016 11:03 PM IST
share


ಲೇಖಕಿ ನೇಮಿಚಂದ್ರರ ‘ಯಾದ್‌ವಶೇಮ್’ ಪುಸ್ತಕದ ಓದು ಕಾರ್ಯಕ್ರಮ;

ಬೆಂಗಳೂರು, ಜ.3: ಯಹೂದಿಗಳ ಆಕ್ರಮಣ ಮೂರನೆ ಮಹಾಯುದ್ಧವನ್ನು ಪ್ರತಿನಿಧಿಸುತ್ತಿದೆ. ಫೆಲೆಸ್ತೀನಿಯರಿಗೆ ಯಹೂದಿಗಳಿಂದ ಮುಕ್ತಿ ಸಿಗುವವರೆಗೂ ನಾವು ಎಂದಿಗೂ ಸ್ವತಂತ್ರರಲ್ಲ. ಹೀಗಾಗಿ ಫೆಲೆಸ್ತೀನಿಯರ ರಕ್ಷಣೆಗೆ ಭ್ರಾತೃತ್ವ ರಾಷ್ಟ್ರಗಳು ಧ್ವನಿಗೂಡಿಸಬೇಕು ಎಂದು ಸಾಹಿತಿ ಲಕ್ಷ್ಮೀಪತಿ ಕೋಲಾರ ಹೇಳಿದರು.
    ಕರ್ನಾಟಕ ಲೇಖಕಿಯರ ಸಂಘ ಮತ್ತು ಸಮುದಾಯ ಸಂಘಟನೆ ರವಿವಾರ ನಗರದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ನ ಸೇತು ಸಭಾಂಗಣದಲ್ಲಿ ಆಯೋಜಿಸಿದ್ದ ಫೆಲೆಸ್ತೀನಿ ಕಾವ್ಯ ಮತ್ತು ಲೇಖಕಿ ನೇಮಿಚಂದ್ರರ ‘ಯಾದ್‌ವಶೇಮ್’ ಪುಸ್ತಕದ ಓದು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇಸ್ರೇಲ್‌ನ ಯಹೂದಿಗಳು ನಡೆಸುತ್ತಿರುವ ನಿರಂತರ ದಾಳಿಯಿಂದ ಫೆಲೆಸ್ತೀನಿಯರಲ್ಲಿ ಶೇ.63ರಷ್ಟು ಮಂದಿ ಜನಸಾಮಾನ್ಯರು ಬಲಿಯಾಗಿದ್ದಾರೆ. ಇನ್ನುಳಿದ ನಾಗರಿಕರಿಗೆ ರಕ್ಷಣೆ ನೀಡಲು ಭಾರತ ಮತ್ತು ಇತರ ದೇಶಗಳು ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.
  ವಿಶ್ವಸಂಸ್ಥೆ ನೀಡಿರುವ ಮಾಹಿತಿ ಪ್ರಕಾರ ಇಸ್ರೇಲ್‌ನ ಯಹೂದಿಗಳ ಆಕ್ರಮಣ ಮತ್ತು ನಿರಂತರ ದಾಳಿಯಿಂದ ಫೆಲೆಸ್ತೀನಿಯರಲ್ಲಿ ಶೇ.63 ಮಂದಿ ಬಲಿಯಾಗಿದ್ದಾರೆ. ಇಲ್ಲಿ ನಡೆಯುತ್ತಿರುವ ಪೈಶಾಚಿಕ ಕೃತ್ಯಗಳನ್ನು ಹೇಳತೀರದಂತಾಗಿದೆ. ಬರ್ಬರ ಕೊಲೆ, ಹಲ್ಲೆ, ಅತ್ಯಾಚಾರಗಳಿಗೆ ಮಿತಿಯೇ ಇಲ್ಲದಂತಾಗಿದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದರು.
     ಯಹೂದಿಗಳ ದಾಳಿಯಿಂದ ಇಲ್ಲಿನ ನಾಗರಿಕರು ದಿನ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಇಲ್ಲಿ ಯುದ್ಧದ ನೆಪದಲ್ಲಿ ನರಮೇಧ ನಡೆಯುತ್ತಿದೆ ಎಂದು ನೋವಿನಿಂದ ನುಡಿದ ಅವರು, ಮಕ್ಕಳು, ಮಹಿಳೆಯರು, ವೃದ್ಧರನ್ನು ಗುರಿಯಾಗಿಸಿ ಯಹೂದಿಗಳು ತಮ್ಮ ಪೈಶಾಚಿಕ ಕೃತ್ಯಗಳನ್ನು ನಡೆಸುತ್ತಿದ್ದಾರೆ ಎಂದು ಅಲ್ಲಿನ ಬೀಕರ, ಭೀಭತ್ಸ, ಘಟನೆಗಳ ಘೋರ ಚಿತ್ರಣವನ್ನು ಬಿಚ್ಚಿಟ್ಟರು.
  ಇಲ್ಲಿನ ನಾಗರಿಕರಿಗೆ ಆಹಾರ, ಔಷಧಿ ಸೇರಿದಂತೆ ದಿನ ನಿತ್ಯ ಬಳಕೆ ಪದಾರ್ಥಗಳು ಪೂರೈಕೆಯಾಗುತ್ತಿಲ್ಲ. ಇದರಿಂದಾಗಿ ಫೆಲೆಸ್ತೀನಿಯರ ಜೀವನ ದುಸ್ತರವಾಗಿದೆ. ಫೆಲೆಸ್ತೀನಿಯರ ಮೇಲೆ ನಡೆಯುತ್ತಿರುವ ಇಸ್ರೇಲ್ ದಾಳಿಯನ್ನು ನಾಟಕ ರೂಪದಲ್ಲಿ ಹೊರತರಲು ತೀರ್ಮಾನಿಸಿದ್ದೇನೆ. ಈ ನಿಟ್ಟಿನಲ್ಲಿ ಸಮಗ್ರ ಮಾಹಿತಿಯನ್ನು ಸಂಗ್ರಹಿಸುತ್ತಿರುವುದಾಗಿ ಲಕ್ಷ್ಮೀಪತಿ ಇದೇ ವೇಳೆ ತಿಳಿಸಿದರು.
  ಕಾರ್ಯಕ್ರಮದಲ್ಲಿ ಜನವಾದಿ ಮಹಿಳಾ ಸಂಘದ ಉಪಾಧ್ಯಕ್ಷೆ ಕೆ.ಎಸ್.ವಿಮಲಾ ಮಾತನಾಡಿ, ಫೆಲೆಸ್ತೀನಿಯರ ಸಹಾಯಕ್ಕೆ ಎಲ್ಲರೂ ಸಹಾಯ ಚಾಚಬೇಕಿದೆ. ಫೆಲೆಸ್ತೀನಿಯರ ರಕ್ಷಣೆಗಾಗಿ ಸಾಹಿತ್ಯ ಕ್ಷೇತ್ರದಲ್ಲಿ ಹೊಸ ಭಾಷ್ಯವನ್ನು ರೂಪಿಸಿಬೇಕಿದೆ ಎಂದರು.
 ಕಾರ್ಯಕ್ರಮದಲ್ಲಿ ಪ್ರೊ.ಮಾಹೆರ್ ಮನ್ಸೂರ್, ಡಾ.ಕೆ.ಶರೀಫಾ, ಸುಬ್ಬು ಹೊಲೆಯಾರ್, ಷಾಕೀರ ಖಾನಂ, ಹಮೀದ್ ಬಾಬರಿ ಸಂಗಡಿಗರು ಫೆಲೆಸ್ತೀನಿ ಕಾವ್ಯವನ್ನು ವಾಚಿಸಿದರು. ಕಾರ್ಯಕ್ರಮದಲ್ಲಿ ಸಾಹಿತಿ ನೇಮಿಚಂದ್ರ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X