Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾಷೆ, ಜಾತಿ ಆಧಾರದಲ್ಲಿ ವೈಮನಸ್ಸುಗಳು...

ಭಾಷೆ, ಜಾತಿ ಆಧಾರದಲ್ಲಿ ವೈಮನಸ್ಸುಗಳು ಸೃಷ್ಟಿ: ಸಚಿವ ಡಿವಿ

ವಾರ್ತಾಭಾರತಿವಾರ್ತಾಭಾರತಿ3 Jan 2016 11:12 PM IST
share
ಭಾಷೆ, ಜಾತಿ ಆಧಾರದಲ್ಲಿ ವೈಮನಸ್ಸುಗಳು ಸೃಷ್ಟಿ: ಸಚಿವ ಡಿವಿ

‘ಕಡಲತಡಿಯ ಸಮಾಗಮ’ ಕಾರ್ಯಕ್ರಮ ಸಮಾರೋಪ
ಬೆಂಗಳೂರು, ಜ.3: ಪ್ರಸ್ತುತ ಸಮಾಜದಲ್ಲಿ ಭಾಷೆ ಹಾಗೂ ಜಾತಿ ಆಧಾರದಲ್ಲಿ ವೈಮನಸ್ಸುಗಳು ಸೃಷ್ಟಿ ಯಾಗುತ್ತಿದ್ದು, ಯುವ ಮನಸ್ಸುಗಳು ಇವುಗಳನ್ನು ಹೋಗಲಾಡಿಸಿ ಸಾಮರಸ್ಯ ಮೂಡಿಸಬೇಕೆಂದು ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
  ರವಿವಾರ ನಗರದಲ್ಲಿ ಬೆಂಗಳೂರು ವಿಭಾಗದ ಬಂಟರ ಸಂಘ ಆಯೋಜಿಸಿದ್ದ ಎರಡು ದಿನಗಳ ‘ಕಡಲತಡಿಯ ಸಮಾಗಮ’ ಕಾರ್ಯಕ್ರಮದ ಸಮಾರೋಪದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
   ದೇಶ ಸಾಮರಸ್ಯ ಹಾಗೂ ಸಮೃದ್ಧಿಯಿಂದಿರಲು ಸಮಾಜ, ಸಂಸ್ಕೃತಿ, ಪ್ರೀತಿ ಹಾಗೂ ವಿಶ್ವಾಸ ನಾಲ್ಕು ಆಧಾರ ಸ್ಥಂಭಗಳಿದ್ದಂತೆ. ಇಡೀ ದೇಶದಲ್ಲಿ ನೂರಾರು ಆಚಾರ-ವಿಚಾರ, ನಡವಳಿಕೆಗಳಿದ್ದರೂ ಈ ನಾಲ್ಕು ಆಧಾರ ಸ್ಥಂಭಗಳು ವೈವಿದ್ಯತೆಯಲ್ಲಿ ಏಕತೆ ಮೆರೆಯುವಂತೆ ಮಾಡುತ್ತಿವೆ. ಆದರೆ, ಎಲ್ಲೋ ಒಂದು ಕಡೆ ಭಾಷೆ ಹಾಗೂ ಜಾತಿ ಆಧಾರದಲ್ಲಿ ವೈಮನಸ್ಯ ಸೃಷ್ಟಿಯಾಗುತ್ತಿವೆ. ಇದನ್ನು ಹೋಗಲಾಡಿಸಲು ಯುವಕರು ಒಂದಾಗಬೇಕು. ಬಂಟರ ಸಂಘದ ಯುವ ವಿಭಾಗ ಇಡೀ ಕಡಲ ತೀರದ ಜನರನ್ನು ಒಗ್ಗೂಡಿಸುವ ಮೂಲಕ ಆ ಕೆಲಸ ಮಾಡಿದೆ ಎಂದು ಶ್ಲಾಘಿಸಿದರು.
ಕರಾವಳಿ ಭಾಗದಲ್ಲಿ ಪ್ರತಿಯೊಂದು ಜಾತಿಗೂ ಬಲಿಷ್ಠವಾದ ಸಂಘ ಸಂಸ್ಥೆಗಳಿವೆ. ಎಲ್ಲ ಸಂಘಗಳೂ ಕರಾವಳಿಯ ಏಕತೆಗೆ ಒತ್ತುಕೊಟ್ಟು ಕಾರ್ಯಕ್ರಮಗಳನ್ನು ಮಾಡುತ್ತವೆ. ಬಂಟರ ಸಂಘವು ಯಕ್ಷಗಾನ, ನಾಗಪೂಜೆ, ಕರಾವಳಿ ಕರ್ನಾಟಕದ ತಿಂಡಿ ತಿನಿಸುಗಳ ಆಹಾರ ಮೇಳ ಇವೆಲ್ಲವನ್ನೂ ಮಾಡುವ ಮೂಲಕ ಇಡೀ ಕರಾವಳಿಯನ್ನು ಒಟ್ಟುಗೂಡಿಸಿದೆ ಎಂದು ಅಭಿನಂದಿಸಿದರು.
ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ರಮಾನಾಥರೈ ಮಾತನಾಡಿದರು.
ಕರಾವಳಿ ಕಲಶ ಪ್ರಶಸ್ತಿ:     ಸಾಹಿತಿ ಬೊಳುವಾರು ಮುಹಮ್ಮದ್ ಕುಂಞಿ, ಜಾನಪದ ಗಾಯಕಿ ಗಿಡಿಗೆರೆ ರಾಮಕ್ಕ, ಚಿತ್ರ ನಿರ್ದೇಶಕ ರಿಚರ್ಡ್ ಕ್ಯಾಸ್ಟಲಿನೋ, ಉದ್ಯಮಿ ಸದಾನಂದ ಮಯ್ಯ, ಸಮಾಜ ಸೇವಕ ಹಾಗೂ ಉದ್ಯಮಿ ಆನಂದ ಕುಂದರ್ ಅವರಿಗೆ ‘ಕರಾವಳಿ ಕಲಶ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
  ಕಾರ್ಯಕ್ರಮದಲ್ಲಿ ನಟ ಪ್ರಕಾಶ್ ರೈ, ಉದ್ಯಮಿ ಕೆ.ಪ್ರಕಾಶ್‌ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಡಾ.ನರೇಶ್‌ಶೆಟ್ಟಿ, ಗೌರವ ಕಾರ್ಯದರ್ಶಿ ಶ್ರೀಧರ ಹೆಗ್ಡೆ, ಬಂಟರ ಸಂಘ ಯುವ ವಿಭಾಗದ ಅಧ್ಯಕ್ಷ ದೀಪ್‌ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X