Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮಂಜ್ರಾಬಾದ್‌ನಿಂದ ಅರಬ್ಬಿಸಮುದ್ರ,...

ಮಂಜ್ರಾಬಾದ್‌ನಿಂದ ಅರಬ್ಬಿಸಮುದ್ರ, ಬಂಗಾಲಕೊಲ್ಲಿಗೆ...

ಮಲ್ನಾಡ್ ಮೆಹಬೂಬ್ಮಲ್ನಾಡ್ ಮೆಹಬೂಬ್3 Jan 2016 11:32 PM IST
share
ಮಂಜ್ರಾಬಾದ್‌ನಿಂದ ಅರಬ್ಬಿಸಮುದ್ರ, ಬಂಗಾಲಕೊಲ್ಲಿಗೆ...

ಮಂಜ್ರಾಬಾದ್ ಕೋಟೆಯ ಪಶ್ಚಿಮಭಾಗದಲ್ಲಿ ಬಿದ್ದ ಮಳೆಯ ನೀರು ಎತ್ತಿನಹಳ್ಳ, ಕೆಂಪು ಹಳ್ಳ, ಎಳನೀರು ನದಿ, ಗುಂಡ್ಯನದಿಯೊಂದಿಗೆ ಕುಮಾರಧಾರಾ ಮೂಲಕ ನೇತ್ರಾವತಿ ಸೇರಿ ಅನಂತರ ಉಳ್ಳಾಲ ಬಳಿ ಅರಬ್ಬಿ ಸಮುದ್ರ ಸೇರುತ್ತದೆ. ಪೂರ್ವಭಾಗದಲ್ಲಿ ಬಿದ್ದ ನೀರು ಹೇಮಾವತಿ ನದಿಯ ಮೂಲಕ ಕಾವೇರಿ ನದಿಗೆ ಸಂಗಮವಾಗಿ ಚೆನ್ನೈ ಬಳಿ ಬಂಗಾಳ ಕೊಲ್ಲಿ ಸೇರುತ್ತದೆ.
ಕೋಟೆಯ ಮೇಲೆ ಬೀಳುವ ನೀರು ಇಬ್ಭಾಗವಾಗಿ ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿ ಸೇರುವ ಜಗತ್ತಿನ ಏಕೈಕ ಕೋಟೆ ಎಂದರೆ ಅದು ಸಕಲೇಶಪುರದ ಮಂಜ್ರಾಬಾದ್ ಕೋಟೆಯಾಗಿದೆ.
  ಸಮುದ್ರಮಟ್ಟದಿಂದ ಮಂಜ್ರಾಬಾದ್ ಕೋಟೆಯು 988 ಮೀಟರ್ ಎತ್ತರದಲ್ಲಿದೆ. ಪಶ್ಚಿಮ ಘಟ್ಟಗಳ ವ್ಯಾಪ್ತಿಗೆ ಒಳ ಪಡುವ ಮಲೇಯಾದ್ರಿ ಪರ್ವತ ಶ್ರೇಣಿಯಲ್ಲಿದ್ದು, ಪೂರ್ವ ಮತ್ತು ಪಶ್ಚಿಮ ಭೂ ಗಡಿ ರೇಖೆಯ ಮಧ್ಯದ ಬೆಟ್ಟದಲ್ಲಿ ನಿರ್ಮಿತವಾಗಿರುವ ಮಂಜ್ರಾಬಾದ್ ಕೋಟೆಯ ಮೇಲೆ ಬೀಳುವ ಮಳೆನೀರು ಪಶ್ಚಿಮ ಮುಖವಾಗಿ ಅರಬ್ಬಿ ಸಮುದ್ರಕ್ಕೂ ಪೂರ್ವ ಮುಖವಾಗಿ ಬಂಗಾಳ ಕೊಲ್ಲಿ ಸೇರುತ್ತದೆ. ಮಂಜ್ರಾಬಾದ್ ಕೋಟೆಯ ಪಶ್ಚಿಮಭಾಗದಲ್ಲಿ ಬಿದ್ದ ಮಳೆಯ ನೀರು ಎತ್ತಿನಹಳ್ಳ, ಕೆಂಪು ಹಳ್ಳ, ಎಳನೀರು ನದಿ, ಗುಂಡ್ಯನದಿಯೊಂದಿಗೆ ಕುಮಾರಧಾರ ಮೂಲಕ ನೇತ್ರಾವತಿ ಸೇರಿ ಅನಂತರ ಉಳ್ಳಾಲ ಬಳಿ ಅರಬ್ಬಿ ಸಮುದ್ರ ಸೇರುತ್ತದೆ. ಪೂರ್ವಭಾಗದಲ್ಲಿ ಬಿದ್ದ ನೀರು ಹೇಮಾವತಿ ನದಿಯ ಮೂಲಕ ಕಾವೇರಿ ನದಿಗೆ ಸಂಗಮವಾಗಿ ಚೆನ್ನೈ ಬಳಿ ಬಂಗಾಳ ಕೊಲ್ಲಿ ಸೇರುತ್ತದೆ.ಂದು ನಿರ್ದಿಷ್ಟ ಪ್ರದೇಶಕ್ಕೆ ಬೀಳುವ ಮಳೆಯ ನೀರು ಎರಡು ಸಾಗರಗಳಿಗೆ ಇಬ್ಭಾಗವಾಗಿ ಹರಿಯುತ್ತದೆ ಎನ್ನುವ ಮಾಹಿತಿಯನ್ನು ಆಧರಿಸಿ ಈ ಬೆಟ್ಟವನ್ನೇ ಕೋಟೆ ಕಟ್ಟಲು ಆಯ್ಕೆ ಮಾಡಿಕೊಳ್ಳಲು ಇದೂ ಒಂದು ಕಾರಣವಾಗಿರಬಹುದು.ೋಟೆಯ ಮೇಲೆ ಬೀಳುವ ನೀರು ಎರಡು ಪ್ರಮುಖ ಸಾಗರಗಳಿಗೆ ಸೇರುವಂತಹ ಏಕೈಕ ಕೋಟೆ ಮಂಜ್ರಾಬಾದ್ ಕೋಟೆಯಾಗಿದ್ದು, ಇದನ್ನು ಮೈಸೂರು ಹುಲಿ ಟಿಪ್ಪು ಸುಲ್ತಾನ್ ನಿರ್ಮಿಸಿದ್ದಾರೆ. ಈ ಬಗ್ಗೆ ಸರಕಾರ ಮತ್ತಷ್ಟು ಮಾಹಿತಿ ಸಂಗ್ರಹಿಸುವ ಅಗತ್ಯವಿದೆ.
ನೀರು ಇಬ್ಭಾಗವಾಗಿ ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿ ಸೇರುವ ಸ್ಥಳವಾಗಿ ಸಕಲೇಶಪುರ ತಾಲೂಕು ಬಿಸ್ಲೆ ಸಮೀಪ ಮಂಕನಹಳ್ಳಿಯಲ್ಲಿ ಬ್ರಿಟಿಷರು ರಿಡ್ಜ್ ನಿರ್ಮಿಸಿರುವ ವೇ ಆಫ್ ಬೆಂಗಾಲ್ ಮತ್ತು ಅರೇಬಿಯನ್ ಸೀ ಎಂಬ ನಾಮ ಫಲಕವನ್ನು ನೋಡಬಹುದಾಗಿದೆ.
ಸಕಲೇಶಪುರಕ್ಕೆ ಹತ್ತಿರವಾಗಿ ಕಂಡುಬರುವ ಪ್ರದೇಶ ವೆಂದರೆ 5 ಕಿ.ಮೀ. ದೂರದಲ್ಲಿರುವ ದೋಣಿಗಾಲ್ ಸಮೀಪದ ಮಂಜ್ರಾಬಾದ್ ದರ್ಗಾದ ಮುಂಭಾಗವಾಗಿದೆ.
ದರ್ಗಾದ ಕಾಣಿಕೆ ಹುಂಡಿ ಮುಂಭಾಗದ ಬೆಂಗಳೂರು ಮತ್ತು ಮಂಗಳೂರು ಹೆದ್ದಾರಿ ಮೇಲೆ ಬೀಳುವ ನೀರು ಇಬ್ಭಾಗವಾಗಿ ಅರಬ್ಬಿ ಸಮುದ್ರ ಮತ್ತು ಹಿಂದೂ ಮಹಾಸಾಗರಕ್ಕೆ ಸೇರುತ್ತದೆ.


ರುದ್ರ ರಮಣೀಯ ಸೂರ್ಯೋದಯ ಮತ್ತು ಸೂರ್ಯಾಸ್ತ:
ಮಂಜ್ರಾಬಾದ್ ಕೋಟೆಯ ಮೇಲೆ ಸೂರ್ಯೋದಯ ಮತ್ತು ಸೂರ್ಯಾಸ್ತ ವೀಕ್ಷಣೆ ಒಂದು ರೋಮಾಂಚನ ಅನುಭವವಾಗಿದೆ. ಮುಂಜಾನೆಯ ವೇಳೆ ಕೆಲವೇ ಸಮಯದಲ್ಲ್ಲಿ ಮಂಜು ಕರಗಿ ಕಣ್ಣಿನ ಮುಂದೆ ಪ್ರಕೃತಿ ಸೌಂದರ್ಯದ ರಾಶಿ ತೆರೆದುಕೊಳ್ಳುತ್ತದೆ. ಸಂಜೆಯ ಸೂರ್ಯಾಸ್ತ ಸುಂದರ ಅನುಭವ ನೀಡುತ್ತದೆ.
ದುಃಖಕರ ವಿಚಾರವೆಂದರೆ ಸೂರ್ಯೋದಯ ಮತ್ತು ಸೂರ್ಯಾಸ್ತ ವೀಕ್ಷಣೆಗೆ ಇಲ್ಲಿ ಅವಕಾಶವಿಲ್ಲದಂತಾಗಿದೆ.

share
ಮಲ್ನಾಡ್ ಮೆಹಬೂಬ್
ಮಲ್ನಾಡ್ ಮೆಹಬೂಬ್
Next Story
X