Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸೈಯದ್ ಮುಶ್ತಾಕ್ ಅಲಿ ಟ್ರೋಫಿ: ಕರ್ನಾಟಕ...

ಸೈಯದ್ ಮುಶ್ತಾಕ್ ಅಲಿ ಟ್ರೋಫಿ: ಕರ್ನಾಟಕ ತಂಡಕ್ಕೆ ರೋಚಕ ಜಯ

ವಾರ್ತಾಭಾರತಿವಾರ್ತಾಭಾರತಿ3 Jan 2016 11:43 PM IST
share
ಸೈಯದ್ ಮುಶ್ತಾಕ್ ಅಲಿ ಟ್ರೋಫಿ: ಕರ್ನಾಟಕ ತಂಡಕ್ಕೆ ರೋಚಕ ಜಯ

ಸ್ಟುವರ್ಟ್ ಬಿನ್ನಿ ಆಲ್‌ರೌಂಡ್ ಆಟ

ಕಟಕ್,ಜ.3: ಸೈಯದ್ ಮುಶ್ತಾಕ್ ಅಲಿ ಟ್ರೋಫಿಯ ‘ಡಿ’ ಗುಂಪಿನ ಪಂದ್ಯದಲ್ಲಿ ಕರ್ನಾಟಕ ತಂಡ ಬಲಿಷ್ಠ ಮುಂಬೈ ವಿರುದ್ಧ ಒಂದು ರನ್‌ನಿಂದ ರೋಚಕ ಗೆಲುವು ಸಾಧಿಸಿದೆ. ಇಲ್ಲಿನ ಡಿಆರ್‌ಐಇಎಂಎಸ್ ಗ್ರೌಂಡ್‌ನಲ್ಲಿ ರವಿವಾರ ನಡೆದ ಪಂದ್ಯದಲ್ಲಿ ಗೆಲುವಿಗೆ 163 ರನ್ ಬೆನ್ನಟ್ಟಿದ ಮುಂಬೈ ತಂಡ ಒಂದು ಹಂತದಲ್ಲಿ 14.2 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 111 ರನ್ ಗಳಿಸಿ ಸುಸ್ಥಿತಿಯಲ್ಲಿತ್ತು. ಆದರೆ, ಶಿಸ್ತುಬದ್ಧ ಬೌಲಿಂಗ್ ಸಂಘಟಿಸಿದ ಕರ್ನಾಟಕದ ಬೌಲರ್‌ಗಳು ಮುಂಬೈಯನ್ನು 20 ಓವರ್‌ಗಳಲ್ಲಿ 161 ರನ್‌ಗೆ ಆಲೌಟ್ ಮಾಡಿದರು.

ಮುಂಬೈನ ಪರ ಅಭಿಷೇಕ್ ನಾಯರ್(49) ಅಗ್ರ ಸ್ಕೋರರ್ ಎನಿಸಿಕೊಂಡರು. ಆರಂಭಿಕ ದಾಂಡಿಗ ಶ್ರೇಯಸ್ ಐಯ್ಯರ್(32) ಹಾಗೂ ನಾಯಕ ಆದಿತ್ಯ ತಾರೆ(28) ಉತ್ತಮ ಕಾಣಿಕೆ ನೀಡಿದರೂ ಇದು ತಂಡದ ಗೆಲುವಿಗೆ ಸಾಕಾಗಲಿಲ್ಲ. ಎಡಗೈ ಬೌಲರ್ ಶ್ರೀನಾಥ್ ಅರವಿಂದ್(2-32), ಮಧ್ಯಮ ವೇಗಿ ಸ್ಟುವರ್ಟ್ ಬಿನ್ನಿ(2-20) ಹಾಗೂ ಲೆಗ್ ಸ್ಪಿನ್ನರ್ ಕೆ.ಸಿ. ಕಾರ್ಯಪ್ಪ(2-32) ತಲಾ ಎರಡು ವಿಕೆಟ್‌ಗಳನ್ನು ಕಬಳಿಸಿ ವಿನಯ್ ಕುಮಾರ್ ಪಡೆ ರೋಚಕ ಗೆಲುವು ಸಾಧಿಸಿ ನಾಲ್ಕು ಅಂಕ ಗಳಿಸಲು ಕಾರಣರಾದರು.

 ಕರ್ನಾಟಕ 162ರನ್‌ಗೆ ಆಲೌಟ್: ಇದಕ್ಕೆ ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಲ್ಪಟ್ಟಿದ್ದ ಕರ್ನಾಟಕ ತಂಡ ನಿಗದಿತ 20 ಓವರ್‌ಗಳಲ್ಲಿ 162 ರನ್ ಗಳಿಸಿ ಆಲೌಟಾಗಿತ್ತು. ಆಲ್‌ರೌಂಡರ್ ಸ್ಟುವರ್ಟ್ ಬಿನ್ನಿ(38 ರನ್, 19 ಎಸೆತ, 3 ಬೌಂಡರಿ, 2 ಸಿಕ್ಸರ್) ದೊಡ್ಡ ಕೊಡುಗೆ ನೀಡಿದರು.

ಆರಂಭಿಕ ದಾಂಡಿಗ ಮುಹಮ್ಮದ್ ತಾಹ(37ರನ್, 32 ಎಸೆತ, 4 ಬೌಂಡರಿ, 1 ಸಿ.) ಹಾಗೂ ರಾಬಿನ್ ಉತ್ತಪ್ಪ(30 ರನ್, 25 ಎಸೆತ, 4 ಬೌಂಡರಿ, 1 ಸಿಕ್ಸರ್) ಉಪಯುಕ್ತ ಕೊಡುಗೆ ನೀಡಿದರು.

ವೇಗದ ಬೌಲರ್ ಧವಳ್ ಕುಲಕರ್ಣಿ(3-35) ಹಾಗೂ ಮಧ್ಯಮ ವೇಗಿ ರೋಹನ್ ರಾಜೆ(3-29) ತಲಾ 3 ವಿಕೆಟ್‌ಗಳನ್ನು ಕಬಳಿಸಿದರು.

ಸಂಕ್ಷಿಪ್ತ ಸ್ಕೋರ್

ಕರ್ನಾಟಕ: 20 ಓವರ್‌ಗಳಲ್ಲಿ 162 ರನ್‌ಗೆ ಆಲೌಟ್

(ಸ್ಟುವರ್ಟ್ ಬಿನ್ನಿ 38, ಮುಹಮ್ಮದ್ ತಾಹಾ 37, ಉತ್ತಪ್ಪ 30, ಧವಳ್ ಕುಲಕರ್ಣಿ 3-35, ರೋಹನ್ ರಾಜೆ 3-29)

ಮುಂಬೈ: 20 ಓವರ್‌ಗಳಲ್ಲಿ 161 ರನ್‌ಗೆ ಆಲೌಟ್

(ಅಭಿಷೇಕ್ ನಾಯರ್ 49, ಶ್ರೇಯಸ್ ಐಯ್ಯರ್ 32, ಆದಿತ್ಯ ತಾರೆ 28, ಎಸ್. ಅರವಿಂದ್ 2-32, ಸ್ಟುವರ್ಟ್ ಬಿನ್ನಿ 2-20, ಕೆಸಿ ಕಾರ್ಯಪ್ಪ 2-32)

ಸೈಯದ್ ಮುಶ್ತಾಕ್ ಅಲಿ ಟ್ರೋಫಿ ಟೂರ್ನಿ

ಇತರ ಪಂದ್ಯಗಳ ಫಲಿತಾಂಶ

ನಾಗ್ಪುರ: ಎ ಗುಂಪು, ಬಂಗಾಳದ ವಿರುದ್ಧ ತಮಿಳುನಾಡಿಗೆ 69 ರನ್ ಜಯ

ವಡೋದರ: ಸಿ ಗುಂಪು, ಗೋವಾ ವಿರುದ್ಧ ಮ.ಪ್ರಕ್ಕೆ 7 ವಿಕೆಟ್ ಗೆಲುವು

ನಾಗ್ಪುರ: ಎ ಗುಂಪು, ವಿದರ್ಭ ವಿರುದ್ಧ ಗುಜರಾತ್‌ಗೆ 60 ರನ್ ಜಯ

ಕೊಚ್ಚಿ: ಬಿ ಗುಂಪು, ಜಮ್ಮು-ಕಾಶ್ಮೀರದ ವಿರುದ್ಧ ಪಂಜಾಬ್‌ಗೆ 8 ವಿಕೆಟ್ ಗೆಲುವು

ಕಟಕ್: ಡಿ ಗುಂಪು, ಒಡಿಶಾ ವಿರುದ್ಧ ಉ.ಪ್ರಕ್ಕೆ 32 ರನ್ ಜಯ

ವಡೋದರ: ಸಿ ಗುಂಪು, ಆಂಧ್ರ ವಿರುದ್ಧ ದಿಲ್ಲಿಗೆ 111 ರನ್ ಗೆಲುವು

ವಡೋದರ: ಸಿ ಗುಂಪು: ರೈಲ್ವೇಸ್ ವಿರುದ್ಧ ಬರೋಡಾಕ್ಕೆ 9 ರನ್ ಜಯ

ನಾಗ್ಪುರ: ಎ ಗುಂಪು, ಹಿಮಾಚಲ ಪ್ರದೇಶ ವಿರುದ್ಧ ಹೈದರಾಬಾದ್‌ಗೆ 14 ರನ್ ಗೆಲುವು

ಕೊಚ್ಚಿ: ಬಿ ಗುಂಪು, ತ್ರಿಪುರಾ ವಿರುದ್ಧ ಜಾರ್ಖಂಡ್‌ಗೆ 9 ವಿಕೆಟ್ ಜಯ

ಕೊಚ್ಚಿ: ಬಿ ಗುಂಪು, ರಾಜಸ್ಥಾನದ ವಿರುದ್ಧ ಕೇರಳಕ್ಕೆ 18 ರನ್ ಗೆಲುವು

ಕಟಕ್: ಡಿ ಗುಂಪು, ಸರ್ವಿಸಸ್ ವಿರುದ್ಧ ಮಹಾರಾಷ್ಟ್ರಕ್ಕೆ 31 ರನ್ ಜಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X