Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರೆ ಕಡಿತ ಪರಿಹಾರ ನೀಡಿಕೆ ಆರಂಭಿಸಿ:...

ಕರೆ ಕಡಿತ ಪರಿಹಾರ ನೀಡಿಕೆ ಆರಂಭಿಸಿ: ಟೆಲಿಕಾಂ ಕಂಪೆನಿಗಳಿಗೆ ಟ್ರಾಯ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ3 Jan 2016 11:53 PM IST
share
ಕರೆ ಕಡಿತ ಪರಿಹಾರ ನೀಡಿಕೆ ಆರಂಭಿಸಿ: ಟೆಲಿಕಾಂ ಕಂಪೆನಿಗಳಿಗೆ ಟ್ರಾಯ್ ಸೂಚನೆ

ಹೊಸದಿಲ್ಲಿ, ಜ.3: ಜ.1ರಿಂದ ಜಾರಿಗೊಂಡಿರುವ ಕಾಲ್ ಡ್ರಾಪ್ ಅಥವಾ ಕರೆ ಕಡಿತ ನಿಯಮಾವಳಿಗಳ ಪಾಲನೆಯನ್ನು ಖಚಿತ ಪಡಿಸುವಂತೆ ಟ್ರಾಯ್ ಟೆಲಿಕಾಮ್ ಕಂಪೆನಿಗಳಿಗೆ ಲಿಖಿತ ಸೂಚನೆಯನ್ನು ನೀಡಿದೆ. ಆದರೆ ತಮ್ಮ ಮೊಂಡುತನವನ್ನು ಮುಂದುವರಿಸಿರುವ ಟೆಲಿಕಾಮ್ ಕಂಪೆನಿಗಳು ನ್ಯಾಯಾಲಯವು ಆದೇಶಿಸಿದರೆ ಮಾತ್ರ ತಾವು ಚಂದಾದಾರರಿಗೆ ಕರೆ ಕಡಿತ ಪರಿಹಾರವನ್ನು ಪಾವತಿಸುವುದಾಗಿ ಹೇಳಿವೆ.

2015,ಅ.16ರಂದು ದೂರಸಂಪರ್ಕ ಬಳಕೆದಾರರ ಸಂರಕ್ಷಣೆ ನಿಯಮಾವಳಿಗಳಿಗೆ ತಿದ್ದುಪಡಿಯೊಂದನ್ನು ಹೊರಡಿಸಿರುವ ಟ್ರಾಯ್, ನೆಟ್‌ವರ್ಕ್‌ನಲ್ಲಿನ ತಾಂತ್ರಿಕ ದೋಷಗಳಿಂದಾಗಿ ಕರೆಗಳು ಕಡಿತಗೊಂಡರೆ ಮೊಬೈಲ್ ಸೇವೆಗಳನ್ನು ಒದಗಿಸುವ ಕಂಪೆನಿಗಳಿಂದ ಚಂದಾದಾರರಿಗೆ ಪರಿಹಾರ ನೀಡಿಕೆಯನ್ನು ಕಡ್ಡಾಯಗೊಳಿಸಿರುವ ನಿಯಮವೊಂದನ್ನು ಸೇರಿಸಿದೆ. ಇದರನ್ವಯ ಟೆಲಿಕಾಮ್ ಕಂಪೆನಿಗಳು ಪ್ರತಿ ಕರೆ ಕಡಿತಕ್ಕೆ ಒಂದು ರೂ.ಪರಿಹಾರವನ್ನು ಪಾವತಿಸಬೇಕಾಗುತ್ತದೆ ಮತ್ತು ಇದಕ್ಕೆ ದಿನವೊಂದಕ್ಕೆ ಮೂರು ರೂ.ಗರಿಷ್ಠ ಮಿತಿಯನ್ನು ವಿಧಿಸಲಾಗಿದೆ.

ಈ ನಿಯಮದ ವಿರುದ್ಧ ಟೆಲಿಕಾಮ್ ಕಂಪೆನಿಗಳು ದಿಲ್ಲಿ ಉಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿವೆ. ವಿಷಯವು ಈಗ ವಿಚಾರಣಾಧೀನವಾಗಿದ್ದು, ಚಂದಾದಾರರಿಗೆ ಪರಿಹಾರ ಪಾವತಿಸುವಂತೆ ನ್ಯಾಯಾಲಯವು ನಮಗೆ ಆದೇಶಿಸಿದರೆ ನಾವು ಅದನ್ನು ಪಾಲಿಸುತ್ತೇವೆ ಎಂದು ಟೆಲಿಕಾಮ್ ಕಂಪೆನಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಅಶೋಕ ಸೂದ್ ಅವರು ಸುದ್ದಿಸಂಸ್ಥೆಗೆ ತಿಳಿಸಿದರು. ನ್ಯಾಯಾಲಯವು ನೂತನ ನಿಯಮಕ್ಕೆ ಯಾವುದೇ ತಡೆಯಾಜ್ಞೆಯನ್ನು ನೀಡಿಲ್ಲ ಎನ್ನುವುದು ನಮ್ಮ ಅರಿವಿನಲ್ಲಿದೆ ಎಂದರು.

ಪ್ರಕರಣದ ಮುಂದಿನ ವಿಚಾರಣೆ ದಿನಾಂಕವಾಗಿರುವ ಜ.6ರವರೆಗೆ ಟೆಲಿಕಾಮ್ ಕಂಪೆನಿಗಳ ವಿರುದ್ಧ ತಾನು ಯಾವುದೇ ಬಲವಂತದ ಕ್ರಮವನ್ನು ಜರಗಿಸುವುದಿಲ್ಲ ಎಂದು ಟ್ರಾಯ್ ನ್ಯಾಯಾಲಯಕ್ಕೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X