Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾನ್‌ನಲ್ಲಿ ಸೌದಿ ದೂತಾವಾಸಕ್ಕೆ...

ಇರಾನ್‌ನಲ್ಲಿ ಸೌದಿ ದೂತಾವಾಸಕ್ಕೆ ಪ್ರತಿಭಟನಕಾರರಿಂದ ಮುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ4 Jan 2016 12:31 AM IST
share

ಸೌದಿ ಮರಣದಂಡನೆ ಪ್ರಕರಣ

ಟೆಹರಾನ್, ಜ.3: ಸೌದಿ ಅರೇಬಿಯದಲ್ಲಿ ಶನಿವಾರ ಓರ್ವ ಪ್ರಮುಖ ಶಿಯಾ ವಿದ್ವಾಂಸ ಹಾಗೂ ಇತರ 46 ಮಂದಿಯನ್ನು ಮರಣದಂಡನೆಗೆ ಒಳಪಡಿಸಿರುವುದನ್ನು ಖಂಡಿಸಿ ಟೆಹರಾನ್‌ನಲ್ಲಿರುವ ಸೌದಿ ಅರೇಬಿಯದ ದೂತಾವಾಸ ಹಾಗೂ ಮಶಾದ್‌ನಲ್ಲಿರುವ ಕಾನ್ಸುಲೇಟ್ ಕಚೇರಿಗಳಿಗೆ ರವಿವಾರ ಮುಂಜಾನೆ ಪ್ರತಿಭಟನಕಾರರು ಮುತ್ತಿಗೆ ಹಾಕಿರುವುದಾಗಿ ವರದಿಗಳು ತಿಳಿಸಿವೆ.

ಸೌದಿ ದೂತಾವಾಸಕ್ಕೆ ಮುತ್ತಿಗೆ ಹಾಕಿರುವ ಪ್ರತಿಭಟನಕಾರರನ್ನು ಪೊಲೀಸರು ಚದುರಿಸಿದ್ದು, ರಾಜತಾಂತ್ರಿಕ ಕಚೇರಿಗಳ ಆವರಣಗಳಿಗೆ ಹಾನಿಯುಂಟು ಮಾಡದಂತೆ ಇರಾನ್‌ನ ವಿದೇಶಾಂಗ ಸಚಿವಾಲಯವು ಬಿಡುಗಡೆಗೊಳಿಸಿರುವ ಹೇಳಿಕೆಯೊಂದರಲ್ಲಿ ಪ್ರತಿಭಟನಕಾರರನ್ನು ಕೋರಿದೆ.

ಸೌದಿಯ ದೂತಾವಾಸಕ್ಕೆ ಮುತ್ತಿಗೆ ಹಾಕುವ ಮುನ್ನ ಪ್ರತಿಭಟನಾಕಾರರು ಮಶಾದ್‌ನಲ್ಲಿರುವ ಸೌದಿ ಕಾನ್ಸುಲೇಟ್ ಕಚೇರಿ ಮುಂದೆ ಧರಣಿ ನಡೆಸಿದ್ದರು. ಶಿಯಾ ಮುಖಂಡ ಶೇಕ್ ನಿಮ್ರ್ ಅವರನ್ನು ಮರಣದಂಡನೆಗೊಳಪಡಿಸಿರುವುದನ್ನು ಇರಾನ್‌ನ ವಿದ್ವಾಂಸ ಹಾಗೂ ಸಂಸತ್‌ನ ತಜ್ಞರ ಸಮಿತಿಯ ಸದಸ್ಯ ಆಯತುಲ್ಲಾ ಅಹ್ಮದ್ ಖತಮಿ ಟೀಕಿಸಿದ್ದಾರೆ. ಮರಣದಂಡನೆ ಜಾರಿಗೊಳಿಸಿರುವುದಕ್ಕೆ ಸಂಬಂಧಿಸಿ ಸೌದಿ ಅರೇಬಿಯವು ಸೂಕ್ತ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ ಎಂದವರು ಎಚ್ಚರಿಸಿದ್ದಾರೆ.

ಧಾರ್ಮಿಕ ವಿದ್ವಾಂಸರನ್ನು ಮರಣದಂಡನೆಗೊಳ ಪಡಿಸಿರುವ ಸೌದಿಯ ಕ್ರಮವನ್ನು ಇರಾನ್‌ನ ವಿದೇಶಾಂಗ ಸಚಿವಾಲಯದ ವಕ್ತಾರ ಜಬೀರ್ ಅನ್ಸಾರಿ ತೀವ್ರವಾಗಿ ಖಂಡಿಸಿದ್ದಾರೆ.


40 ಮಂದಿಯ ಬಂಧನ: ಇರಾನ್
ಟೆಹರಾನ್, ಜ.3: ಸೌದಿ ದೂತಾವಾಸಕ್ಕೆ ಮುತ್ತಿಗೆ ಹಾಕಿ ಬೆಂಕಿ ಹಚ್ಚಲು ಪ್ರಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 40 ಮಂದಿ ಪ್ರತಿಭಟನಕಾರರನ್ನು ಬಂಧಿಸಲಾಗಿದೆ ಎಂದು ಇರಾನ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶಂಕಿತರನ್ನು ಗುರುತಿಸಿ ಬಂಧಿಸಲಾಗಿದೆ ಮತ್ತು ಇನ್ನೂ ಹಲವರನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.


ಬಾನ್ ಕಿ ಮೂನ್ ತೀವ್ರ ಅಸಮಾಧಾನ
ವಿಶ್ವಸಂಸ್ಥೆ, ಜ.3: ಸೌದಿ ಅರೇಬಿಯವು ಶನಿವಾರ ಓರ್ವ ಖ್ಯಾತ ಶಿಯಾ ವಿದ್ವಾಂಸ ಹಾಗೂ ಇತರ 46 ಮಂದಿಯನ್ನು ಮರಣದಂಡನೆಗೆ ಒಳಪಡಿಸಿರುವ ಘಟನೆಯ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ‘ತೀವ್ರ ಅಸಮಾಧಾನ’ ವ್ಯಕ್ತಪಡಿಸಿರುವುದಾಗಿ ವರದಿಯೊಂದು ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಭುಗಿಲೆದ್ದಿರುವ ಅಶಾಂತಿ ಹಾಗೂ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಬಾನ್ ಕಿ ಮೂನ್, ಶಾಂತಿ ಹಾಗೂ ಸಂಯಮ ಕಾಯ್ದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಸೌದಿ ಅರೇಬಿಯವು ಶನಿವಾರ ಪ್ರಮುಖ ಶಿಯಾ ವಿದ್ವಾಂಸ ಶೇಖ್ ನಿಮ್ರ್ ಅಲ್ ನಿಮ್ರ್ ಹಾಗೂ ಅಲ್ ಖಾಯಿದಾ ಸದಸ್ಯರೆನ್ನಲಾದ ಇತರ 46 ಮಂದಿಯನ್ನು ಮರಣದಂಡನೆಗೆ ಒಳಪಡಿಸಿತ್ತು. ಈ ಪ್ರಕರಣವು ಮಧ್ಯ ಪ್ರಾಚ್ಯದಾದ್ಯಂತ ಜನಾಂಗೀಯ ಆಕ್ರೋಶಕ್ಕೆ ಕಾರಣವಾಗಿದೆ.

ಶೇಖ್ ನಿಮ್ರ್ ಅಲ್ ನಿಮ್ರ್ ಹಾಗೂ ಇತರರನ್ನು ವಿಚಾರಣೆಗಳ ಬಳಿಕ ಮರಣದಂಡನೆಗೆ ಒಳಪಡಿಸಿರುವ ಪ್ರಕ್ರಿಯೆಯು, ಆರೋಪಗಳ ಸ್ವರೂಪ ಹಾಗೂ ನ್ಯಾಯ ವಿಚಾರಣೆಯ ಸೂಕ್ತತೆಯ ಬಗ್ಗೆ ಆತಂಕಗಳನ್ನು ಮೂಡಿಸಿದೆ’’ ಎಂದು ಬಾನ್ ಕಿ ಮೂನ್ ಅಭಿಪ್ರಾಯಿಸಿರುವುದಾಗಿ ಅವರ ವಕ್ತಾರ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.
  ಶಿಯಾ ಮುಖಂಡ ಹಾಗೂ ಇತರರ ವಿರುದ್ಧ ಪ್ರಕಟಿಸಲಾಗಿದ್ದ ಮರಣದಂಡನೆಯನ್ನು ಕುರಿತು ಸೌದಿ ಮುಖಂಡರನ್ನು ಹಲವು ಸಂದರ್ಭಗಳಲ್ಲಿ ಪ್ರಸ್ತಾಪಿಸಲಾಗಿತ್ತು ಮತ್ತು ಶಿಕ್ಷೆಯನ್ನು ಬದಲಿಸುವಂತೆಯೂ ಕೇಳಿಕೊಳ್ಳಲಾಗಿತ್ತು ಎಂದು ವಕ್ತಾರ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X